ಐಎಸ್ಐಗೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ
ಇಸ್ಲಾಮಾಬಾದ್, ಅ. 29: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ದೇಶದ ಗುಪ್ತಚರ ಸಂಸ್ಥೆಗೆ ಎಚ್ಚರಿಕೆ ನೀಡಿದ್ದಾರೆ.
ರ್ಯಾಲಿಯೊಂದರಲ್ಲಿ ಮಾತನಾಡಿದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್, "ಡಿಜಿ ಐಎಸ್ಐ (ಐಎಸ್ಐ ಮಹಾನಿರ್ದೇಶಕ ನದೀಮ್ ಅಂಜುಂ) ನಿಮ್ಮ ಕಿವಿಗಳನ್ನು ತೆರೆದು ಆಲಿಸಿ, ನನಗೆ ಬಹಳಷ್ಟು ವಿಷಯಗಳು ತಿಳಿದಿವೆ ಆದರೂ ನಾನು ಮೌನವಾಗಿದ್ದೇನೆ. ನಾನು ನನ್ನ ದೇಶಕ್ಕೆ ಹಾನಿ ಮಾಡಲು ಬಯಸುವುದಿಲ್ಲ. ನಾನು ಸುಧಾರಣೆಗಾಗಿ ರಚನಾತ್ಮಕ ಟೀಕೆಗಳನ್ನು ಮಾಡುತ್ತೇನೆ. ಇಲ್ಲದಿದ್ದರೆ ನಾನು ಹೇಳಲು ಬಹಳಷ್ಟು ಇತ್ತು" ಎಂದು ಹೇಳಿದ್ದಾರೆ.
ANI ವರದಿಗಳ ಪ್ರಕಾರ, ಲಾಹೋರ್ನ ಲಿಬರ್ಟಿ ಚೌಕ್ನಿಂದ ಇಸ್ಲಾಮಾಬಾದ್ಗೆ ಇಮ್ರಾನ್ ಖಾನ್ ಮತ್ತು ಇತರ ಪಕ್ಷದ ಸದಸ್ಯರು ಪ್ರಾರಂಭಿಸಿದ "ಹಖಿ ಆಜಾದಿ ಲಾಂಗ್ ಮಾರ್ಚ್" ಸಮಯದಲ್ಲಿ ಈ ಟೀಕೆಗಳನ್ನು ಮಾಡಲಾಗಿದೆ.

ಅಚ್ಚರಿ ಏನೆಂದರೆ, ಇಲ್ಲಿಯವರೆಗೂ ಯಾವುದೇ ಐಎಸ್ಐ ಚೀಫ್ನ ಮುಖವನ್ನು ಸಾರ್ವಜನಿಕರು ಈವರೆಗೆ ಕಂಡಿರಲಿಲ್ಲ. ಯಾವುದೇ ಐಎಸ್ಐ ಮುಖ್ಯಸ್ಥರು ಪತ್ರಿಕಾಗೋಷ್ಠಿ ನಡೆಸಿಲ್ಲ. ಕ್ಯಾಮರಾ ಕಣ್ಣಿಗೆ ಕಂಡಿದ್ದೇ ಇಲ್ಲ. ಆದರೆ ನದೀಮ್ ಅಂಜುಮ್ ಮುಂದೆ ಬಂದಿದ್ದಲ್ಲದೆ, ಇಮ್ರಾನ್ ಖಾನ್ ದೊಡ್ಡ ಸುಳ್ಳುಗಾರ ಎಂದು ಕರೆದಿದ್ದಾರೆ. ಐಎಸ್ಐನ ಡಿಜಿ ಈ ರೀತಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು ಎಲ್ಲರ ಅಚ್ಚರಿಗೆ ಕಾರಣವಾಯಿತು. ಅಲ್ಲಿನ ಮಾಧ್ಯಮಗಳೂ ಕೂಡ ಅಚ್ಚರಿಗೊಂಡಿವೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ (ಐಎಸ್ಐ)ನ ಹಿರಿಯ ಅಧಿಕಾರಿಗಳು ಸಿಡಿದು ಬಿದ್ದಿದ್ದಾರೆ. ಖಾನ್ ಅಧಿಕಾರದಲ್ಲಿ ಇರುವ ವೇಳೆ, ಅವರ ಸರ್ಕಾರಕ್ಕೆ ಕಾನೂನು ಮತ್ತು ಸಂವಿಧಾನ ಬಾಹಿರ ರೀತಿಯಲ್ಲಿ ಬೆಂಬಲ ನೀಡುವ ಬಗ್ಗೆ ಕೋರಿಕೆ ಸಲ್ಲಿಸಿದ್ದರು ಎಂದು ಗುಪ್ತಚರ ಸಂಸ್ಥೆಯ ಮುಖ್ಯಸ್ಥ ಲೆ.ಜ.ನದೀಮ್ ಅಂಜುಂ ಆರೋಪ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಮುಖ್ಯಸ್ಥರು ಸೇನೆಯ ಮಾಧ್ಯಮ ವಿಭಾಗದ ಜೊತೆಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಲಾಹೋರ್ನಿಂದ ಇಸ್ಲಾಮಾಬಾದ್ ವರೆಗೆ ಕೈಗೊಳ್ಳಲಿರುವ ಪಾದಯಾತ್ರೆಗೆ ಮುನ್ನ ಈ ಬೆಳವಣಿಗೆ ನಡೆದಿದೆ.
ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ಖಾನ್ ಅವರು ಮಂಡಿಸಿದ್ದ ಅಸಾಂವಿಧಾನಿಕ ಕೋರಿಕೆಗಳು ಏನು ಎಂಬ ವಿಚಾರವನ್ನು ಐಎಸ್ಐ ಮುಖ್ಯಸ್ಥರು ಬಹಿರಂಗಪಡಿಸಲಿಲ್ಲ. ಗಮನಾರ್ಹ ಅಂಶವೆಂದರೆ ಮಾಧ್ಯಮದವರ ಜೊತೆಗೆ ಮಾತನಾಡುವ ವೇಳೆ, ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ದೂರ ಉಳಿಯುವ ನಿರ್ಧಾರದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಜೊತೆಗೆ ಕೆಲವೊಂದು ತಪ್ಪುಗಳನ್ನೂ ಮಾಡಿತ್ತು ಎಂದು ಐಎಸ್ಐ ಮುಖ್ಯಸ್ಥ ಲೆ.ಜ.ನದೀಮ್ ಅಂಜುಂ ಹೇಳಿದ್ದಾರೆ.
ಸದ್ಯ ಪಾಕಿಸ್ತಾನ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ನಾಯಕ ಅಸಾದ್ ಉಮರ್ ಪ್ರತಿಕ್ರಿಯೆ ನೀಡಿ, ದೇಶದ ಗುಪ್ತಚರ ಸಂಸ್ಥೆಗೆ ಎಚ್ಚರಿಕೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications