ಪ್ರತಿಯೊಬ್ಬ ಭಾರತೀಯನೂ ನಿಮ್ಮನ್ನು ಗೆಳೆಯನಾಗಿ ನೋಡುತ್ತಾರೆ: ಮೋದಿ
ದುಬೈ, ಜುಲೈ 15: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಬುಧಾಬಿಯಲ್ಲಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು.
ಅಬುಧಾಬಿಯಲ್ಲಿರಲು ಮತ್ತು ನಿಮ್ಮನ್ನು ಭೇಟಿಯಾಗಲು ನನಗೆ ಸಂತೋಷವಾಗಿದೆ. ಆತ್ಮೀಯ ಸ್ವಾಗತಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ. ಪ್ರತಿಯೊಬ್ಬ ಭಾರತೀಯನೂ ನಿಮ್ಮನ್ನು ನಿಜವಾದ ಗೆಳೆಯನಾಗಿ ನೋಡುತ್ತಾರೆ ಎಂದು ಪ್ರಧಾನಿ ಮೋದಿ ಯುಎಇ ಅಧ್ಯಕ್ಷರಿಗೆ ತಿಳಿಸಿದರು.
ಭಾರತ-ಯುಎಇ ದ್ವಿಪಕ್ಷೀಯ ವ್ಯಾಪಾರವು ಶೇಕಡಾ 20 ರಷ್ಟು ಬೆಳೆದಿದೆ. ಎರಡೂ ದೇಶಗಳು $ 85 ಶತಕೋಟಿ ವ್ಯಾಪಾರವನ್ನು ಸಾಧಿಸಿವೆ ಮತ್ತು ಶೀಘ್ರದಲ್ಲೇ $ 100 ಶತಕೋಟಿ ಗುರಿಯನ್ನು ಸಾಧಿಸಲಿವೆ ಎಂದು ಪ್ರಧಾನಿ ಹೇಳಿದರು.

ದುಬೈನ ರಾಷ್ಟ್ರಪತಿ ಭವನವಾದ ಕಸ್ರ್-ಅಲ್-ವತಾನ್ಗೆ ಆಗಮಿಸಿದ ಮೋದಿಯವರಿಗೆ ವಿದ್ಯುಕ್ತ ಸ್ವಾಗತ ನೀಡಲಾಯಿತು. ಸ್ವಾಗತಕ್ಕಾಗಿ ಯುಎಇ ಅಧ್ಯಕ್ಷರಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಿ, ನೀವು ನನಗೆ ನೀಡಿದ ಗೌರವ, ಸಹೋದತ್ವವು ತನ್ನ ಸಹೋದರನನ್ನು ಭೇಟಿಯಾದಂತಹ ಬಾಂಧವ್ಯಕ್ಕೆ ಇದಕ್ಕಿಂತ ಬೇರೆ ಪುರಾವೆಗಳಿಲ್ಲ ಎಂದು ಬಣ್ಣಸಿದರು.
ನಾವು (ಭಾರತ-ಯುಎಇ) ಮೂರು ತಿಂಗಳೊಳಗೆ ಐತಿಹಾಸಿಕ ಒಪ್ಪಂದಗಳಿಗೆ ಸಹಿ ಹಾಕಿದ್ದೇವೆ, ಅದು ನಿಮ್ಮ ಸಹಕಾರ ಮತ್ತು ಬದ್ಧತೆಯಿಂದ ಸಾಧ್ಯವಾಗಿದೆ. ನಾನು ಯುಎಇಯಲ್ಲಿ COP-28 ಶೃಂಗಸಭೆಯಲ್ಲಿ ಭಾಗವಹಿಸಲಿದ್ದೇನೆ ಎಂದು ಮೋದಿ ಹೇಳಿದರು.
ಈ ವೇಳೆ ಭಾರತ ಮತ್ತು ಯುಎಇ ಅಧಿಕಾರಿಗಳು ಪ್ರಧಾನಿ ಮೋದಿ ಮತ್ತು ಅಲ್ ನಹ್ಯಾನ್ ಅವರ ಸಮ್ಮುಖದಲ್ಲಿ ಹಲವಾರು ತಿಳುವಳಿಕಾ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡರು. ಈ ವೇಳೆ ನಮ್ಮ ಪಾಲುದಾರಿಕೆಯನ್ನು ಬಲಪಡಿಸಲು ನಾವು ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಉಭಯ ದೇಶಗಳ ಕರೆನ್ಸಿಗಳಲ್ಲಿ ವ್ಯಾಪಾರ ಇತ್ಯರ್ಥಕ್ಕೆ ಸಂಬಂಧಿಸಿದ ಇಂದಿನ ಒಪ್ಪಂದವು ನಮ್ಮ ಬಲವಾದ ಆರ್ಥಿಕ ಸಹಕಾರ ಮತ್ತು ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಹೇಳಿದರು.
ಯುಎಇ ಅಧ್ಯಕ್ಷರೊಂದಿಗಿನ ಭೇಟಿಯ ಮೊದಲು, ಪ್ರಧಾನಿ ಮೋದಿ ಯುಎನ್ ಹವಾಮಾನ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಸುಲ್ತಾನ್ ಅಲ್ ಜಾಬರ್ ಅವರನ್ನು ಭೇಟಿಯಾದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಮುಂಬರುವ COP-28 ಕುರಿತು ಜಾಬರ್ ಪ್ರಧಾನಿಗೆ ವಿವರಿಸಿದರು. ಮಧ್ಯಪ್ರಾಚ್ಯ ರಾಷ್ಟ್ರದ COP-28 ಅಧ್ಯಕ್ಷ ಸ್ಥಾನಕ್ಕೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಿ ಭರವಸೆ ನೀಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications