ಫ್ರಾನ್ಸ್ ನಲ್ಲಿ ಲಾರಿ ಹರಿಸಿ 77 ಜನರ ಭೀಕರ ಹತ್ಯೆ
ಪ್ಯಾರೀಸ್, ಜುಲೈ 14 : ಫ್ರಾನ್ಸ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 77 ಜನರು ಸಾವನ್ನಪ್ಪಿದ್ದಾರೆ. ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಜನರ ಮೇಲೆ ಲಾರಿ ಹತ್ತಿಸಿ, ಗುಂಡಿನ ದಾಳಿ ನಡೆಸಲಾಗಿದೆ.
ದಕ್ಷಿಣ ಫ್ರಾನ್ಸ್ನ ನೀಸ್ ನಗರದಲ್ಲಿ ಗುರುವಾರ ಈ ದಾಳಿ ನಡೆದಿದೆ. ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆ ಪ್ರಯುಕ್ತ ಪಟಾಕಿ ಉತ್ಸವ ಆಯೋಜಿಸಲಾಗಿತ್ತು. ಇದನ್ನು ನೋಡಲು ಸಾವಿರಾರು ಜನರು ಸೇರಿದ್ದರು. ಈ ಸಂದರ್ಭದಲ್ಲಿ ಜನರ ಮೇಲೆ ಏಕಾಏಕಿ ಲಾರಿ ಹತ್ತಿಸಲಾಗಿದೆ. [ಉಗ್ರರಿಂದ ಫ್ರಾನ್ಸ್ ಮೇಲೆ ರಾಸಾಯನಿಕ, ಜೈವಿಕ ಅಸ್ತ್ರ ಬಳಕೆ?]
ಜನರ ತುಂಬಿದ್ದ ರಸ್ತೆಯ ಮೇಲೆ ಅಪರಿಚಿತ ಡ್ರೈವರ್ ಸುಮಾರು 2 ಕಿ.ಮೀ.ತನಕ ಲಾರಿಯನ್ನು ತೆಗೆದುಕೊಂಡು ಹೋಗಿದ್ದಾನೆ. ನಂತರ ಭದ್ರತಾ ಪಡೆಗಳು ಆತನನ್ನು ಕೊಂದು ಹಾಕಿವೆ. ಜನರಿಗೆ ಡಿಕ್ಕಿ ಹೊಡೆಸಿದ ಟ್ರಕ್ನಲ್ಲಿ ಸ್ಫೋಟಗಳಿತ್ತು, ಎಂದು ತಿಳಿದುಬಂದಿದೆ. ಈ ಕೃತ್ಯದ ಹಿಂದೆ ಐಎಸ್ಐಎಸ್ ಉಗ್ರ ಸಂಘಟನೆ ಕೈವಾಡವಿರಬಹುದು ಎಂದು ಶಂಕಿಸಲಾಗಿದೆ.[ಪ್ಯಾರಿಸಿನ ಶಾ೦ತ ಪರಿಸರದಲ್ಲಿ ಉಗ್ರವಾದದ ಬೆ೦ಕಿ: ಇದಕ್ಕೆ ಕೊನೆಯೆಂದು?]
#NiceAttack: 60 dead, several injured after truck plows into Bastille Day crowd in France pic.twitter.com/PI7JmhoHD7
— All India Radio News (@airnewsalerts) July 15, 2016
ರಸ್ತೆಯಲ್ಲಿದ್ದ ಜನರ ಮೇಲೆ ಟ್ರಕ್ ಚಾಲಕ ಗುಂಡಿನ ದಾಳಿಯನ್ನು ನಡೆಸಿದ್ದಾನೆ. ಈ ಘಟನೆಯಲ್ಲಿ ಗಾಯಗೊಂಡ 100 ಜನರ ಪೈಕಿ 42 ಜನರ ಸ್ಥಿತಿ ಗಂಭೀರವಾಗಿದೆ. ಏಕಾಏಕಿ ಟ್ರಕ್ ಜನರ ಮೇಲೆ ನುಗ್ಗಿದ್ದರಿಂದ ಎಲ್ಲರೂ ಒಂದು ದಿಕ್ಕಿನ ಕಡೆ ಓಡಲಾರಂಭಿಸಿದರು. ಜೋರಾದ ಸಂಗೀತದ ಅಬ್ಬರದ ನಡುವೆ ಏನಾಗುತ್ತಿದೆ? ಎಂಬುದು ಹಲವರಿಗೆ ತಿಳಿಯಲಿಲ್ಲ.
2015ರ ನವೆಂಬರ್ನಲ್ಲಿ ಐಎಸ್ಐಎಸ್ ಪ್ಯಾರಿಸ್ನಲ್ಲಿ ನಡೆಸಿದ ದಾಳಿಯಲ್ಲಿ 130 ಜನರು ಸಾವನ್ನಪ್ಪಿದ್ದರು. ಈಗ ನಡೆದಿರುವ ದಾಳಿಯ ಹೊಣೆಯನ್ನು ಐಎಸ್ಐಎಸ್ ಹೊತ್ತುಕೊಳ್ಳುವ ಸಾಧ್ಯತೆ ಇದೆ. ದಾಳಿಯ ಹಿಂದೆ ಐಎಸ್ಐಎಸ್ ಕೈವಾಡವಿದೆ ಎಂಬ ಬಗ್ಗೆ ಫ್ರಾನ್ಸ್ ಅಧಿಕೃತ ಹೇಳಿಕೆ ನೀಡಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ













Click it and Unblock the Notifications