ಪಾಕಿಸ್ತಾನದಲ್ಲಿ ಆಹಾರ ಬಿಕ್ಕಟ್ಟು: ಸಾವಿರಾರು ಮಂದಿ ಸಾವು- ಪ್ರವಾಹಕ್ಕೆ ಮೂರನೇ ಒಂದು ಭಾಗ ಮುಳುಗಡೆ
ಇಸ್ಲಾಮಾಬಾದ್ ಸೆಪ್ಟೆಂಬರ್ 3: ಕಳೆದ ಕೆಲ ವಾರಗಳಿಂದ ಪಾಕಿಸ್ತಾನದಲ್ಲಿ ಪ್ರವಾಹಕ್ಕೆ ಸಿಲುಕಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಪರಿಸ್ಥಿತಿ ಈಗಾಗಲೇ ಕೆಟ್ಟದಾಗಿದೆ. ಜೊತೆಗೆ ಪ್ರವಾಹದ ವಿನಾಶವು ಇಸ್ಲಾಮಾಬಾದ್ ಅನ್ನು ಜರ್ಜರಿತಗೊಳಿಸಿದೆ. ಒಂದು ಅಂದಾಜಿನ ಪ್ರಕಾರ, ತೀವ್ರ ಪ್ರವಾಹದಿಂದಾಗಿ ದೇಶವು ಅಂದಾಜು ಹತ್ತು ಶತಕೋಟಿ ಡಾಲರ್ ನಷ್ಟವನ್ನು ಅನುಭವಿಸಿದೆ. ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ (ESA) ಉಪಗ್ರಹ ಚಿತ್ರಗಳ ಪ್ರಕಾರ, ಪಾಕಿಸ್ತಾನದ ಮೂರನೇ ಒಂದು ಭಾಗದಷ್ಟು ಭೂಮಿ ತೀವ್ರ ಪ್ರವಾಹದ ಹಿಡಿತದಲ್ಲಿದೆ. ಇದು ಪಾಕಿಸ್ತಾನದ ಇತಿಹಾಸದಲ್ಲಿ ಅತ್ಯಂತ ಭೀಕರ ನೈಸರ್ಗಿಕ ವಿಕೋಪ ಎಂದು ಹೇಳಲಾಗಿದೆ.
ಸಿಎನ್ಎನ್ ಪ್ರಕಾರ, ಪಾಕಿಸ್ತಾನದಲ್ಲಿ ತೀವ್ರ ಪ್ರವಾಹದಿಂದಾಗಿ ಇನ್ನೂ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಲಕ್ಷಾಂತರ ಎಕರೆ ಪ್ರದೇಶದಲ್ಲಿ ನೀರು ನುಗ್ಗಿ ಬೆಳೆ ಹಾನಿಯಾಗಿ ಆಹಾರದ ಕೊರತೆ ಎದುರಾಗಿದೆ. ಸಾವಿರಾರು ಜಾನುವಾರುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಪ್ರವಾಹದಿಂದಾಗಿ ಜನರು ವಿವಿಧ ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚುತ್ತಿದೆ. ಒಟ್ಟಿನಲ್ಲಿ ಪಾಕಿಸ್ತಾನ ಸದ್ಯಕ್ಕೆ ಭೀಕರ ಪ್ರಕೃತಿ ವಿಕೋಪವನ್ನು ಎದುರಿಸುತ್ತಿದೆ. ಮುಂದಿನ ದಿನಗಳಲ್ಲಿ ಇಲ್ಲಿ ದೊಡ್ಡ ಪ್ರಮಾಣದ ಆಹಾರ ಬಿಕ್ಕಟ್ಟು ಎದುರಾಗುವ ಭೀತಿ ಎದುರಾಗಿದೆ.

ಸಾಮಾನ್ಯಕ್ಕಿಂತ 10 ಪಟ್ಟು ಹೆಚ್ಚು ಮಳೆ
ಆಗಸ್ಟ್ 30 ರಂದು, ESA ಪ್ರವಾಹಕ್ಕೆ ಸಂಬಂಧಿಸಿದ ಹಲವಾರು ಫೋಟೋಗಳನ್ನು ಬಿಡುಗಡೆ ಮಾಡಿತು. ಪಾಕಿಸ್ತಾನದಲ್ಲಿ ಧಾರಾಕಾರ ಮಳೆಯಿಂದಾಗಿ (ಸಾಮಾನ್ಯಕ್ಕಿಂತ 10 ಪಟ್ಟು ಹೆಚ್ಚು) ಸಿಂಧೂ ನದಿಯ ನೀರಿನ ಹರಿವು ಇನ್ನಷ್ಟು ಭೀಕರವಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ರಸ್ತೆಗಳು ಕೆರೆಗಳಾಗಿ ಮಾರ್ಪಟ್ಟಿವೆ. ಪಾಕಿಸ್ತಾನದ ಅಭೂತಪೂರ್ವ ಪ್ರವಾಹ ಆಹಾರ ಮತ್ತು ಆರೋಗ್ಯ ಬಿಕ್ಕಟ್ಟನ್ನು ಸೃಷ್ಟಿಸಿದೆ.

ಮೂರನೇ ಒಂದು ಭಾಗ ಪ್ರವಾಹಕ್ಕೆ ತುತ್ತು
CNN ಆಕ್ಷನ್ ಎಗೇನ್ಸ್ಟ್ ಹಂಗರ್ ಎಂಬ ಚಾರಿಟಿಯನ್ನು ಉಲ್ಲೇಖಿಸಿ, ದೇಶದಲ್ಲಿ 27 ಮಿಲಿಯನ್ ಜನರು ಪ್ರವಾಹದ ಮೊದಲು ಸಾಕಷ್ಟು ಆಹಾರದ ಕೊರತೆಯಿಂದ ಬಳಲುತ್ತಿದ್ದರು. ಈಗ ಪ್ರವಾಹ ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸಿದೆ. ಪ್ರಕೃತಿ ವಿಕೋಪದಿಂದ ಪಾಕಿಸ್ತಾನದಲ್ಲಿ ಹಸಿವಿನ ಪರಿಸ್ಥಿತಿ ಉಂಟಾಗಿದೆ. ಯುನೈಟೆಡ್ ಕಿಂಗ್ಡಮ್ ಮೂಲದ ನೆರವು ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಕ ಸಲೇಹ್ ಸಯೀದ್, ವಿಪತ್ತು ತುರ್ತು ಸಮಿತಿ, ಜೀವಗಳನ್ನು ಉಳಿಸುವುದು ಅವರ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು. ಪ್ರವಾಹ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದೆ. ಬೆಳೆಗಳು ನಾಶವಾಗಿವೆ. ಸಾವಿರಾರು ಜಾನುವಾರುಗಳು ಸಾವಿಗೀಡಾಗಿವೆ. ಈ ಕಾರಣದಿಂದಾಗಿ, ಹಸಿವಿನ ಪರಿಸ್ಥಿತಿಗಳು ಸೃಷ್ಟಿಯಾಗುತ್ತಿವೆ. ಪಾಕಿಸ್ತಾನವು ಮೂರು ದಶಕಗಳಲ್ಲಿ ಅತಿ ಹೆಚ್ಚು ಮಳೆಯನ್ನು ಕಂಡಿದೆ ಮತ್ತು ಹಿಮನದಿಗಳ ಕರಗುವಿಕೆಯಿಂದಾಗಿ ಪ್ರದೇಶದ ಮೂರನೇ ಒಂದು ಭಾಗವು ಮುಳುಗಿದೆ. ಸಿಂಧ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯಗಳು ಪ್ರವಾಹದಿಂದ ಹೆಚ್ಚು ಹಾನಿಗೊಳಗಾಗಿವೆ. ಮನೆಗಳಿಗೆ ನೀರು ನುಗ್ಗಿದೆ.

ಆಹಾರ, ನೀರಿನ ಸಮಸ್ಯೆ
ಪಾಕಿಸ್ತಾನದಲ್ಲಿ ಪ್ರವಾಹದಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಅವರಿಗೆ ಆಹಾರ, ನೀರಿನ ಸಮಸ್ಯೆ ಎದುರಾಗಿದೆ. ದಾಖಲೆ ಮುಂಗಾರು ಮಳೆಯಿಂದ ಉಂಟಾದ ಪ್ರವಾಹದಿಂದಾಗಿ 1208 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಪಾಕಿಸ್ತಾನದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ
ಮತ್ತೊಂದೆಡೆ, ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅವರು ದೇಶದಲ್ಲಿ ಪ್ರವಾಹದಿಂದಾಗಿ ಆಹಾರದ ಬಿಕ್ಕಟ್ಟು ಉಂಟಾಗುತ್ತಿದೆ ಎಂದು ಹೇಳಿದ್ದಾರೆ. ಟೊಮ್ಯಾಟೊ, ಈರುಳ್ಳಿಯಂತಹ ಮೂಲಭೂತ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ಪರಿಗಣಿಸಬಹುದು ಎಂದು ಪಾಕಿಸ್ತಾನದ ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ. ಜಿಯೋ ನ್ಯೂಸ್ ಜೊತೆಗಿನ ಸಂವಾದದಲ್ಲಿ ಇಸ್ಮಾಯಿಲ್ ಮಾತನಾಡಿ, ದೇಶದ ಬೆಳೆಗಳಿಗೆ ಭಾರಿ ಹಾನಿಯಾಗಿರುವುದರಿಂದ ಭಾರತದಿಂದ ತರಕಾರಿಗಳು ಮತ್ತು ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳುವ ಬಗ್ಗೆ ಯೋಚನೆ ನಡೆಯುತ್ತಿದೆ. ಇದರಿಂದ ಜನರಿಗೆ ಸ್ವಲ್ಪ ಪರಿಹಾರವನ್ನು ಒದಗಿಸಬಹುದು. ಆದರೆ ಪ್ರಧಾನಿ ಷರೀಫ್ ಅವರ ವಾಕ್ಚಾತುರ್ಯ ಎಲ್ಲವನ್ನೂ ತಲೆಕೆಳಗಾಗಿಸಿದೆ ಎಂದಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications