Rain..Rain: ಭೀಕರ ಮಳೆ, ಸುಂಟರಗಾಳಿಗೆ ನಲುಗಿದ ಚೀನಾ: 141 ಕಾರ್ಖಾನೆ ನೆಲಸಮ, 5 ಸಾವು
ಚೀನಾ, ಏಪ್ರಿಲ್ 28: ಏಕಾಏಕಿ ಅಪ್ಪಳಿಸಿದ ಸುಂಟರಗಾಳಿ ಚೀನಾ ದೇಶದ ದಕ್ಷಿಣ ಭಾಗವನ್ನು ಅಲ್ಲೋಲ ಕಲ್ಲೋಲ ಮಾಡಿದೆ. ಚೀನಾದ ದಕ್ಷಿಣ ಭಾಗದ ಗುವಾಂಗ್ಝೌನಲ್ಲಿ ಸುಂಟರಗಾಳಿ ಅಪ್ಪಳಿಸಿದ್ದು, ಆಲಿ ಕಲ್ಲು ಸಹಿತ ಭೀಕರ ಮಳೆಯಾಗಿದೆ. ಘಟನೆಯಲ್ಲಿ 5 ಜನರು ಸಾವನ್ನಪ್ಪಿದ್ದು 33ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಹಿಂದೆಯೇ ಗುವಾಂಗ್ಝೌನ ಹಲವು ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಮತ್ತು ಸುಂಟರಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿತ್ತು. ಹೀಗಾಗಿ ಅನೇಕ ಸ್ಥಳಾಂತರಗೊಂಡಿದ್ದರು. ಇನ್ನೂ ಕೆಲವರು ಅಲ್ಲಿಯೇ ಸಿಲುಕಿಕೊಂಡಿದ್ದು, ಹತ್ತಾರು ಜನರು ಕಣ್ಮರೆಯಾಗಿದ್ದಾರೆ.

ಇನ್ನು ಸುಂಟರಗಾಳಿಯ ತೀವ್ರತೆಗೆ ಸಿಕ್ಕಿ 5 ಜನ ಸಾವನ್ನಪ್ಪಿದ್ದು, 33ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಧಾರಾಕಾರ ಮಳೆ ಹಾಗೂ ಭಯಾನಕವಾದ ಗಾಳಿಯಿಂದ ನಗರ ಸೇರಿದಂತೆ ಇತರೆ ಪ್ರದೇಶಗಳಲ್ಲಿ ಭಾರೀ ಹಾನಿಯಾಗಿದೆ. ವಸ್ತುಗಳು ಗಾಳಿಯಲ್ಲಿ ತೂರಿಕೊಂಡು ಹೋಗಿದ್ದು, ಸೆಕೆಂಡಿಗೆ ಗರಿಷ್ಠ 20.6 ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ.
ಚೀನಾ ದೇಶದ ದಕ್ಷಿಣ ಭಾಗಕ್ಕೆ ಮೂರು ಹಂತದಲ್ಲಿ ಸುಂಟರಗಾಳಿ ಅಪ್ಪಳಿಸಲಿದೆ ಎನ್ನುವ ಮಾಹಿತಿ ಇದ್ದು, ಒಂದು ತೀವ್ರ ಗತಿಯಲ್ಲಿದ್ದರೆ, ಮತ್ತೆರಡು ಸಾಧಾರಣಾ ಮಳೆಯೊಂದಿಗೆ ಅಪ್ಪಳಿಸಲಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗುವಾಂಗ್ಝೌನ 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

1951ರ ಏಪ್ರಿಲ್ನಲ್ಲಿ ಚೀನಾದ ಈ ಭಾಗದಲ್ಲಿ ಅತ್ಯಧಿಕ ಮಳೆಯಾಗಿತ್ತು. ಆದರೆ ಈ ಬಾರಿ ಅದನ್ನು ಮೀರಿಸುವ ಮಳೆಯಾಗಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ನನ್ನ ಜೀವನದಲ್ಲಿ ಇಂತಹ ಮಳೆಯನ್ನು ನಾನು ಕಂಡೇ ಇಲ್ಲ, ನನಗಿಂತ ಹಿರಿಯರು ಕೂಡ ಕಂಡಿರಲು ಸಾಧ್ಯವಿಲ್ಲ ಎಂದು 72 ವರ್ಷದ ಸ್ಥಳೀಯರೊಬ್ಬರು ತಿಳಿಸಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications