ಐಸಿಸ್ ಉಗ್ರರಿಂದ ಕನ್ನಡಿಗರು ಸೇರಿ ನಾಲ್ವರ ಅಪಹರಣ
ಟ್ರಿಪೋಲಿ(ಲಿಬಿಯಾ) , ಜುಲೈ 31: ಕರ್ನಾಟಕ ಮೂಲದ ಇಬ್ಬರು ಹಾಗೂ ಆಂಧ್ರಪ್ರದೇಶದ ಇಬ್ಬರು ಸೇರಿದಂತೆ ನಾಲ್ವರು ಭಾರತೀಯರು ನಾಪತ್ತೆಯಾಗಿದ್ದಾರೆ. ಐಎಸ್ಐಎಸ್ ಉಗ್ರರ ಕೃತ್ಯ ಎಂದು ಶಂಕಿಸಲಾಗಿದೆ. ಇದುವರೆವಿಗೂ ಯಾವುದೇ ಉಗ್ರ ಸಂಘಟನೆ ಈ ಕೃತ್ಯದ ಹೊಣೆ ಹೊತ್ತಿಲ್ಲ.
ಇದೀಗ ಬಂದ ಶುಭ ಸುದ್ದಿ: ಅಪಹರಣವಾಗಿದ್ದ ಇಬ್ಬರು ಕನ್ನಡಿಗರನ್ನು ರಕ್ಷಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದಿಂದ ಟ್ವೀಟ್
Welcome news from Libya. 2 of the 4 detained Indians brought back safely to University of Sirte. Our efforts continue for the remaining two.
— Vikas Swarup (@MEAIndia) July 31, 2015 ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ನಾಲ್ವರ ಪೈಕಿ ಇಬ್ಬರು ಕನ್ನಡಿಗರು ಇರುವುದನ್ನು ದೃಢಪಡಿಸಿದ್ದಾರೆ.[ಉಗ್ರರಿಗೆ ಭಾರತೀಯರೆಂದರೆ ಲೈಂಗಿಕ ಗುಲಾಮರಂತೆ!]
ಲಿಬಿಯಾದ ಬೆಳವಣಿಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಲಾಗಿದೆ. ಅಪಹರಣಕಾರರು ಇನ್ನೂ ಯಾವುದೇ ಬೇಡಿಕೆ ಇಟ್ಟಿಲ್ಲ. ಭಾರತೀಯ ಸುರಕ್ಷತೆ ಆದ್ಯತೆ ನೀಡಲಾಗುತ್ತದೆ ಎಂದು ಸುಷ್ಮಾ ಸ್ವರಾಜ್ ಅವರು ಹೇಳಿದ್ದಾರೆ. [ಐಎಸ್ಐಎಸ್ ಸೇರಿದ್ದ ಕರ್ನಾಟಕದ ಮೂವರ ಸಾವು?]

ಗುರುತು ಪತ್ತೆ: ಅಪಹರಣವಾದ ಭಾರತೀಯರ ಪೈಕಿ ಒಬ್ಬರು ಆಂಧ್ರಪ್ರದೇಶದ ಶ್ರೀಕಾಕುಳಂ ಗೋಪಿಕೃಷ್ಣ, ಮತ್ತೊಬ್ಬರು ಹೈದಬಾದಿನ ಬಲರಾಮ್ ಎಂದು ತಿಳಿದು ಬಂದಿದೆ. [ಗಡಾಫಿಯ 7,600 ಕೋಟಿ ರು ಆಸ್ತಿ ಇಟಲಿ ವಶ]
MEA through head of mission in Tripoli is ascertaining details-Vikas Swarup,MEA on 4 Indians reportedly abducted in Libya
— ANI (@ANI_news) July 31, 2015 ಇಬ್ಬರು ಕನ್ನಡಿಗರ ಪೈಕಿ ಒಬ್ಬರು ಬೆಂಗಳೂರಿನ ವಿಜಯ್ ಕುಮಾರ್ ಮತ್ತೊಬ್ಬರು ರಾಯಚೂರಿನ ಲಕ್ಷ್ಮಿಕಾಂತ್ ಎಂದು ಹೇಳಲಾಗಿದೆ. ಕಳೆದ ರಾತ್ರಿ(ಜುಲೈ 30) 11 ಗಂಟೆ ಸುಮಾರಿಗೆ ಟ್ರಿಪೋಲಿಯ ಸಿರ್ಸೆ ನಗರದ ಚೆಕ್ ಪೋಸ್ಟ್ ಬಳಿಯಲ್ಲಿದ್ದರು ನಂತರ ಅವರ ಸುಳಿವು ಸಿಕ್ಕಿಲ್ಲ ಎಂದು ಸದ್ಯಕ್ಕೆ ಮಾಹಿತಿ ಲಭ್ಯವಾಗಿದೆ. [ಇರಾಕಿ ಉಗ್ರರ ಕಣ್ಣು ಈಗ ಭಾರತದ ಮೇಲೆ!]
ಕಳೆದ ಒಂದು ವರ್ಷದಲ್ಲಿ ಯುದ್ಧ ಪೀಡಿತ ಲಿಬಿಯಾದಲ್ಲಿ ನಾಪತ್ತೆಯಾದ 39ಕ್ಕೂ ಅಧಿಕ ಭಾರತೀಯರ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ಆದರೆ, ಸಾವಿರಾರು ಭಾರತೀಯರನ್ನು ರಕ್ಷಿಸಿ ತವರಿಗೆ ವಾಪಸ್ ಕರೆಸಿಕೊಳ್ಳುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸುದ್ದಿಯ ವಿಡಿಯೋ ನೋಡಲು ಕ್ಲಿಕ್ ಮಾಡಿ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications