ಬೆಂಗಳೂರು ಬಾಲಕಿ ಪೂಜಾ ಚಂದ್ರಶೇಖರ್ ಸಂದರ್ಶನ
ಬೆಂಗಳೂರಿನ ಬಾಲಕಿ ಪೂಜಾ ಚಂದ್ರಶೇಖರ್ ಕಳೆದವಾರ ದೇಶಾದ್ಯಂತ ಸುದ್ದಿ ಮಾಡಿದ್ದಳು. ಅಮೆರಿಕದ ಪ್ರತಿಷ್ಠಿತ ಐವಿ ಲೀಗ್ ವಿಶ್ವವಿದ್ಯಾಲಯ ಸೇರಿದಂತೆ 14 ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿದ್ದಳು.
ಪೂಜಾ ಚಂದ್ರಶೇಖರ್ ತಂದೆ-ತಾಯಿ ಬೆಂಗಳೂರಿನವರು. 17 ವರ್ಷದ ಪೂಜಾ ಸದ್ಯ ಥಾಮಸ್ ಜೆಫರ್ಸನ್ ಹೈಸ್ಕೂಲ್ ವಿದ್ಯಾರ್ಥಿನಿ. ಉನ್ನತ ವ್ಯಾಸಂಗಕ್ಕಾಗಿ ಐವಿ ಲೀಗ್ನ 8 ವಿಶ್ವವಿದ್ಯಾಲಯ ಸೇರಿದಂತೆ 14 ಪ್ರತಿಷ್ಠಿತ ವಿವಿಗಳಲ್ಲಿ ಆಕೆ ಪ್ರವೇಶಕ್ಕಾಗಿ ಅರ್ಹತೆ ಪಡೆದಿದ್ದಾಳೆ.

ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಕನಸು ಹೊತ್ತಿರುವ ಪೂಜಾ ಚಂದ್ರಶೇಖರ್ ತಮ್ಮ ಅಧ್ಯಯನ, ಕನಸುಗಳ ಬಗ್ಗೆ ಒನ್ ಇಂಡಿಯಾದ ಜೊತೆ ಮಾತನಾಡಿದ್ದಾರೆ. ಪೂಜಾ ಚಂದ್ರಶೇಖರ್ ಸಂದರ್ಶನದ ವಿವರಗಳು ಇಲ್ಲಿವೆ. [ಅಮೆರಿಕದಲ್ಲಿ ಸಾಧನೆ ಮಾಡಿದ ಬೆಂಗಳೂರು ಬಾಲಕಿ]
ನಿಮ್ಮ ಸಾಧನೆಗೆ ಸ್ಫೂರ್ತಿ ಏನು?
ಬದಲಾವಣೆ ತರಬೇಕು ಎಂಬ ನಂಬಿಕೆಯೊಂದಿಗೆ ನಾನು ಕೆಲಸ ಆರಂಭಿಸುತ್ತೇನೆ. ನಾನು ಮಾಡುವ ಕೆಲಸಗಳು ಸಮಾಜದಲ್ಲಿ ಬದಲಾವಣೆ ತರಬೇಕು ಎಂಬುದು ನನ್ನ ಉದ್ದೇಶವಾಗಿದೆ. ಜನರ ಮಾತನಾಡುವ ರೀತಿಯ ಮೂಲಕವೇ ಅವರು ಪಾರ್ಕಿನ್ಸನ್ ರೋಗದಿಂದ ಬಳುತ್ತಿದ್ದಾರೆಯೇ? ಎಂಬುದನ್ನು ಪತ್ತೆ ಹಚ್ಚುವ ಅಪ್ಲಿಕೇಶನ್ ಸಿದ್ಧಪಡಿಸುವಾಗಲೂ ನನಗೆ ಇದೇ ರೀತಿಯ ನಂಬಿಕೆ ಇತ್ತು. [ಪೂಜಾ ಚಂದ್ರಶೇಖರ್ ಪರಿಚಯ]
14 ವಿಶ್ವವಿದ್ಯಾಲಯಗಳ ಪೈಕಿ ನಿಮ್ಮ ಆಯ್ಕೆ ಯಾವುದು?
ಯಾವ ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಮೇ 1ರ ಬಳಿಕ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದೇನೆ. ಹಾರ್ವಡ್ ಮತ್ತು ಸ್ಟಾನ್ಪೋರ್ಡ್ ವಿವಿಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಚಿಂತಿಸುತ್ತಿದ್ದೇನೆ. ಎರಡೂ ವಿವಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇನೆ.
ಓದು, ಇತರ ಚಟುವಟಿಕೆಗಳಿಗೆ ಸಮಯ ಹೇಗೆ ಸಾಕಾಗುತ್ತದೆ?
ಪ್ರತಿದಿನ ಸಂಜೆ ಮೂರು ಗಂಟೆಗಳ ಅವಧಿಯನ್ನು ಓದು ಮತ್ತು ಹೋಂ ವರ್ಕ್ಗಾಗಿ ಮೀಸಲಾಗಿಟ್ಟಿದ್ದೇನೆ. ಬಾಲಕಿಯರು ವಿಜ್ಞಾನ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗ ಮಾಡಲು ಪ್ರೋತ್ಸಾಹಿಸಲು ಅನುಕೂಲವಾಗುವಂತೆ ಸ್ಥಾಪಿಸಿರುವ ಸ್ವಯಂ ಸೇವಾ ಸಂಸ್ಥೆಯ ಕೆಲಸ ಓದಿನ ಜೊತೆಗೆ ಸಾಗುತ್ತಿದೆ. ಬರವಣಿಗೆ, ಟೆನಿಸ್ ಆಡುವುದು, ಸಂಗೀತ ಕೇಳುವುದು ನನ್ನ ಇತರ ಹವ್ಯಾಸಗಳು. ಬಾಲಿವುಡ್ ಸಿನಿಮಾಗಳೆಂದರೆ ನನಗೆ ಅಚ್ಚುಮೆಚ್ಚು.
ನೀವು ಕಂಡುಹಿಡಿದ ಮೊಬೈಲ್ ಅಪ್ಲಿಕೇಶನ್ ಬಗ್ಗೆ ಹೇಳಿ?
ಇದು ಜನರು ಪಾರ್ಕಿನ್ಸನ್ ರೋಗದಿಂದ ಬಳಲುತ್ತಿದ್ದಾರೆಯೇ? ಎಂಬುದನ್ನು ಪತ್ತೆ ಹಚ್ಚುವ ಅಪ್ಲಿಕೇಶನ್. ಜನರು 10-15 ಸೆಕೆಂಡ್ ಮಾತನಾಡಿದರೆ ಅವರು ರೋಗದಿಂದ ಬಳಲುತ್ತಿದ್ದಾರೆಯೇ ಎಂದು ಶೇ 96ರಷ್ಟು ನಿಖರವಾಗಿ ಪತ್ತೆ ಹೇಳಬಹುದು. ಈ ಅಪ್ಲಿಕೇಶನ್ ಸದ್ಯ ಮಾರುಕಟ್ಟೆಯಲ್ಲಿ ಲಭ್ಯವಿಲ್ಲ. ಮುಂದಿನ ವರ್ಷ ಇದನ್ನು ಡೌನ್ಲೋಡ್ ಮಾಡಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಸಂದರ್ಶನದ ಪೂರ್ಣ ವಿವರ ಓದಿ
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications