ಮಹಾಮಾರಿ ಎಬೋಲಾ ತಡೆಗೆ ಒಬಾಮಾ ಸೂತ್ರ
ವಾಷಿಂಗ್ ಟನ್, ಅ. 16: ಮಹಾಮಾರಿ ಎಬೋಲಾ ವಿರುದ್ಧ ಹೋರಾಡಲು ಯುರೋಪಿನ ರಾಷ್ಟ್ರಗಳ ನಾಯಕರು ಒಂದಾಗಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಕರೆ ನೀಡಿದ್ದಾರೆ. ವಿಡಿಯೋ ಸಂವಾದವೊಂದರಲ್ಲಿ ಮಾತನಾಡಿದ ಒಬಾಮಾ, ಜರ್ಮನಿ, ಫ್ರಾನ್ಸ್, ಇಂಗ್ಲೆಂಡ್, ಇಟಲಿ ರಾಷ್ಟ್ರಗಳು ಈ ಬಗ್ಗೆ ಗಂಭೀರ ಚಿಂತನೆ ಮಾಡಬೇಕಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಆಫ್ರಿಕಾದಲ್ಲಿ ಮಹಾಮಾರಿ ಅನೇಕರನ್ನು ಬಲಿ ತೆಗೆದುಕೊಂಡಿರುವುದು ದುರ್ದೈವ. ವಿಶ್ವಕ್ಕೆ ಇದು ಮಾರಕವಾಗುವಂತೆ ಗೋಚರವಾಗುತ್ತಿದೆ. ಹಾಗಾಗಿ ಎಲ್ಲ ದೇಶಗಳು ರೋಗ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.[ಎಬೋಲಾ ಮಾರಿಗೆ ಅಮೆರಿಕಾದಲ್ಲಿ ಮೊದಲ ಬಲಿ]
ಈ ಬಗ್ಗೆ ಗುರುವಾರ ಮಾಹಿತಿ ನೀಡಿದ ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಜೋಷ್ ಐರ್ನೆಸ್ಟ್, ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕಾಗಿದೆ. ಮಾರಕ ಕಾಯಿಲೆ ವೈರಸ್ ತಾಗಿರುವ ಶಂಕೆ ವ್ಯಕ್ತವಾದರೆ ಅಂಥವರನ್ನು ಸೂಕ್ತ ಚಿಕಿತ್ಸೆಗೆ ಗುರಿಪಡಿಸಬೇಕು. ಆಡಳಿತ ಮತ್ತು ಭದ್ರತೆಯಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ವಿಡಿಯೋ ಸಂವಾದ ಮುಕ್ತಾಯದ ನಂತರ ಒಂದೊಂದೇ ದೇಶಗಳು ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಮುಂದಾಗಿವೆ. ರೋಗ ತಡೆ ಮತ್ತು ಜಾಗೃತಿಗೆ ಸಕಲ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದಾಗಿ ಫ್ರಾನ್ಸ್ ಘೋಷಿಸಿದೆ. ಪಶ್ಚಿಮ ಆಫ್ರಿಕಾ ಭಾಗದಿಂದ ಆಗಮಿಸುವವರನ್ನು ವಿಮಾನ ನಿಲ್ದಾಣದಲ್ಲೇ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅಮೆರಿಕ ತಿಳಿಸಿದೆ.
ಅಲ್ಲದೇ ಒಬಾಮಾ ಜಪಾನ್ ಪ್ರಧಾನಿ ಶಿಂಜೋ ಅಬೇ ಜತೆಗೆ ದೂರವಾಣಿಯಲ್ಲಿ ಮಾತನಾಡಿದ್ದು ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ನ್ಯೂಯಾರ್ಕ್, ನ್ಯೂ ಜೆರ್ಸಿ, ವಾಷಿಂಗ್ ಟನ್, ಚಿಕಾಗೋ ಮತ್ತು ಅಟ್ಲಾಂಟಾ ವಿಮಾನ ನಿಲ್ದಾಣಗಳಲ್ಲಿ ರೋಗ ಪತ್ತೆ ತಪಾಸಣೆ ನಡೆಯುತ್ತಿದೆ.[ಎಬೋಲಾ ಆರ್ಭಟ ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ: ವಿಶ್ವಸಂಸ್ಥೆ]
ಮಾರಕ ಕಾಯಿಲೆಗೆ ಪ್ರಪಂಚದಾದ್ಯಂತ 8,900ಮ ಜನ ತುತ್ತಾಗಿದ್ದಾರೆ. ಲಿಬೇರಿಯಾ, ಸೀಯರಾ ಲಿಯೋನ್ ಮುಂತಾದ ದೇಶಗಳಲ್ಲಿ ರೋಗ ತನ್ನ ರೌದ್ರ ರೂಪ ತೋರಿಸಿ ಅನೇಕರ ಪ್ರಾಣ ಬಲಿಪಡೆದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಹೇಳಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications