France Protest: ಫ್ರಾನ್ಸ್ ನೆಲದಲ್ಲೂ ನೇಪಾಳ ರೀತಿ ಪ್ರತಿಭಟನೆ, ಅಧ್ಯಕ್ಷ ಪಟ್ಟಕ್ಕೆ ಕುತ್ತು?
ಪ್ರಪಂಚ ಮತ್ತೊಮ್ಮೆ ಹಿಂಸೆಯ ಕೂಪಕ್ಕೆ ಜಾರುತ್ತಿದೆ, ಎಲ್ಲೆಲ್ಲೂ ಬರೀ ಹಿಂಸೆಯ ವಿಚಾರ ಸದ್ದು ಮಾಡುತ್ತಿದೆ. ಯುರೋಪ್, ಅಮೆರಿಕ ಸೇರಿದಂತೆ ಜಗತ್ತಿನ ಯಾವುದೇ ದೇಶವನ್ನೂ ಬಿಡದೆ ಹೀಗೆ ಪ್ರತಿಭಟನೆಗಳು ಶುರುವಾಗಿವೆ. ಅದರಲ್ಲೂ ಭಾರತದ ನೆರೆಯ ದೇಶ ನೇಪಾಳ ಇದೀಗ ಭಾರಿ ಘೋರ ಪ್ರತಿಭಟನೆ ಹಿನ್ನೆಲೆ ನಲುಗಿ ಹೋಗಿದ್ದು, ಯಾವ ಕ್ಷಣದಲ್ಲಿ ಏನಾಗುತ್ತೋ? ಎಂಬ ವಾತಾವರಣ ಕೂಡ ನಿರ್ಮಾಣ ಆಗಿದೆ. ಇಂತಹ ಸಮಯದಲ್ಲೇ ಫ್ರಾನ್ಸ್ ಕೂಡ ಪ್ರತಿಭಟನೆಯ ಕಿಚ್ಚಿಗೆ ಬಲಿ?
ಹೌದು, ಫ್ರಾನ್ಸ್ ದೇಶದಲ್ಲಿ ಬಲಪಂಥೀಯ & ಎಡಪಂಥೀಯ ಚಳವಳಿಗಳ ತೀವ್ರತೆ ಪರಿಣಾಮ ಈಗ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ವ್ಯಾಪಕ ಪ್ರತಿಭಟನೆಗಳು, ದಂಗೆ ಜೊತೆಗೆ ಪ್ರತಿಭಟನಾಕಾರರ ಅಟ್ಟಹಾಸ ಜೋರಾಗಿದೆ. ಫ್ರಾನ್ಸ್ ಒಂದು ವರ್ಷದಲ್ಲಿ 3ನೇ ಪ್ರಧಾನಿ ಕಾಣುವ ಸ್ಥಿತಿಯೇ ಬಂದಿದ್ದು, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ಅವರ ಸರ್ಕಾರ ನೂರಾರು ಸಮಸ್ಯೆ ಎದುರಿಸುತ್ತಿದೆ. ಈಗ ಅಲ್ಲಿರುವ ವಾತಾವರಣ ನೋಡುತ್ತಿದ್ದರೆ ಇನ್ನು ಕೆಲವೇ ದಿನಗಳಲ್ಲಿ ಫ್ರಾನ್ಸ್ ನೆಲದಲ್ಲೂ ಅರಾಜಕತೆ ಸೃಷ್ಟಿ ಆಗುತ್ತಾ? ಎಂಬ ಪ್ರಶ್ನೆ ಮೂಡಿದೆ.

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್...
2024ರ ಸಮಯದಲ್ಲಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ತುರ್ತು ಚುನಾವಣೆಗೆ ಆದೇಶ ನೀಡಿದ ನಂತರ ಪರಿಸ್ಥಿತಿ ಕೈಮೀರುತ್ತಾ ಬಂದಿದೆ. ಒಂದು ಕಡೆ ಬಲಪಂಥೀಯ ಪ್ರತಿಭಟನೆ & ಹಾಗೇ ಇನ್ನೊಂದು ಕಡೆ ಎಡಪಂಥೀಯ ಪ್ರತಿಭಟನೆಗಳು ಇದೀಗ ತೀವ್ರವಾಗುತ್ತಿವೆ. ಇದರ ನಡುವೆ ಸಿಲುಕಿ ಮ್ಯಾಕ್ರೋನ್ ಅಪ್ಪಚ್ಚಿಯಾಗಿದ್ದಾರೆ. ಆರ್ಥಿಕ ಸಮಸ್ಯೆಗಳ ನಡುವೆ ಇದೀಗ ರಾಜಕೀಯ ತಿಕ್ಕಾಟ ಕೂಡ ಅಲ್ಲಿನ ಸರ್ಕಾರ ಅಲ್ಲಾಡಿ ಹೋಗುವಂತೆ ಮಾಡಿದೆ. ಹೀಗೆ ಈ ಪರಿಸ್ಥಿತಿ ಮುಂದುವರಿದರೆ ಫ್ರಾನ್ಸ್ ಕೂಡ ನೇಪಾಳ ರೀತಿ ಆಗುತ್ತಾ ಅನ್ನೋ ಆತಂಕ ಇದೀಗ ಯುರೋಪ್ ಭಾಗದಲ್ಲಿ ಆವರಿಸಿದೆ.
ಭಾರತದ ನೆರೆಯ ದೇಶದಲ್ಲೂ ಕಿರಿಕ್
ಫ್ರಾನ್ಸ್ ಮಾತ್ರವಲ್ಲ ಭಾರತದ ನೆರೆಯ ದೇಶವಾದ ನೇಪಾಳ ನೆಲದಲ್ಲೂ ಹಿಂಸಾಚಾರ ನಡೆದಿದೆ. ನೇಪಾಳ ಪ್ರತಿಭಟನೆ ಹೇಗಿದೆ ಅಂದ್ರೆ, ನೇಪಾಳದ ಸಂಸತ್ ಕಟ್ಟಡಕ್ಕೂ ಬೆಂಕಿಯನ್ನ ಹಚ್ಚಲಾಗಿದೆ. ಹೌದು, ನೇಪಾಳದಲ್ಲಿ ಶುರುವಾಗಿರುವ ಹೋರಾಟದ ಬೆಂಕಿ ಈಗ ಇಡೀ ದೇಶವನ್ನೇ ಸುಟ್ಟುಹಾಕಿದೆ. ದಿಢೀರ್ ಅಂತಾ ನೇಪಾಳ ಸರ್ಕಾರ ಯುಟ್ಯೂಬ್, ಎಕ್ಸ್, ಇನ್ಸ್ಟಾಗ್ರಾಮ್ & ಫೇಸ್ಬುಕ್ ಸೇರಿದಂತೆ ಒಟ್ಟು 26 ದೊಡ್ಡ ಸೋಷಿಯಲ್ ಮೀಡಿಯಾ ಆಪ್ ಬ್ಯಾನ್ ಮಾಡಿತ್ತು. ಈ ಸುದ್ದಿಯನ್ನು ತಿಳಿದ ಲಕ್ಷಾಂತರ ನೇಪಾಳ ಯುವತಿಯರು & ಯುವಕರು ಬೀದಿ ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications