ಶಾಪಿಂಗ್ ಸೆಂಟರ್ ಗೆ ಡಿಕ್ಕಿ ಹೊಡೆದು ಹೊತ್ತುರಿದ ವಿಮಾನ, ಐವರು ಸಾವು
ಆಸ್ಟ್ರೇಲಿಯಾದ ಮೆಲ್ಬೋರ್ನ್ ಸಮೀಪ ಭೀಕರ ವಿಮಾನ ದುರಂತ ಸಂಭವಿಸಿದೆ. ಕಳೆದ ಮೂವತ್ತು ವರ್ಷದಲ್ಲೇ ದೊಡ್ಡ ಅಪಘಾತ ಇದು ಎಂದು ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ತನಿಖೆಗೆ ಆದೇಶ ನೀಡಲಾಗಿದೆ
ಮೆಲ್ಬೋರ್ನ್, ಫೆಬ್ರವರಿ 21: ಆಸ್ಟ್ರೇಲಿಯಾದ ಮೇಲ್ಬೋರ್ನ್ ಸಮೀಪದ ಎಸೆಂಡಾನ್ ವಿಮಾನ ನಿಲ್ದಾಣದ ಬಳಿ ಚಾರ್ಟರ್ ವಿಮಾನವೊಂದು ಶಾಪಿಂಗ್ ಸೆಂಟರ್ ಗೆ ಅಪ್ಪಳಿಸಿ, ಐವರು ಮೃತಪಟ್ಟ ಘಟನೆ ನಡೆದಿದೆ. ಡಿಎಫ್ ಒ ಸೆಂಟರ್ ಗೆ ಅಪ್ಪಳಿಸಿದ ನಂತರ ವಿಮಾನ ಬೆಂಕಿ ಹೊತ್ತುಕೊಂಡು ಉರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿಕ್ಟೋರಿಯಾ ಅಗ್ನಿಶಾಮಕ ಸೇವೆಯ ಕಮಿಷನರ್ ಕ್ರೆಗ್ ಲ್ಯಾಪ್ಸ್ಲೇ ಪ್ರಕಾರ, ವಿಮಾನದಲ್ಲಿದ್ದ ಯಾರೂ ಬದುಕುಳಿದಿರುವ ಸಾಧ್ಯತೆಗಳಿಲ್ಲ. ವಿಮಾನದಲ್ಲಿದ್ದವರನ್ನು ಹೊರತುಪಡಿಸಿ ಉಳಿದವರಿಗೆ ಏನೂ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಅಮೆರಿಕ ನಾಗರಿಕರೂ ಕೂಡ ಇದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.[ಸಂಪರ್ಕಕ್ಕೆ ಸಿಗದ ಜೆಟ್ ಏರ್ ವೇಸ್ ವಿಮಾನ, ಅನುಮಾನದಲ್ಲಿ ಬೆನ್ನಟ್ಟಿದ ಜರ್ಮನಿ]

ಆದರೆ, ಆಸ್ಟ್ರೇಲಿಯಾದಲ್ಲಿರುವ ಅಮೆರಿಕ ರಾಯಭಾರ ಕಚೇರಿ ವಕ್ತಾರರಾದ ಕ್ಯಾನ್ ಬೆರಾ ಈ ವಿಚಾರವನ್ನು ಖಚಿತಪಡಿಸಿಲ್ಲ. ಮೃತರು ಯಾವ ದೇಶದವರು ಎಂಬುದನ್ನು ಇನ್ನೂ ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ವಿಮಾನವು ಶಾಪಿಂಗ್ ಮಾಲ್ ನ ಹಿಂಭಾಗದಲ್ಲಿ ಡಿಕ್ಕಿಯಾಗಿದೆ.
ಆ ವೇಳೆ ಇಪ್ಪತ್ತು ನೌಕರರು ಸ್ಪಾಟ್ ಲೈಟ್ ಸ್ಟೋರ್ ನಲ್ಲಿದ್ದರು. ಆದರೆ ಯಾರಿಗೂ ಗಾಯಗಳಾಗಿಲ್ಲ ಎಂದು ಅಲ್ಲಿನ ಮ್ಯಾನೇಜರ್ ತಿಳಿಸಿದ್ದು, ಶಾಪಿಂಗ್ ಮಾಲ್ ಮುಚ್ಚಿತ್ತು ಎಂದು ತಿಳಿದುಬಂದಿದೆ. "ಸಿನಿಮಾದಲ್ಲಿ ನೋಡುವ ದೃಶ್ಯದ ಹಾಗೆ ಘಟನೆ ನಡೆದುಹೋಯಿತು. ಸಾಮಾನ್ಯಕ್ಕಿಂತ ತುಂಬ ವೇಗವಾಗಿ ಹಾಗೂ ಕೆಳಭಾಗದಲ್ಲಿ ಬಂದ ವಿಮಾನ ಡಿಕ್ಕಿಯಾಗಿ, ಬೆಂಕಿ ಹೊತ್ತಿಕೊಂಡಿತು" ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.[ದೋಹಾ ಟು ಆಕ್ಲೆಂಡ್: ಇದು ಜಗತ್ತಿನಲ್ಲೇ ಅತಿ ದೂರದ ವಿಮಾನ ಯಾನ]

ಇದೀಗ ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ. ಎಸೆಂಡನ್ ವಿಮಾನ ನಿಲ್ದಾಣ ಹಾಗೂ ಶಾಪಿಂಗ್ ಸೆಂಟರ್ ನ ಮುಚ್ಚಲಾಗಿದೆ. ವಿಚಾರಣೆ ನಡೆಸುತ್ತಿರುವವರು ಸಾಕ್ಷಿ ಕಲೆ ಹಾಕಿದ ನಂತರ ಸಾರ್ವಜನಿಕ ಬಳಕೆಗೆ ಅವಕಾಶ ನೀಡಲಾಗುತ್ತದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications