ಮಹಾಮಾರಿ ಎಬೋಲಾ ತಡೆಗೆ ಒಬಾಮಾ ಸೂತ್ರ
ವಾಷಿಂಗ್ ಟನ್, ಅ. 16: ಮಹಾಮಾರಿ ಎಬೋಲಾ ವಿರುದ್ಧ ಹೋರಾಡಲು ಯುರೋಪಿನ ರಾಷ್ಟ್ರಗಳ ನಾಯಕರು ಒಂದಾಗಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಕರೆ ನೀಡಿದ್ದಾರೆ. ವಿಡಿಯೋ ಸಂವಾದವೊಂದರಲ್ಲಿ ಮಾತನಾಡಿದ ಒಬಾಮಾ, ಜರ್ಮನಿ, ಫ್ರಾನ್ಸ್, ಇಂಗ್ಲೆಂಡ್, ಇಟಲಿ ರಾಷ್ಟ್ರಗಳು ಈ ಬಗ್ಗೆ ಗಂಭೀರ ಚಿಂತನೆ ಮಾಡಬೇಕಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಆಫ್ರಿಕಾದಲ್ಲಿ ಮಹಾಮಾರಿ ಅನೇಕರನ್ನು ಬಲಿ ತೆಗೆದುಕೊಂಡಿರುವುದು ದುರ್ದೈವ. ವಿಶ್ವಕ್ಕೆ ಇದು ಮಾರಕವಾಗುವಂತೆ ಗೋಚರವಾಗುತ್ತಿದೆ. ಹಾಗಾಗಿ ಎಲ್ಲ ದೇಶಗಳು ರೋಗ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.[ಎಬೋಲಾ ಮಾರಿಗೆ ಅಮೆರಿಕಾದಲ್ಲಿ ಮೊದಲ ಬಲಿ]
ಈ ಬಗ್ಗೆ ಗುರುವಾರ ಮಾಹಿತಿ ನೀಡಿದ ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಜೋಷ್ ಐರ್ನೆಸ್ಟ್, ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕಾಗಿದೆ. ಮಾರಕ ಕಾಯಿಲೆ ವೈರಸ್ ತಾಗಿರುವ ಶಂಕೆ ವ್ಯಕ್ತವಾದರೆ ಅಂಥವರನ್ನು ಸೂಕ್ತ ಚಿಕಿತ್ಸೆಗೆ ಗುರಿಪಡಿಸಬೇಕು. ಆಡಳಿತ ಮತ್ತು ಭದ್ರತೆಯಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ವಿಡಿಯೋ ಸಂವಾದ ಮುಕ್ತಾಯದ ನಂತರ ಒಂದೊಂದೇ ದೇಶಗಳು ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಮುಂದಾಗಿವೆ. ರೋಗ ತಡೆ ಮತ್ತು ಜಾಗೃತಿಗೆ ಸಕಲ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದಾಗಿ ಫ್ರಾನ್ಸ್ ಘೋಷಿಸಿದೆ. ಪಶ್ಚಿಮ ಆಫ್ರಿಕಾ ಭಾಗದಿಂದ ಆಗಮಿಸುವವರನ್ನು ವಿಮಾನ ನಿಲ್ದಾಣದಲ್ಲೇ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅಮೆರಿಕ ತಿಳಿಸಿದೆ.
ಅಲ್ಲದೇ ಒಬಾಮಾ ಜಪಾನ್ ಪ್ರಧಾನಿ ಶಿಂಜೋ ಅಬೇ ಜತೆಗೆ ದೂರವಾಣಿಯಲ್ಲಿ ಮಾತನಾಡಿದ್ದು ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ನ್ಯೂಯಾರ್ಕ್, ನ್ಯೂ ಜೆರ್ಸಿ, ವಾಷಿಂಗ್ ಟನ್, ಚಿಕಾಗೋ ಮತ್ತು ಅಟ್ಲಾಂಟಾ ವಿಮಾನ ನಿಲ್ದಾಣಗಳಲ್ಲಿ ರೋಗ ಪತ್ತೆ ತಪಾಸಣೆ ನಡೆಯುತ್ತಿದೆ.[ಎಬೋಲಾ ಆರ್ಭಟ ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ: ವಿಶ್ವಸಂಸ್ಥೆ]
ಮಾರಕ ಕಾಯಿಲೆಗೆ ಪ್ರಪಂಚದಾದ್ಯಂತ 8,900ಮ ಜನ ತುತ್ತಾಗಿದ್ದಾರೆ. ಲಿಬೇರಿಯಾ, ಸೀಯರಾ ಲಿಯೋನ್ ಮುಂತಾದ ದೇಶಗಳಲ್ಲಿ ರೋಗ ತನ್ನ ರೌದ್ರ ರೂಪ ತೋರಿಸಿ ಅನೇಕರ ಪ್ರಾಣ ಬಲಿಪಡೆದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಹೇಳಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications