ಸರ್ಜಿಕಲ್ ದಾಳಿಯಲ್ಲಿ 300 ಉಗ್ರರ ಹತ್ಯೆ ನಿಜ: ಪಾಕ್ ಮಾಜಿ ಅಧಿಕಾರಿ
ಇಸ್ಲಾಮಾಬಾದ್, ಜನವರಿ 10: ಪಾಕಿಸ್ತಾನದ ಬಾಲಾಕೋಟ್ ಅಡಗುತಾಣದಲ್ಲಿದ್ದ ಉಗ್ರರ ಶಿಬಿರದ ಮೇಲೆ ಭಾರತ ಸರ್ಜಿಕಲ್ ದಾಳಿ ನಡೆಸಿದ್ದರ ಸತ್ಯಾಸತ್ಯತೆ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಈಗ ಈ ದಾಳಿ ಹಾಗೂ 300ಕ್ಕೂ ಅಧಿಕ ಉಗ್ರರ ಹತ್ಯೆ ಕುರಿತ ಸುದ್ದಿಯೊಂದು ಬಂದಿದೆ. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿ ಆಘಾ ಹಿಲಾಲಿ ಎಂಬುವರು ಸರ್ಜಿಕಲ್ ದಾಳಿ ನಡೆದಿದ್ದು ನಿಜ, ಉಗ್ರರು ಸತ್ತಿದ್ದು ಸತ್ಯ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
''ಅಂತಾರಾಷ್ಟ್ರೀಯ ಗಡಿ ದಾಟಿ ಭಾರತ ಸರ್ಜಿಕಲ್ ದಾಳಿ ನಡೆಸಿತು. ಪಾಕಿಸ್ತಾನಕ್ಕೆ ಇದಕ್ಕೆ ತಕ್ಕ ಉತ್ತರ ನೀಡಲು ಸಿದ್ಧತೆ ಮಾಡಿಕೊಂಡಿರಲಿಲ್ಲ. ಬಾಲಾಕೋಟ್ ಶಿಬಿರದಲ್ಲಿದ್ದ 300ಕ್ಕೂ ಅಧಿಕ ಉಗ್ರರು ಈ ದಾಳಿಯಿಂದ ಮೃತಪಟ್ಟರು'' ಎಂದು ಆಘಾ ಹೇಳಿದ್ದಾರೆ.

ಈ ಮೂಲಕ ಈ ಹಿಂದೆ ಅಮೆರಿಕ ಮೂಲಕ ಸಾಮಾಜಿಕ ಹೋರಾಟಗಾರರೊಬ್ಬರು ಉಗ್ರರ ಶವ ಪತ್ತೆ ಹಾಗೂ ರವಾನೆ ಬಗ್ಗೆ ನೀಡಿದ್ದ ಹೇಳಿಕೆಗೆ ಪುಷ್ಟಿ ಸಿಕ್ಕಿದೆ. ಭಾರತೀಯ ಸೇನೆ ಬಾಲಕೋಟ್ನಲ್ಲಿರುವ ಜೈಷ್ ಉಗ್ರರ ಅಡಗುತಾಣಗಳ ಮೇಲೆ ನಡೆಸಿದ ಏರ್ಸ್ಟ್ರೈಕ್ ನಲ್ಲಿ ಸಾವನ್ನಪ್ಪಿದ್ದ 200ಕ್ಕೂ ಅಧಿಕ ಮಂದಿ ಉಗ್ರರ ಶವವನ್ನು ಖೈಬರ್ ಫಂಕ್ತುಂಕ್ವಾ ಪ್ರಾಂತ್ಯಕ್ಕೆ ರವಾನೆ ಮಾಡಲಾಗಿತ್ತು ಎಂದು ಅಮೆರಿಕನ್ ಹೇಳಿದ್ದರು.
#Pakistan military officer admits to "martyrdom" of more than 200 militants during Indian strike on #Balakot. Calls the terrorists Mujahid who receive special favors/ sustenance from Allah as they fight to support PAK government [against enemies]. Vows to support families pic.twitter.com/yzcCgCEbmu
— #SengeSering ས།ཚ། (@SengeHSering) March 13, 2019
ಫೆಬ್ರವರಿ 14,2019 ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸೈನಿಕರಿದ್ದ ವಾಯನದಮೇಲೆ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿ, 44 ಯೋಧರು ಹುತಾತ್ಮರಾಗುವಂತೆ ಮಾಡಿತ್ತು. ಈ ಘಟನೆಗೆ ಪ್ರತೀಕಾರ ಎಂಬಂತೆ ಫೆ.26 ರಂದು ಭಾರತ ಪಾಕಿಸ್ತಾನದಲ್ಲಿರುವ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಫೆಬ್ರವರಿ 26ರಂದು ಬೆಳಗಿನ ಜಾವ 3.45ರ ಸುಮಾರಿಗೆ ಸ್ಪೈಸ್ ಬಾಂಬ್ ಬಳಸಿ ಭರ್ಜರಿ ದಾಳಿಯ ಸಮಯದಲ್ಲಿ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ 18 ಹಿರಿಯ ಕಮಾಂಡರ್ ಗಳು ಸೇರಿದಂತೆ 250-300 ಉಗ್ರರು ಸತ್ತಿರಬಹುದು ಎಂದು ವರದಿ ಬಂದಿತ್ತು. ಈ ಬಗ್ಗೆ ಚರ್ಚೆ ಮುಂದುವರೆದಿದ್ದು, ಈಗ ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿ ಹೇಳಿಕೆ ಇದಕ್ಕೆ ಪುಷ್ಟಿ ನೀಡಿದೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications