ಸಕ್ರಿಯ ರಾಜಕಾರಣಕ್ಕೆ ಮರಳಿದ ಮಾಜಿ ಮಿಲಿಟರಿ ಸರ್ವಾಧಿಕಾರಿ ಮುಷರಫ್
ಇಸ್ಲಾಮಾಬಾದ್, ಅಕ್ಟೋಬರ್ 8: "ಪಾಕಿಸ್ತಾನದ ರಕ್ತದಲ್ಲಿ ಕಾಶ್ಮೀರ ಇದೆ" ಎಂದು ಸೋಮವಾರ ಹೇಳುವ ಮೂಲಕ ಮಾಜಿ ಮಿಲಿಟರಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಸಕ್ರಿಯ ರಾಜಕಾರಣಕ್ಕೆ ತಾವು ಹಿಂತಿರುಗಿರುವುದನ್ನು ಖಾತ್ರಿ ಪಡಿಸಿದ್ದಾರೆ. ಜನರಲ್ (ನಿವೃತ್ತ) ಮುಷರಫ್ ಸದ್ಯಕ್ಕೆ ದುಬೈನಲ್ಲಿ ಇದ್ದಾರೆ.
ಕಾರ್ಗಿಲ್ ಬಿಕ್ಕಟ್ಟು ವಿಚಾರವನ್ನು ಪ್ರಸ್ತಾಪಿಸಿರುವ ಮುಷರಫ್, ಪಾಕಿಸ್ತಾನದ ಕಡೆಯಿಂದ ಶಾಂತಿ ಸ್ಥಾಪನೆಗಾಗಿ ಪದೇ ಪದೇ ಪ್ರಯತ್ನಿಸುತ್ತಿದ್ದರೂ ಭಾರತವು ಆತಂಕ ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.
ಆಲ್ ಪಾಕಿಸ್ತಾನ್ ಮುಸ್ಲಿಂ ಲೀಗ್ (ಎಪಿಎಂ ಎಲ್) ಎಂಬ ರಾಜಕೀಯ ಪಕ್ಷದ ಸ್ಥಾಪಕರೂ ಆಗಿರುವ ಎಪ್ಪತ್ತಾರು ವರ್ಷದ ಮುಷರಫ್, ಪಕ್ಷ ಸ್ಥಾಪನೆ ದಿನಾಚರಣೆ ಪ್ರಯುಕ್ತ ದುಬೈನಿಂದ ಫೋನ್ ನಲ್ಲಿ ಇಸ್ಲಾಮಾಬಾದ್ ನಲ್ಲಿ ಇರುವ ಬೆಂಬಲಿಗರ ಜತೆ ಭಾನುವಾರ ಮಾತನಾಡಿದ್ದಾರೆ. ಅನಾರೋಗ್ಯದ ಕಾರಣಕ್ಕೆ ಕಳೆದ ವರ್ಷ ರಾಜಕೀಯ ಚಟುವಟಿಕೆಗಳಿಂದ ಮುಷರಫ್ ದೂರ ಉಳಿದಿದ್ದರು.

ಯಾವುದೇ ವಿಚಾರ ಆದರೂ ಸರಿ, ನಾವು ಕಾಶ್ಮೀರಿಗಳ ಜತೆ ನಿಲ್ಲುತ್ತೇವೆ ಎಂದು ಅವರು ಹೇಳಿದ್ದಾರೆ. ಶಾಂತಿ ಸ್ಥಾಪನೆ ವಿಚಾರದಲ್ಲಿ ಪಾಕಿಸ್ತಾನದ ಆಶಯವನ್ನು ದೌರ್ಬಲ್ಯ ಎಂದುಕೊಳ್ಳಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರೋಗ್ಯ್ ಸುಧಾರಣೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಮರಳಲು ಮುಷರಫ್ ಆಲೋಚನೆ ಮಾಡಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.
1999ರಿಂದ 2008ರ ತನಕ ಪಾಕಿಸ್ತಾನದಲ್ಲಿ ಮುಷರಫ್ ಆಳ್ವಿಕೆ ನಡೆಸಿದ್ದರು. ಪಾಕಿಸ್ತಾನದ ಮಾಜಿ ಪ್ರಧಾನಿ ಬೆನ್ ಜಿರ್ ಭುಟ್ಟೋ ಹಾಗೂ ಮೌಲ್ವಿ ಹತ್ಯೆ ಪ್ರಕರಣವು ಮುಷರಫ್ ಮೇಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications