Breaking: ಯುಕೆ ಪ್ರಧಾನಿ ಜಾನ್ಸನ್ ಸರ್ಕಾರದ ಇಬ್ಬರು ಸಚಿವರ ರಾಜೀನಾಮೆ
ಲಂಡನ್, ಜುಲೈ 6: ಯುನೈಟೆಡ್ ಕಿಂಗ್ ಡಮ್ ನಲ್ಲಿ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಸರ್ಕಾರಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳುತ್ತಿದೆ. ಬುಧವಾರ ಸರ್ಕಾರದ ಮತ್ತಿಬ್ಬರು ಸಚಿವರು ರಾಜೀನಾಮೆ ಸಲ್ಲಿಸಿರುವುದು ರಾಜಕೀಯ ಬಿಕ್ಕಟ್ಟು ಸೃಷ್ಟಿಯ ಸುಳಿವು ನೀಡಿದೆ.
ಮಕ್ಕಳು ಮತ್ತು ಕುಟುಂಬಗಳ ಸಚಿವ ವಿಲ್ ಕ್ವಿನ್ಸ್ ಅವರು "ನನ್ನ ರಾಜೀನಾಮೆಯನ್ನು ನೀಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ" ಎಂದು ಹೇಳಿದ್ದಾರೆ. ಆದರೆ ಕಿರಿಯ ಸಾರಿಗೆ ಸಚಿವ ಲಾರಾ ಟ್ರಾಟ್ ಸರ್ಕಾರದಲ್ಲಿ ನಂಬಿಕೆ ಕಳೆದುಕೊಂಡಿದ್ದಕ್ಕಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ.
ಮಂಗಳವಾರವಷ್ಟೇ ಯುಕೆ ಹಣಕಾಸು ಸಚಿವ ರಿಷಿ ಸುನಕ್ ಮತ್ತು ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸರ್ಕಾರದಿಂದ ಹೊರ ಬಂದಿದ್ದರು. ಇದರ ಬೆನ್ನಲ್ಲೇ ಮತ್ತಿಬ್ಬರು ಸಚಿವರು ರಾಜೀನಾಮೆ ನೀಡಿರುವುದು ಯುಕೆಯಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಗೆ ಕಾರಣವಾಗುತ್ತಿದೆ.

ಭಾರತದ ಖ್ಯಾತ ಉದ್ಯಮಿ ನಾರಾಯಣಮೂರ್ತಿ ಅಳಿಯ ಹಾಗೂ ಯುಕೆ ಹಣಕಾಸು ಸಚಿವ ರಿಷಿ ಸುನಕ್ ರಾಜೀನಾಮೆ ಬೆನ್ನಲ್ಲೇ ಶಿಕ್ಷಣ ಸಚಿವ ನಾಧಿಮ್ ಜಹಾವಿ ಅನ್ನು ನೂತನ ಹಣಕಾಸು ಸಚಿವರನ್ನಾಗಿ ನೇಮಿಸಿಕೊಳ್ಳಲಾಯಿತು. ಅದೇ ರೀತಿ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ರಾಜೀನಾಮೆ ಹಿನ್ನೆಲೆ ಸ್ಟೀವ್ ಬಾರ್ಕ್ಲೇ ಅವರಿಗೆ ಆರೋಗ್ಯ ಖಾತೆಯ ಜವಾಬ್ದಾರಿಯನ್ನು ವಹಿಸಲಾಯಿತು.
"ಉಕ್ರೇನ್ ಯುದ್ಧವು ಯುನೈಟೆಡ್ ಕಿಂಗ್ ಡಮ್ ಮೇಲೆ ಯಾವ ರೀತಿಯ ಪರಿಣಾಮ ಬೀರಬಲ್ಲದು ಎಂಬುದರ ಬಗ್ಗೆ ಚರ್ಚಿಸಲಾಗುತ್ತಿದೆ. ಜೀವನದ ವೆಚ್ಚ ಹೆಚ್ಚುತ್ತಿರುವುದು ಮತ್ತು ಸರ್ಕಾರದ ಮೇಲೆ ಯಾವ ರೀತಿ ಪ್ರಭಾವ ಬೀರಿತು. ರಾಜಕೀಯದಲ್ಲಿ ಸಮಗ್ರತೆ ಮತ್ತು ಕಾನೂನಿನ ನಿಯಮದ ಬಗ್ಗೆ ಸಂಪರ್ಕ ಸಮಿತಿಯ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications