'ಪಾಕ್ನಲ್ಲಿ ಮತ್ತೆ ಸ್ವಾತಂತ್ರ್ಯ ಹೋರಾಟ ಆರಂಭ' ಎಂದ ಇಮ್ರಾನ್ ಖಾನ್
ಇಸ್ಲಾಮಾಬಾದ್, ಏಪ್ರಿಲ್ 11: ತಮ್ಮ ವಿರುದ್ಧದ ಅವಿಶ್ವಾಸ ಮತದಲ್ಲಿ ಹೀನಾಯ ಸೋಲಿನ ಬಳಿಕ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೊದಲ ಹೇಳಿಕೆಯನ್ನು ನೀಡಿದ್ದಾರೆ. ಈ ಅವಿಶ್ವಾಸ ಮತವು 'ವಿದೇಶಿ ಸಂಚು' ಎಂಬ ತಮ್ಮ ಈ ಹಿಂದಿನ ಹೇಳಿಕೆಯನ್ನು ಇಮ್ರಾನ್ ಖಾನ್ ಪುನರುಚ್ಚರಿಸಿದ್ದಾರೆ.
"ಸ್ವಾತಂತ್ರ್ಯ ಹೋರಾಟ ಇಂದಿನಿಂದ ಪ್ರಾರಂಭವಾಗುತ್ತದೆ," ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಈ ನಡುವೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಾರ್ಟಿ (ಪಿಟಿಐ) ರಾಷ್ಟ್ರೀಯ ಅಸೆಂಬ್ಲಿಗೆ ರಾಜೀನಾಮೆ ನೀಡಲು ನಿರ್ಧರಿಸಿದೆ.
"ಪಾಕಿಸ್ತಾನವು 1947 ರಲ್ಲಿ ಸ್ವತಂತ್ರ ರಾಜ್ಯವಾಯಿತು. ಆದರೆ ಆಡಳಿತ ಬದಲಾವಣೆಯ ವಿದೇಶಿ ಪಿತೂರಿಯ ವಿರುದ್ಧ ಸ್ವಾತಂತ್ರ್ಯ ಹೋರಾಟವು ಇಂದು ಮತ್ತೆ ಪ್ರಾರಂಭವಾಗುತ್ತದೆ. ಯಾವಾಗಲೂ ದೇಶದ ಜನರು ತಮ್ಮ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುತ್ತಾರೆ," ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಪಿಟಿಐನ ಕೇಂದ್ರೀಯ ಕಾರ್ಯಕಾರಿ ಸಮಿತಿಯ (ಸಿಇಸಿ) ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದು, ಭವಿಷ್ಯದ ಕ್ರಮದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿಯಾಗಿ ನಾಮನಿರ್ದೇಶನ ಮಾಡುವ ಬಗ್ಗೆ ಪಕ್ಷದ ಮೀಸಲಾತಿಯನ್ನು ತಿಳಿಸದಿದ್ದರೆ ನಾಳೆ (ಸೋಮವಾರ) ತಮ್ಮ ಪಕ್ಷವು ರಾಷ್ಟ್ರೀಯ ಅಸೆಂಬ್ಲಿಗೆ ರಾಜೀನಾಮೆ ನೀಡಲಿದೆ ಎಂದು ಹಿರಿಯ ಪಿಟಿಐ ನಾಯಕ ಮತ್ತು ಮಾಜಿ ಮಾಹಿತಿ ಸಚಿವ ಫವಾದ್ ಚೌಧರಿ ಘೋಷಿಸಿದ್ದಾರೆ ಎಂದು ಪಾಕಿಸ್ತಾನದ ಸುದ್ದಿ ಮಾಧ್ಯಮ ವರದಿ ಮಾಡಿದೆ.
Pakistan became an independent state in 1947; but the freedom struggle begins again today against a foreign conspiracy of regime change. It is always the people of the country who defend their sovereignty & democracy.
— Imran Khan (@ImranKhanPTI) April 10, 2022
ಎಲ್ಲ ಸದಸ್ಯರು ರಾಜೀನಾಮೆ ನೀಡುತ್ತಾರೆ: ಪಿಟಿಐ ನಾಯಕ
"ಈ ಕಳ್ಳರು ಮತ್ತು ದರೋಡೆಕೋರರೊಂದಿಗೆ ನಾವು ಅಸೆಂಬ್ಲಿಯಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಎಂದು ನಿರ್ಧರಿಸಲಾಗಿದೆ. ಎಲ್ಲರೂ ಒಮ್ಮತದ ಒಮ್ಮತದಿಂದ ನಾವು ಎನ್ಎಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲಿದ್ದೇವೆ. ಎಲ್ಲ ಸದಸ್ಯರು ರಾಜೀನಾಮೆ ನೀಡುತ್ತಾರೆ," ಎಂದು ಪಾಕಿಸ್ತಾನದ ಪತ್ರಿಕೆ ಡಾನ್ ಪಿಟಿಐ ನಾಯಕ ಮತ್ತು ಮಾಜಿ ಮಾಹಿತಿ ಸಚಿವ ಫವಾದ್ ಚೌಧರಿ ಹೇಳಿಕೆ ಉಲ್ಲೇಖಿಸಿದೆ.

ಇನ್ನು ವಿರೋಧ ಪಕ್ಷವನ್ನು "ದರೋಡೆಕೋರರು, ಲೂಟಿಕೋರರ ಪಕ್ಷ" ಎಂದು ಕರೆದ ಮಾಜಿ ಆಂತರಿಕ ಸಚಿವ ಶೇಖ್ ರಶೀದ್, ವಿರೋಧ ಪಕ್ಷದವರ ಜೊತೆಗೆ ವಿಧಾನಸಭೆಯಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಅವಿಶ್ವಾಸ ಮತದಲ್ಲಿ ಸೋಲು ಕಂಡು ದಾಖಲೆ ಬರೆದ ಇಮ್ರಾನ್
ತನ್ನ ವಿರೋಧ ಪಕ್ಷದ ಅವಿಶ್ವಾಸ ಮತದ ಏಸೆತಕ್ಕೆ ಇಮ್ರಾನ್ ಖಾನ್ ಔಟ್ ಆಗಿದ್ದಾರೆ. ಅದು ಕೂಡಾ ತನ್ನ ಮೊದಲ ಇನ್ನಿಂಗ್ಸ್ನ ಮಧ್ಯದಲ್ಲೇ ರಾಜಕೀಯ ಪಂದ್ಯದಿಂದ ಹೊರಹಾಕಲ್ಪಟ್ಟಿದ್ದಾರೆ. 342 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪರಿಣಾಮಕಾರಿಯಾಗಿ ಬಹುಮತವನ್ನು ಕಳೆದುಕೊಂಡ ಖಾನ್ ಸಂಸತ್ತನ್ನು ವಿಸರ್ಜಿಸಿದರು. ಉಪ ಸ್ಪೀಕರ್ ಅವರು ಇಮ್ರಾನ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ತಡೆದ ನಂತರ ಏಪ್ರಿಲ್ 3 ರಂದು ಹೊಸ ಚುನಾವಣೆಗೆ ಇಮ್ರಾನ್ ಕರೆ ನೀಡಿದರು. ಈ ನಡುವೆ ಮುಖ್ಯ ನ್ಯಾಯಮೂರ್ತಿ ಉಮರ್ ಅಟಾ ಬಂಡಿಯಲ್ ನೇತೃತ್ವದ ಸುಪ್ರೀಂ ಕೋರ್ಟ್ನ ಐವರು ಸದಸ್ಯರ ಪೀಠವು ಏಪ್ರಿಲ್ 7 ರಂದು 5-0 ಮಹತ್ವದ ತೀರ್ಪಿನಲ್ಲಿ ಉಪ ಸ್ಪೀಕರ್ ಅವರ ತೀರ್ಪನ್ನು ತಳ್ಳಿಹಾಕಿದೆ.
ಅವಿಶ್ವಾಸ ಮತ ಮಂಡನೆಗಾಗಿ ಏಪ್ರಿಲ್ 9 ರಂದು ಅಧಿವೇಶನವನ್ನು ಆಯೋಜಿಸಲು ಸ್ಪೀಕರ್ಗೆ ಸುಪ್ರಿಂ ಕೋರ್ಟ್ ಆದೇಶ ನೀಡಿತು. 2018 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅವರ ಪಕ್ಷದಲ್ಲಿನ ಪಕ್ಷಾಂತರಗಳು, ಮಿತ್ರ ಪಕ್ಷಗಳ ಜೊತೆಗಿನ ಬಿರುಕುಗಳು ಖಾನ್ ರಾಜಕೀಯ ಆಟದಲ್ಲಿ ಸೋಲುವಂತೆ ಮಾಡಿದೆ. ವಿಶ್ವಾಸ ಮತದ ಮೂಲಕ ತಮ್ಮ ಭವಿಷ್ಯವನ್ನು ನಿರ್ಧಾರ ಮಾಡಿಕೊಂಡ ಪಾಕಿಸ್ತಾನದ ಮೊದಲ ಪ್ರಧಾನಿ ಇಮ್ರಾನ್ ಆಗಿದ್ದಾರೆ.
Recommended Video
{document2}
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications