ಐಸಿಸ್ ಉಗ್ರರಿಂದ ಕನ್ನಡಿಗರು ಸೇರಿ ನಾಲ್ವರ ಅಪಹರಣ
ಟ್ರಿಪೋಲಿ(ಲಿಬಿಯಾ) , ಜುಲೈ 31: ಕರ್ನಾಟಕ ಮೂಲದ ಇಬ್ಬರು ಹಾಗೂ ಆಂಧ್ರಪ್ರದೇಶದ ಇಬ್ಬರು ಸೇರಿದಂತೆ ನಾಲ್ವರು ಭಾರತೀಯರು ನಾಪತ್ತೆಯಾಗಿದ್ದಾರೆ. ಐಎಸ್ಐಎಸ್ ಉಗ್ರರ ಕೃತ್ಯ ಎಂದು ಶಂಕಿಸಲಾಗಿದೆ. ಇದುವರೆವಿಗೂ ಯಾವುದೇ ಉಗ್ರ ಸಂಘಟನೆ ಈ ಕೃತ್ಯದ ಹೊಣೆ ಹೊತ್ತಿಲ್ಲ.
ಇದೀಗ ಬಂದ ಶುಭ ಸುದ್ದಿ: ಅಪಹರಣವಾಗಿದ್ದ ಇಬ್ಬರು ಕನ್ನಡಿಗರನ್ನು ರಕ್ಷಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದಿಂದ ಟ್ವೀಟ್
Welcome news from Libya. 2 of the 4 detained Indians brought back safely to University of Sirte. Our efforts continue for the remaining two.
— Vikas Swarup (@MEAIndia) July 31, 2015 ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ನಾಲ್ವರ ಪೈಕಿ ಇಬ್ಬರು ಕನ್ನಡಿಗರು ಇರುವುದನ್ನು ದೃಢಪಡಿಸಿದ್ದಾರೆ.[ಉಗ್ರರಿಗೆ ಭಾರತೀಯರೆಂದರೆ ಲೈಂಗಿಕ ಗುಲಾಮರಂತೆ!]
ಲಿಬಿಯಾದ ಬೆಳವಣಿಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಲಾಗಿದೆ. ಅಪಹರಣಕಾರರು ಇನ್ನೂ ಯಾವುದೇ ಬೇಡಿಕೆ ಇಟ್ಟಿಲ್ಲ. ಭಾರತೀಯ ಸುರಕ್ಷತೆ ಆದ್ಯತೆ ನೀಡಲಾಗುತ್ತದೆ ಎಂದು ಸುಷ್ಮಾ ಸ್ವರಾಜ್ ಅವರು ಹೇಳಿದ್ದಾರೆ. [ಐಎಸ್ಐಎಸ್ ಸೇರಿದ್ದ ಕರ್ನಾಟಕದ ಮೂವರ ಸಾವು?]

ಗುರುತು ಪತ್ತೆ: ಅಪಹರಣವಾದ ಭಾರತೀಯರ ಪೈಕಿ ಒಬ್ಬರು ಆಂಧ್ರಪ್ರದೇಶದ ಶ್ರೀಕಾಕುಳಂ ಗೋಪಿಕೃಷ್ಣ, ಮತ್ತೊಬ್ಬರು ಹೈದಬಾದಿನ ಬಲರಾಮ್ ಎಂದು ತಿಳಿದು ಬಂದಿದೆ. [ಗಡಾಫಿಯ 7,600 ಕೋಟಿ ರು ಆಸ್ತಿ ಇಟಲಿ ವಶ]
MEA through head of mission in Tripoli is ascertaining details-Vikas Swarup,MEA on 4 Indians reportedly abducted in Libya
— ANI (@ANI_news) July 31, 2015 ಇಬ್ಬರು ಕನ್ನಡಿಗರ ಪೈಕಿ ಒಬ್ಬರು ಬೆಂಗಳೂರಿನ ವಿಜಯ್ ಕುಮಾರ್ ಮತ್ತೊಬ್ಬರು ರಾಯಚೂರಿನ ಲಕ್ಷ್ಮಿಕಾಂತ್ ಎಂದು ಹೇಳಲಾಗಿದೆ. ಕಳೆದ ರಾತ್ರಿ(ಜುಲೈ 30) 11 ಗಂಟೆ ಸುಮಾರಿಗೆ ಟ್ರಿಪೋಲಿಯ ಸಿರ್ಸೆ ನಗರದ ಚೆಕ್ ಪೋಸ್ಟ್ ಬಳಿಯಲ್ಲಿದ್ದರು ನಂತರ ಅವರ ಸುಳಿವು ಸಿಕ್ಕಿಲ್ಲ ಎಂದು ಸದ್ಯಕ್ಕೆ ಮಾಹಿತಿ ಲಭ್ಯವಾಗಿದೆ. [ಇರಾಕಿ ಉಗ್ರರ ಕಣ್ಣು ಈಗ ಭಾರತದ ಮೇಲೆ!]
ಕಳೆದ ಒಂದು ವರ್ಷದಲ್ಲಿ ಯುದ್ಧ ಪೀಡಿತ ಲಿಬಿಯಾದಲ್ಲಿ ನಾಪತ್ತೆಯಾದ 39ಕ್ಕೂ ಅಧಿಕ ಭಾರತೀಯರ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ಆದರೆ, ಸಾವಿರಾರು ಭಾರತೀಯರನ್ನು ರಕ್ಷಿಸಿ ತವರಿಗೆ ವಾಪಸ್ ಕರೆಸಿಕೊಳ್ಳುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸುದ್ದಿಯ ವಿಡಿಯೋ ನೋಡಲು ಕ್ಲಿಕ್ ಮಾಡಿ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications