ಉಕ್ರೇನ್ ಹೆಲಿಕಾಪ್ಟರ್ ದಾಳಿಗೆ ರಷ್ಯಾದಲ್ಲಿ ಹೊತ್ತಿ ಉರಿದ ತೈಲ ಸಂಗ್ರಹಿಸಿದ ಡಿಪೋ
ಕೀವ್, ಏಪ್ರಿಲ್ 1: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ 37ನೇ ದಿನಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಮೊದಲ ಬಾರಿಗೆ ರಷ್ಯಾದ ಗಡಿಗೆ ನುಗ್ಗಿದ ಉಕ್ರೇನ್ ಸೇನಾಪಡೆಗಳು ಹೆಲಿಕಾಪ್ಟರ್ ಮೂಲಕ ಮೊದಲ ಬಾರಿಗೆ ವೈಮಾನಿಕ ದಾಳಿ ನಡೆಸಿವೆ.
ರಷ್ಯಾದ ಬೆಲ್ಗೆರೊಡ್ ಪ್ರದೇಶದಲ್ಲಿರುವ ತೈಲ ಸಂಗ್ರಹ ಡಿಪೋದ ಮೇಲೆ ಉಕ್ರೇನ್ ಸೇನೆಗಳು ಫೈರಿಂಗ್ ನಡೆಸಿವೆ. ಹೆಲಿಕಾಪ್ಟರ್ ಮೂಲಕ ಗಡಿ ಪ್ರದೇಶಿಸಿ ನಡೆಸಿರುವ ದಾಳಿಯಿಂದ ಇಂಧನ ಸಂಗ್ರಹಿಸಿದ ಡಿಪೋ ಹೊತ್ತಿ ಉರಿದಿದೆ.
1950ರ ಕೋರಿಯನ್ ಯುದ್ಧದ ನಂತರದಲ್ಲಿ ಮೊದಲ ಬಾರಿಗೆ ಬೇರೊಂದು ದೇಶದ ವಾಯುಪಡೆಗಳು ರಷ್ಯಾದ ಗಡಿಯನ್ನು ಪ್ರವೇಶಿಸಿ ದಾಳಿ ನಡೆಸಿರುವುದು ಎಂದು ಹೇಳಲಾಗುತ್ತಿದೆ. ಎಂ-24 ಚಾಪರ್ ಮೂಲಕ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಆಕಾಶದಿಂದ ಬಿದ್ದ ಬೆಂಕಿಯ ಉಂಡೆ:
ಎತ್ತರದಲ್ಲಿ ಉಡಾವಣೆಯಾಗುತ್ತಿದ್ದ ರಾಕೆಟ್ನಿಂದ ಬೆಳಕಿನ ಉಂಡೆಗಳು ಬಿದ್ದಿದ್ದು, ತದನಂತರದಲ್ಲಿ ನೆಲದಲ್ಲಿ ಸ್ಫೋಟ ಸಂಭವಿಸಿದೆ. ಈ ದೃಶ್ಯಗಳು ಇಂಧನ ಸಂಗ್ರಹಿಸಿಟ್ಟಿದ್ದ ಡಿಪೋದ ಭದ್ರತಾ ಕ್ಯಾಮರಾದಲ್ಲಿ ಸೆರೆಯಾಗಿವೆ.
"ಎರಡು ಉಕ್ರೇನಿಯನ್ ಸೇನಾ ಹೆಲಿಕಾಪ್ಟರ್ಗಳು ನಡೆಸಿದ ವಾಯುದಾಳಿಯಿಂದಾಗಿ ಪೆಟ್ರೋಲ್ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಅದು ಕಡಿಮೆ ಎತ್ತರದಲ್ಲಿ ರಷ್ಯಾದ ಪ್ರದೇಶವನ್ನು ಪ್ರವೇಶಿಸಿತು" ಎಂದು ಬೆಲ್ಗೊರೊಡ್ ಪ್ರದೇಶದ ಗವರ್ನರ್ ವ್ಯಾಚೆಸ್ಲಾವ್ ಗ್ಲಾಡ್ಕೊವ್ ಟೆಲಿಗ್ರಾಮ್ನಲ್ಲಿ ಬರೆದಿದ್ದಾರೆ.
ಉಕ್ರೇನ್ ನಡೆಸಿರುವ ದಾಳಿಯಿಂದ ಶೇಖರಣಾ ಘಟಕದಲ್ಲಿದ್ದ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಬೆಲ್ಗೊರೊಡ್ನಲ್ಲಿನ ಇಂಧನ ಡಿಪೋದಲ್ಲಿ ಸಂಭವಿಸಿದ ಭಾರಿ ದಾಳಿಯನ್ನು ಖಚಿತಪಡಿಸಲು ಅಥವಾ ನಿರಾಕರಿಸಲು ಸಾಧ್ಯವಿಲ್ಲ ಎಂದು ಉಕ್ರೇನ್ ಹೇಳಿದೆ.

Recommended Video
ಉಕ್ರೇನ್-ರಷ್ಯಾ ನಡುವಿನ ಯುದ್ಧ:
ಉಕ್ರೇನಿಯನ್ ನಗರವಾದ ಖಾರ್ಕಿವ್ನಿಂದ ಸುಮಾರು 80 ಕಿಲೋಮೀಟರ್ಗಳಷ್ಟು ದೂರದಲ್ಲಿ ಬೆಲ್ಗೊರೊಡ್ ಪ್ರದೇಶವಿದೆ. ಉಕ್ರೇನ್ ಮೇಲೆ ರಷ್ಯಾದ ಸೇನಾ ಕಾರ್ಯಾಚರಣೆ ಆರಂಭವಾಗಿದೆ ಒಂದೂವರೆ ತಿಂಗಳು ಕಳೆದಿದೆ. ಫೆಬ್ರವರಿ 24ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಸಮರ ಸಾರಿದರು. ಅಲ್ಲಿಂದ್ ಇಲ್ಲಿಯವರೆಗೆ ಉಭಯ ರಾಷ್ಟ್ರಗಳ ನಡುವೆ ದಾಳಿ-ಪ್ರತಿದಾಳಿ ನಡೆಯುತ್ತಿವೆ. ಉಕ್ರೇನಿನಲ್ಲಿ 153ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದು, 245 ಮಕ್ಕಳು ಗಾಯಗೊಂಡಿದ್ದಾರೆ. ಎರಡು ರಾಷ್ಟ್ರಗಳ ಮಧ್ಯೆ ಯುದ್ಧ ಆರಂಭವಾಗಿ 37 ದಿನಗಳೇ ಕಳೆದಿವೆ. ಆದರೆ ಈಗ ರಷ್ಯಾ ವಿದೇಶಾಂಗ ಸಚಿವರು ಮಾತ್ರ ನಾವು ಯುದ್ಧ ಮಾಡುತ್ತಿಲ್ಲ ಎನ್ನುತ್ತಿದ್ದಾರೆ.
-
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications