ಇಂಡೋನೇಷ್ಯಾದ ಜೈಲಿನಲ್ಲಿ ಅಗ್ನಿ ಅವಘಡ: ಕನಿಷ್ಠ 41 ಕೈದಿಗಳ ಸಾವು
ಜಕಾರ್ತಾ, ಸೆಪ್ಟೆಂಬರ್ 08: ಇಂಡೋನೇಷ್ಯಾದ ಜೈಲಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 41 ಮಂದಿ ಕೈದಿಗಳು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಅವಘಡಕ್ಕೆ ಕಾರಣವನ್ನು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಧಿಕಾರಿಗಳು ಇನ್ನೂ ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಈ ಬ್ಲಾಕ್ ನಲ್ಲಿ ಮಾದಕದ್ರವ್ಯ-ಸಂಬಂಧಿತ ಅಪರಾಧಗಳನ್ನು ಇರಿಸಲಾಗಿದೆ. ಇಲ್ಲಿ ಸುಮಾರು 122 ಜನರನ್ನು ಇರಿಸಲಾಗಿತ್ತು ಎನ್ನಲಾಗಿದೆ. ಈ ಜೈಲಿಗೆ 600 ಮಂದಿಯನ್ನು ಇರಿಸುವ ಸಾಮರ್ಥ್ಯವಿದ್ದು, ಇಲ್ಲಿ 2000 ಮಂದಿಯನ್ನು ಇರಿಸಲಾಗಿದೆ ಎನ್ನಲಾಗಿದೆ.

ಇನ್ನು ಮತ್ತೊಂದು ಮೂಲದ ಪ್ರಕಾರ ಜೈಲಿನ ಅವ್ಯವಸ್ಥೆಯಿಂದ ರೊಚ್ಚಿಗೆದ್ದಿದ್ದ ಕೈದಿಗಳೇ ಜೈಲಿಗೆ ಬೆಂಕಿ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ ಬೆಂಕಿ ಅವಘಡ ವೇಳೆ ಹಲವು ಕೈದಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 41 ಜನರು ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.
ಅಗ್ನಿ ಅವಘಡ ಸಂಭವಿಸಿದ್ದಾಗ ಎಷ್ಟು ಮಂದಿ ಅಲ್ಲಿದ್ದರು ಎನ್ನುವ ಕುರಿತು ಮಾಹಿತಿ ಇನ್ನೂ ಹೊರಬರಬೇಕಿದೆ, ತಂಗೆರಂಗ್ ಜೈಲಿನಲ್ಲಿ ಸುಮಾರು 2 ಸಾವಿರ ಮಂದಿ ಕೈದಿಗಳಿದ್ದಾರೆ.
ಆದರೆ ಆ ಜೈಲಿನಲ್ಲಿ ಕೇವಲ 600 ಮಂದಿ ಕೈದಿಗಳನ್ನಿರಿಸುವಷ್ಟು ಮಾತ್ರ ಕೆಪಾಸಿಟಿ ಇದೆ ಎನ್ನಲಾಗಿದೆ. 41 ಮಂದಿ ಮೃತಪಟ್ಟಿದ್ದು, 8 ಕೈದಿಗಳಿಗೆ ತೀವ್ರ ಗಾಯಗಳಾಗಿವೆ.
ಎಲೆಕ್ಟ್ರಿಕ್ ಶಾಕ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ. 73 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications