ನಿಮಗೆ ಗೊತ್ತೇ? ಫಜ್ಲುಲ್ಲಾ 2010ರಲ್ಲೂ ಸತ್ತಿದ್ದ..!
ನವದೆಹಲಿ, ಡಿ. 20: ಪೇಶಾವರದಲ್ಲಿ ನೂರಾರು ಮಕ್ಕಳನ್ನು ಅಮಾನುಷವಾಗಿ ಹತ್ಯೆಗೈದಿದ್ದ ತಾಲಿಬಾನ್ ಉಗ್ರರ ಮುಖಂಡ ಮೌಲಾನಾ ಫಜ್ಲುಲ್ಲಾನನ್ನು ಹತ್ಯೆಗೈದಿರುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವಾಲಯ ತನ್ನ ಫೇಸ್ಬುಕ್ ಪುಟದಲ್ಲಿ ಹೇಳಿಕೊಂಡಿದೆ.
ಆದರೆ, ಈ ಕುರಿತು ಅಧಿಕೃತ ಹೇಳಿಕೆ ನೀಡುವ ಮೊದಲು ಸುದ್ದಿಯನ್ನು ದೃಢಪಡಿಸಿಕೊಳ್ಳುವುದಾಗಿ ಪಾಕಿಸ್ತಾನ ಸೈನ್ಯ ಹೇಳಿದೆ. 2010ರಲ್ಲಿಯೂ ಫಜ್ಲುಲ್ಲಾ ಹತ್ಯೆಯಾಗಿದ್ದ ಸುದ್ದಿ ಹಬ್ಬಿದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೈನ್ಯ ಈ ನಿರ್ಧಾರ ಕೈಗೊಂಡಿದೆ.

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಸೇನೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಫಜ್ಲುಲ್ಲಾ ಹತ್ಯೆಯಾಗಿದ್ದಾನೆ. ಈತನ ಜೊತೆಯಲ್ಲಿ 77 ತಾಲಿಬಾನ್ ಉಗ್ರರನ್ನು ಹತ್ಯೆಗೈದಿರುವುದಾಗಿ ಪಾಕಿಸ್ತಾನ ಸೇನೆ ಹೇಳಿಕೊಂಡಿದ್ದರೂ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
ಫೇಸ್ಬುಕ್ ಪುಟದಲ್ಲಿ ಈ ಕುರಿತು ಘೋಷಿಸಲಾಗಿದ್ದರೂ ಪಾಕಿಸ್ತಾನದ ವಕ್ತಾರರು ಹೇಳಿಕೆ ನೀಡಿದ ಮೇಲೆಯೇ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.
2010ರಲ್ಲೂ ಸತ್ತಿದ್ದ ಫಜ್ಲುಲ್ಲಾ : ಫ್ಲಜ್ಲುಲ್ಲಾ ಸತ್ತಿದ್ದಾನೆಂದು 2010ರಲ್ಲೂ ಸುದ್ದಿ ಹರಡಿತ್ತು. ಆತನ ಜೊತೆ ಇನ್ನೂ 6 ಸಹಚರರು ಮೃತಪಟ್ಟಿದ್ದಾರೆ. ಪಾಕಿಸ್ತಾನದ ಗಡಿಗೆ ಹತ್ತಿರದ ಅಫ್ಘಾನಿಸ್ತಾನದ ನುರಿಸ್ತಾನ್ ಪ್ರಾಂತ್ಯದ ಬಾರ್ಗ್ ಮಟಲ್ ಜಿಲ್ಲೆಯಲ್ಲಿ ಫಜ್ಲುಲ್ಲಾ ಹತ್ಯೆಯಾಗಿದ್ದಾನೆ ಎಂದು ಅಫ್ಘಾನ್ ಗಡಿ ಪಡೆಯ ಮುಖ್ಯಸ್ಥ ಮೊಹಮ್ಮದ್ ಜಮಾನ್ ಮಾಮೋಜೈ ಹೇಳಿಕೆ ನೀಡಿದ್ದ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications