ಆಸ್ಟ್ರಿಯಾವನ್ನು ಆವರಿಸಿದ ಕೊರೊನಾ: ಮೊದಲೆರೆಡು ಪ್ರಕರಣಗಳು ಪತ್ತೆ
ವಿಯೆನ್ನಾ, ಫೆಬ್ರವರಿ 26: ಆಸ್ಟ್ರಿಯಾದಲ್ಲಿ ಕೊರೊನಾದ ಮೊದಲೆರೆಡು ಪ್ರಕರಣಗಳು ಪತ್ತೆಯಾಗಿವೆ.
ಟ್ಯೋರೊಲ್ ನಲ್ಲಿ ಸುಮಾರು 24 ವರ್ಷದ ಇಬ್ಬರಲ್ಲಿ ಕೊರೊನಾ ಸೋಂಕಿರುವುದು ಖಚಿತವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಇಬ್ಬರು ಸ್ವಯಂಪ್ರೇರಿತರಾಗಿ ವೈದ್ಯಕೀಯ ಕೇಂದ್ರವನ್ನು ಸಂಪರ್ಕಿಸಿ ತಮ್ಮಲ್ಲಿ ಕಂಡುಬರುತ್ತಿರುವ ಲಕ್ಷಣಗಳ ಬಗ್ಗೆ ವಿವರಿಸಿದ್ದರು.
ಅವರು ಜ್ವರದಿಂದ ಬಳಲುತ್ತಿದ್ದು ಅವರ ಸ್ಥಿತಿ ಗಂಭೀರವಾಗಿಲ್ಲ ಎಂದೂ ಹೇಳಲಾಗಿದೆ. ಅವರಿಬ್ಬರನ್ನೂ ಚಿಕಿತ್ಸಾಲಯದಲ್ಲಿ ಪ್ರತ್ಯೇಕವಾಗಿರಿಸಲಾಗಿದ್ದು ಈ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆಗೆ ಪ್ರತ್ಯೇಕ ಕ್ಲಿನಿಕ್ ತೆರೆಯಲಾಗುವುದು.

ಜೊತೆಗೆ ಸೋಂಕಿನ ವಿವರಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಜನರ ಸಂದೇಹಗಳಿಗೆ ಉತ್ತರಿಸಲು ಪ್ರತ್ಯೇಕ ಹಾಟ್ಲೈನ್ ಸಂಖ್ಯೆಯನ್ನೂ ಈಗಾಗಲೇ ತೆರೆಯಲಾಗಿದೆ. ಜೊತೆಗೆ ಜಿಲ್ಲಾ ಆಸ್ಪತ್ರೆಗಳಲ್ಲಿನ ನಿವಾಸಿ ವೈದ್ಯರಿಂದ ಜನರು ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಈಗಾಗಲೇ ಚೀನಾದಲ್ಲಿ ಕೊರೊನಾ(ಕೋವಿಡ್-19) ಸೋಂಕಿನಿಂದ 2 ಸಾವಿರಕ್ಕೂ ಹೆಚ್ಚಿ ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.
ಕೊರೊನಾ ವೈರಸ್ ಭೀತಿಯು ಈಗ ಸ್ಪೇನ್ನ ಮ್ಯಾಡ್ರಿಡ್ನಲ್ಲಿ ಇಡೀ ಹೊಟೇಲ್ವೊಂದನ್ನೇ ನಿಗಾ ಕೇಂದ್ರವನ್ನಾಗಿಸಿದೆ. ಇಲ್ಲಿನ ಟೆನೆರೈಫ್ ಹೊಟೇಲ್ನಲ್ಲಿದ್ದ ಇಟಲಿ ಪ್ರವಾಸಿಗನೊಬ್ಬನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ಹೋಟೆಲ್ನಲ್ಲಿನ ಎಲ್ಲ ಪ್ರವಾಸಿಗರನ್ನೂ ಲಾಕ್ಡೌನ್ ಮಾಡಲಾಗಿದೆ.
ಯಾವೊಬ್ಬರೂ ತಮ್ಮ ಕೊಠಡಿಗಳಿಂದ ಹೊರ ಬರುವಂತಿಲ್ಲ ಎಂದು ಕಟ್ಟಪ್ಪಣೆ ಮಾಡಲಾಗಿದ್ದು, ಒಳಗಿರುವ ಪ್ರವಾಸಿಗರು ಆತಂಕಕ್ಕೊಳಗಾಗಿದ್ದಾರೆ. ಈ ಹೊಟೇಲ್ನಲ್ಲಿ ಒಟ್ಟು 467 ಕೊಠಡಿಗಳಿವೆ.
ಇಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯುವ ವಾರ್ಷಿಕ ಸಾಂಪ್ರದಾಯಿಕ ಉತ್ಸವವೊಂದನ್ನು ಕಣ್ತುಂಬಿಕೊಳ್ಳಲೆಂದು ಭಾರೀ ಸಂಖ್ಯೆಯ ಪ್ರವಾಸಿಗರು ಕೆನರಿ ದ್ವೀಪಕ್ಕೆ ಆಗಮಿಸಿದ್ದು, ಹೊಟೇಲ್ನ ಎಲ್ಲ ಕೊಠಡಿಗಳೂ ಭರ್ತಿಯಾಗಿವೆ. ಹೀಗಾಗಿ, ಕೊರೊನಾ ವ್ಯಾಪಿಸಿರುವ ಸಾಧ್ಯತೆ ಅಧಿಕವಾಗಿದೆ.
-
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ -
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications