Taliban Fight: ಪಾಕಿಸ್ತಾನ ಸೈನಿಕರ ಹೆಣ ಕೆಡವಿದ ತಾಲಿಬಾನ್, ಮತ್ತೆ ಜಗಳ ಶುರು!
ಪಾಕಿಸ್ತಾನ & ತಾಲಿಬಾನ್ ನಡುವೆ ಮಾತುಕತೆ ನಡೆಯುವ ಸಮಯದಲ್ಲೇ ಮತ್ತೆ ಜಗಳ ಜೋರು ಜೋರಾಗಿದೆ. ಗಡಿಯಲ್ಲಿ ಎರಡೂ ದೇಶಗಳು ಬಡಿದಾಡಿಕೊಂಡು ದೊಡ್ಡ ಅವಾಂತರ ಸೃಷ್ಟಿಯಾಗಿ ಅಲ್ಲೋಲ & ಕಲ್ಲೋಲ ಎದ್ದಿದೆ. ಇಂತಹ ಸಮಯದಲ್ಲೇ ದಿಢೀರ್ ಅಂತಾ ಈ ಇಬ್ಬರ ನಡುವಿನ ಕಾಳಗ ನಿಲ್ಲಿಸಲು ಮಹತ್ವದ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಶಾಂತಿ ಮಾತುಕತೆ ನಡೆಯುವಾಗ ಕೂಡ ಗಡಿಯಲ್ಲಿ ದೊಡ್ಡ ಗಲಾಟೆ ಶುರುವಾಗಿದೆ.
ಹೌದು, ಅಫ್ಘಾನಿಸ್ತಾನ ಗಡಿ ಸಮೀಪದಲ್ಲಿ ನಡೆದ ಸಂಘರ್ಷದಲ್ಲಿ ಪಾಕಿಸ್ತಾನದ 5 ಸೈನಿಕರು ಸೇರಿ ಒಟ್ಟು 25 ಉಗ್ರರು ಹತ್ಯೆಯಾಗಿದ್ದಾರೆ. ಹೀಗಿದ್ದಾಗ ಇಸ್ತಾಂಬುಲ್ ಸಭೆ ನಡೆಯುತ್ತಿದ್ದು, ಎರಡೂ ದೇಶಗಳ ನಡುವೆ ಕ್ಷಣಕ್ಷಣಕ್ಕೂ ತಿಕ್ಕಾಟ ಜೋರಾಗುತ್ತಿದೆ. ಪಾಕಿಸ್ತಾನದ ಉತ್ತರ ಪಶ್ಚಿಮ ಗಡಿಭಾಗದ ಕುರ್ರಂ ಮತ್ತು ಉತ್ತರ ವಜಿರಿಸ್ತಾನ ಜಿಲ್ಲೆಗಳ ಸುತ್ತಮುತ್ತ ಈ ಜಗಳ ನಡೆದಿದೆ. ಉಗ್ರರು ಅಫ್ಘಾನಿಸ್ತಾನ ಕಡೆಯಿಂದ ಪಾಕಿಸ್ತಾನಕ್ಕೆ ನುಗ್ಗಿದ್ದಾರೆ ಎಂದು ಪಾಕಿಸ್ತಾನ ಆರೋಪ ಮಾಡಿದೆ. ಆದರೆ ಇದರಲ್ಲಿ ಪಾಕಿಸ್ತಾನದ್ದೇ ಕೈವಾಡ ಇದೆ ಎಂದು ತಾಲಿಬಾನ್ ಆರೋಪಿಸಿದೆ. ಈ ಮೂಲಕ ಇಬ್ಬರ ಮಧ್ಯೆ ಭಾರಿ ದೊಡ್ಡ ಗಲಾಟೆ ಇನ್ನೊಮ್ಮೆ ಶುರುವಾಗಿದೆ.

ಭೀಕರ ಯುದ್ಧ ಮತ್ತೆ ಶುರುವಾಯ್ತಾ?
ಕೆಲವು ದಿನಗಳ ಹಿಂದಷ್ಟೇ ತಾಲಿಬಾನ್ & ಪಾಕಿಸ್ತಾನ ಸೇನೆ ನಡುವೆ ಒಪ್ಪಂದ ಮಾಡಲಾಗಿತ್ತು. ಆ ಮೂಲಕ ಇಬ್ಬರ ಗಲಾಟೆ ನಿಲ್ಲಿಸಿ ಶಾಂತಿ ಸ್ಥಾಪನೆ ಮಾಡಲಾಗಿತ್ತು. ಆದರೆ ಹೀಗೆ ಶಾಂತಿಯ ಸ್ಥಾಪನೆ ನಡೆದ ಕೆಲವೇ ದಿನಗಳಲ್ಲಿ ಮತ್ತೆ ಹಿಂಸೆ ಶುರುವಾಗಿದೆ. ಗಡಿ ಭಾಗದಲ್ಲಿ ಜನರಿಗೆ ನಿದ್ದೆ ಬರದ ಪರಿಸ್ಥಿತಿ ಇದ್ದು, ಯಾವ ಕ್ಷಣದಲ್ಲಿ ಯಾರು ಬಂದು ದಾಳಿ ಮಾಡುತ್ತಾರೋ? ಎಂಬ ಭಯ ಕಾಡುತ್ತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications