ಭಾರತಕ್ಕೆ ಹಸ್ತಾಂತರ: ಕೊನೆಯ ಆಯ್ಕೆ ಕಳೆದುಕೊಂಡ ನೀರವ್ ಮೋದಿ!
ಲಂಡನ್, ಡಿಸೆಂಬರ್ 15: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿ ಹಾಗೂ ಭಾರತೀಯ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಯುಕೆಯಲ್ಲಿ ಕಾನೂನು ಹೋರಾಟದ ಹಾದಿ ಬಂದ್ ಆಗಿದೆ.
ಯುಕೆ ಸುಪ್ರೀಂ ಕೋರ್ಟ್ನಲ್ಲಿ ಹಸ್ತಾಂತರದ ವಿರುದ್ಧದ ನೀರವ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಆ ಮೂಲಕ ಪ್ರಸ್ತುತ ಲಂಡನ್ನ ವಾಂಡ್ಸ್ವರ್ತ್ ಜೈಲಿನಲ್ಲಿರುವ ನೀರವ್ ಮೋದಿಗೆ ಯುಕೆಯಲ್ಲಿ ಕಾನೂನು ಆಯ್ಕೆಗಳೆಲ್ಲ ಮುಚ್ಚಿದಂತೆ ಆಗಿದೆ.
ಕಳೆದ ತಿಂಗಳು, ನೀರವ್ ಮೋದಿ ಯುಕೆ ಸುಪ್ರೀಂ ಕೋರ್ಟ್ನಲ್ಲಿ ಭಾರತಕ್ಕೆ ತನ್ನನ್ನು ಹಸ್ತಾಂತರ ಮಾಡದಂತೆ ಕೋರಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿದ್ದರು. ಈ ಸಂಬಂಧ ಯುಕೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಎದುರಿಸುತ್ತಿರುವ 51 ವರ್ಷದ ವಜ್ರದ ವ್ಯಾಪಾರಿ ಮಾನಸಿಕ ಆರೋಗ್ಯದ ಆಧಾರದ ಮೇಲೆ ಹಸ್ತಾಂತರದ ವಿರುದ್ಧದ ಮೇಲ್ಮನವಿಯನ್ನು ಸಲ್ಲಿಸಿದ್ದರು.

13,000 ಕೋಟಿ ರೂಪಾಯಿ ಹಗರಣ:
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಹಗರಣ ಬೆಳಕಿಗೆ ಬಂದಾಗ ನೀರವ್ ಮೋದಿ ಭಾರತದಿಂದ ಪರಾರಿಯಾಗಿದ್ದರು. 13,000 ಕೋಟಿ ಪಿಎನ್ಬಿ ಹಗರಣದಲ್ಲಿ ನೀರವ್ ಮೋದಿ ಪ್ರಮುಖ ಆರೋಪಿ ಆಗಿದ್ದರು. ಈ ಪೈಕಿ 7,000 ಕೋಟಿ ಮೌಲ್ಯದ ಪಿಎನ್ ಬಿ ವಂಚನೆ, ಅಕ್ರಮ ಹಣ ವರ್ಗಾವಣೆ ಮತ್ತು ಸಾಕ್ಷ್ಯಗಳನ್ನು ನಾಶಪಡಿಸುವುದು ಮತ್ತು ಸಾಕ್ಷಿಗಳನ್ನು ಬೆದರಿಸುವ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ನೀರವ್ ಮೋದಿಯನ್ನು ಯುಕೆಯಿಂದ ಭಾರತಕ್ಕೆ ಹಸ್ತಾಂತರಿಸುವಂತೆ ಭಾರತೀಯ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಎರಡು ಸೆಟ್ ಕ್ರಿಮಿನಲ್ ಮೊಕದ್ದಮೆಗಳ ವಿಷಯವಾಗಿದೆ. ಜಾರಿ ನಿರ್ದೇಶನಾಲಯ (ED) ಆ ವಂಚನೆಯ ಆದಾಯದ ಲಾಂಡರಿಂಗ್ ಬಗ್ಗೆ ತನಿಖೆ ನಡೆಸುತ್ತಿರುವಾಗ ಸಿಬಿಐ ಪಿಎನ್ ಬಿ ಮೇಲೆ ದೊಡ್ಡ ಪ್ರಮಾಣದ ವಂಚನೆಯನ್ನು ತನಿಖೆ ನಡೆಸುತ್ತಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications