ಉಕ್ರೇನ್ ಹೆಲಿಕಾಪ್ಟರ್ ದಾಳಿಗೆ ರಷ್ಯಾದಲ್ಲಿ ಹೊತ್ತಿ ಉರಿದ ತೈಲ ಸಂಗ್ರಹಿಸಿದ ಡಿಪೋ
ಕೀವ್, ಏಪ್ರಿಲ್ 1: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ 37ನೇ ದಿನಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಮೊದಲ ಬಾರಿಗೆ ರಷ್ಯಾದ ಗಡಿಗೆ ನುಗ್ಗಿದ ಉಕ್ರೇನ್ ಸೇನಾಪಡೆಗಳು ಹೆಲಿಕಾಪ್ಟರ್ ಮೂಲಕ ಮೊದಲ ಬಾರಿಗೆ ವೈಮಾನಿಕ ದಾಳಿ ನಡೆಸಿವೆ.
ರಷ್ಯಾದ ಬೆಲ್ಗೆರೊಡ್ ಪ್ರದೇಶದಲ್ಲಿರುವ ತೈಲ ಸಂಗ್ರಹ ಡಿಪೋದ ಮೇಲೆ ಉಕ್ರೇನ್ ಸೇನೆಗಳು ಫೈರಿಂಗ್ ನಡೆಸಿವೆ. ಹೆಲಿಕಾಪ್ಟರ್ ಮೂಲಕ ಗಡಿ ಪ್ರದೇಶಿಸಿ ನಡೆಸಿರುವ ದಾಳಿಯಿಂದ ಇಂಧನ ಸಂಗ್ರಹಿಸಿದ ಡಿಪೋ ಹೊತ್ತಿ ಉರಿದಿದೆ.
1950ರ ಕೋರಿಯನ್ ಯುದ್ಧದ ನಂತರದಲ್ಲಿ ಮೊದಲ ಬಾರಿಗೆ ಬೇರೊಂದು ದೇಶದ ವಾಯುಪಡೆಗಳು ರಷ್ಯಾದ ಗಡಿಯನ್ನು ಪ್ರವೇಶಿಸಿ ದಾಳಿ ನಡೆಸಿರುವುದು ಎಂದು ಹೇಳಲಾಗುತ್ತಿದೆ. ಎಂ-24 ಚಾಪರ್ ಮೂಲಕ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಆಕಾಶದಿಂದ ಬಿದ್ದ ಬೆಂಕಿಯ ಉಂಡೆ:
ಎತ್ತರದಲ್ಲಿ ಉಡಾವಣೆಯಾಗುತ್ತಿದ್ದ ರಾಕೆಟ್ನಿಂದ ಬೆಳಕಿನ ಉಂಡೆಗಳು ಬಿದ್ದಿದ್ದು, ತದನಂತರದಲ್ಲಿ ನೆಲದಲ್ಲಿ ಸ್ಫೋಟ ಸಂಭವಿಸಿದೆ. ಈ ದೃಶ್ಯಗಳು ಇಂಧನ ಸಂಗ್ರಹಿಸಿಟ್ಟಿದ್ದ ಡಿಪೋದ ಭದ್ರತಾ ಕ್ಯಾಮರಾದಲ್ಲಿ ಸೆರೆಯಾಗಿವೆ.
"ಎರಡು ಉಕ್ರೇನಿಯನ್ ಸೇನಾ ಹೆಲಿಕಾಪ್ಟರ್ಗಳು ನಡೆಸಿದ ವಾಯುದಾಳಿಯಿಂದಾಗಿ ಪೆಟ್ರೋಲ್ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಅದು ಕಡಿಮೆ ಎತ್ತರದಲ್ಲಿ ರಷ್ಯಾದ ಪ್ರದೇಶವನ್ನು ಪ್ರವೇಶಿಸಿತು" ಎಂದು ಬೆಲ್ಗೊರೊಡ್ ಪ್ರದೇಶದ ಗವರ್ನರ್ ವ್ಯಾಚೆಸ್ಲಾವ್ ಗ್ಲಾಡ್ಕೊವ್ ಟೆಲಿಗ್ರಾಮ್ನಲ್ಲಿ ಬರೆದಿದ್ದಾರೆ.
ಉಕ್ರೇನ್ ನಡೆಸಿರುವ ದಾಳಿಯಿಂದ ಶೇಖರಣಾ ಘಟಕದಲ್ಲಿದ್ದ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಬೆಲ್ಗೊರೊಡ್ನಲ್ಲಿನ ಇಂಧನ ಡಿಪೋದಲ್ಲಿ ಸಂಭವಿಸಿದ ಭಾರಿ ದಾಳಿಯನ್ನು ಖಚಿತಪಡಿಸಲು ಅಥವಾ ನಿರಾಕರಿಸಲು ಸಾಧ್ಯವಿಲ್ಲ ಎಂದು ಉಕ್ರೇನ್ ಹೇಳಿದೆ.

Recommended Video
ಉಕ್ರೇನ್-ರಷ್ಯಾ ನಡುವಿನ ಯುದ್ಧ:
ಉಕ್ರೇನಿಯನ್ ನಗರವಾದ ಖಾರ್ಕಿವ್ನಿಂದ ಸುಮಾರು 80 ಕಿಲೋಮೀಟರ್ಗಳಷ್ಟು ದೂರದಲ್ಲಿ ಬೆಲ್ಗೊರೊಡ್ ಪ್ರದೇಶವಿದೆ. ಉಕ್ರೇನ್ ಮೇಲೆ ರಷ್ಯಾದ ಸೇನಾ ಕಾರ್ಯಾಚರಣೆ ಆರಂಭವಾಗಿದೆ ಒಂದೂವರೆ ತಿಂಗಳು ಕಳೆದಿದೆ. ಫೆಬ್ರವರಿ 24ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಸಮರ ಸಾರಿದರು. ಅಲ್ಲಿಂದ್ ಇಲ್ಲಿಯವರೆಗೆ ಉಭಯ ರಾಷ್ಟ್ರಗಳ ನಡುವೆ ದಾಳಿ-ಪ್ರತಿದಾಳಿ ನಡೆಯುತ್ತಿವೆ. ಉಕ್ರೇನಿನಲ್ಲಿ 153ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದು, 245 ಮಕ್ಕಳು ಗಾಯಗೊಂಡಿದ್ದಾರೆ. ಎರಡು ರಾಷ್ಟ್ರಗಳ ಮಧ್ಯೆ ಯುದ್ಧ ಆರಂಭವಾಗಿ 37 ದಿನಗಳೇ ಕಳೆದಿವೆ. ಆದರೆ ಈಗ ರಷ್ಯಾ ವಿದೇಶಾಂಗ ಸಚಿವರು ಮಾತ್ರ ನಾವು ಯುದ್ಧ ಮಾಡುತ್ತಿಲ್ಲ ಎನ್ನುತ್ತಿದ್ದಾರೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications