Peshawar Blast : ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ: 28 ಸಾವು- 150 ಜನರಿಗೆ ಗಾಯ!
ಪಾಕಿಸ್ತಾನದ ಪೇಶಾವರದ ಮಸೀದಿಯೊಂದರಲ್ಲಿ ಸ್ಟೋಟ ಸಂಭವಿಸಿದ್ದು 28 ಜನ ಸಾವನ್ನಪ್ಪಿದ್ದಾರೆನ್ನಲಾಗುತ್ತಿದೆ.
ಪಾಕಿಸ್ತಾನದ ಪೇಶಾವರದ ಮಸೀದಿಯೊಂದರಲ್ಲಿ ಸ್ಟೋಟ ಸಂಭವಿಸಿದ್ದು 28 ಜನ ಸಾವನ್ನಪ್ಪಿದ್ದಾರೆನ್ನಲಾಗುತ್ತಿದೆ. ಜೊತೆಗೆ 150 ಜನರು ಗಾಯಗೊಂಡಿದ್ದಾರೆ ಎನ್ನುವ ವರದಿಗಳಾಗಿವೆ. ವಿವರಗಳ ಪ್ರಕಾರ, ಜುಹರ್ ಪ್ರಾರ್ಥನೆಯ ನಂತರ ಸುಮಾರು 1.40 ಗಂಟೆಗೆ ಪೊಲೀಸ್ ಲೈನ್ಸ್ ಪ್ರದೇಶದ ಬಳಿ ಸ್ಫೋಟ ಸಂಭವಿಸಿದೆ.
ಸ್ಫೋಟದ ರಭಸಕ್ಕೆ ಮಸೀದಿಯ ಒಂದು ಬದಿ ಕುಸಿದಿದೆ. ಮಸೀದಿಯ ಒಳಗಿನಿಂದ ಚಿತ್ರೀಕರಿಸಲಾದ ವಿಡಿಯೊಗಳು ವೈರಲ್ ಆಗಿವೆ. ವೈರಲ್ ಫೋಟೋದಲ್ಲಿ ನೆಲದ ಮೇಲೆ ಬಿದ್ದಿರುವ ಅವಶೇಷಗಳನ್ನು ಕಾಣಬಹುದು. ವರದಿಗಳ ಪ್ರಕಾರ 'ಆತ್ಮಾಹುತಿ ದಾಳಿಕೋರ' ಪ್ರಾರ್ಥನೆಯ ಸಮಯದಲ್ಲಿ ಮಸೀದಿಯೊಳಗೆ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.

ಆತ್ಮಾಹುತಿ ದಾಳಿಕೋರನು ಪ್ರಾರ್ಥನೆಯ ಸಮಯದಲ್ಲಿ ಮೊದಲ ಸಾಲಿನಲ್ಲಿ ಇದ್ದನು. ಅವನು ಸ್ವತಃ ಸ್ಫೋಟಿಸಿಕೊಂಡಿದ್ದಾನೆ ಎಂದು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಗಾಯಗೊಂಡವರನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸ್ಥಳದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಲಾಗಿದ್ದು, ಆ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
پشاور میں پولیس لائنز کی مسجد میں نماز ظہر کے دوران دھماکے کے نتیجے میں ابھی تک کی اطلاعات کے مطابق 50 افراز زخمی ہیں۔#Peshawar pic.twitter.com/XxRn1dFA7u
— Khurram Iqbal (@khurram143) January 30, 2023
ಜಿಯೋ ನ್ಯೂಸ್ ತನ್ನ ವರದಿಯಲ್ಲಿ ಪ್ರಸ್ತುತ 28 ಸಾವುಗಳು ಮತ್ತು 150 ಜನರು ಗಾಯಗೊಂಡಿರುವ ಸುದ್ದಿ ಇದೆ. ಈ ಬಾಂಬ್ ಸ್ಫೋಟವನ್ನು ಆತ್ಮಹತ್ಯಾ ಬಾಂಬರ್ ಮಾಡಿದ್ದಾನೆ ಎಂದು ಹೇಳಲಾಗಿದೆ. ಭದ್ರತಾ ಅಧಿಕಾರಿಗಳ ಪ್ರಕಾರ, ಆತ್ಮಾಹುತಿ ಬಾಂಬರ್ ಪ್ರಾರ್ಥನೆಯ ಸಮಯದಲ್ಲಿ ಮೊದಲ ಸಾಲಿನಲ್ಲಿದ್ದನು. ಈ ವೇಳೆ ಆತ ಸ್ಫೋಟಕಗಳನ್ನು ಸ್ಫೋಟಿಸಿದ್ದಾನೆ. ಇದರಿಂದ ತೊಂಬತ್ತಕ್ಕೂ ಹೆಚ್ಚು ಝೋರ್ ಆರಾಧಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡವರಲ್ಲಿ ಹೆಚ್ಚಿನವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಮತ್ತೊಂದೆಡೆ, ಈ ಸ್ಫೋಟ ಸಂಭವಿಸಿದ ಸ್ಥಳವು ವಿಐಪಿ ಪ್ರದೇಶ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಂದ ತುಂಬಿ ಹೋಗಿದೆ. ವರದಿಯ ಪ್ರಕಾರ, ಈ ಪ್ರದೇಶವು ಪೊಲೀಸ್ ಲೈನ್ ಪ್ರದೇಶದಲ್ಲಿ ಸಂಭವಿಸಿದೆ, ಆದ್ದರಿಂದ ಮಸೀದಿಯಲ್ಲಿ ಹೆಚ್ಚಿನ ಆರಾಧಕರು ಪೊಲೀಸರಾಗಿದ್ದರು ಎನ್ನಲಾಗಿದೆ. ಸ್ಫೋಟದ ಸಮಯದಲ್ಲಿ, ಮಸೀದಿಯಲ್ಲಿ 150 ಕ್ಕೂ ಹೆಚ್ಚು ಜನರು ಇದ್ದರು ಎಂದು ಅಂದಾಜಿಸಲಾಗಿದೆ. ಸ್ಫೋಟದ ನಂತರ ಮಸೀದಿ ಸಂಪೂರ್ಣವಾಗಿ ಕುಸಿದಿದ್ದು ಅನೇಕ ಜನರು ಅವಶೇಷಗಳಲ್ಲಿ ಸಿಲುಕಿರುವ ವರದಿಗಳು ಸಹ ದಾಖಲಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications