ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಮರ್ಧಾತ್ಮಕ ಪರೀಕ್ಷೆ ತರಬೇತಿ
ಬೆಂಗಳೂರು, ಜುಲೈ 11 : ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ. ಈ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳಿಗೆ ಉಚಿತವಾಗಿ ಸರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಸಿಗಲಿದೆ.
ಹೌದು, ಪದವಿ ಪೂರ್ವ ಶಿಕ್ಷಣ ಇಲಾಖೆ ಇಂತಹ ಯೋಜನೆಯನ್ನು ಪ್ರಾಯೋಗಿಕ ಜಾರಿಗೆ ತರುತ್ತಿದೆ. 2018-19ನೇ ಸಾಲಿನಿಂದ ರಾಜ್ಯದ 250 ಪಿಯುಸಿ ಕಾಲೇಜುಗಳಲ್ಲಿ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.
ಪಿಯು ವಿದ್ಯಾರ್ಥಿಗಳು ಮುಚ್ಚಳಿಕೆ ಬರೆದು ಕೊಡುವುದು ಇನ್ನು ಕಡ್ಡಾಯ
ಸಿಇಟಿ, ನೀಟ್, ಜೆಇಇ ಮುಂತಾದ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಆನ್ಲೈನ್ ಮೂಲಕ ತರಗತಿಗಳು ನಡೆಯಲಿದ್ದು, ತಜ್ಞರು ಬೇರೆ ಕಡೆ ಕುಳಿತು ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ.
ಪ್ರತಿ ಬಾರಿ ತಜ್ಞರ ಪಾಠ ಮುಕ್ತಾಯಗೊಂಡ ಬಳಿಕ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಲು ಅವಕಾಶ ನೀಡಲಾಗುತ್ತದೆ. ಪ್ರತಿ ವಾರ ವಿದ್ಯಾರ್ಥಿಗಳಿಗೆ 6 ತರಗತಿಗಳನ್ನು ಮಾಡಲಾಗುತ್ತದೆ. ಗ್ರಾಮೀಣ ಭಾಗದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಸಹಾಯಕವಾಗಲಿ ಎಂದು ಇಂತಹ ತರಬೇತಿ ನಡೆಸಲಾಗುತ್ತಿದೆ.
2,997 ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರದ ತಯಾರಿ
ಈ ತರಬೇತಿಯಿಂದಾಗಿ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶಾತಿಯೂ ಹೆಚ್ಚಳವಾಗಲಿದೆ. ವಿದ್ಯಾರ್ಥಿಗಳಿಗೆ ಸ್ಮರ್ಧಾತ್ಮಕ ಪರೀಕ್ಷೆ ಬರೆಯಲು ಸಹಾಯಕವಾಗಲಿದೆ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.