Breaking: ದೇಶಭ್ರಷ್ಟ ಉದ್ಯಮಿ ಮೆಹುಲ್ ಚೋಕ್ಸಿ ನಾಪತ್ತೆ
ಆಂಟಿಗಾ, ಮೇ 25: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ಭಾರತದ ನಂ.1 ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ವಜ್ರ ವ್ಯಾಪಾರಿ, ಗೀತಾಂಜಲಿ ಸಮೂಹದ ಮೆಹುಲ್ ಚೋಕ್ಸಿ ನಾಪತ್ತೆ. ಭಾರತ ತೊರೆದು ಅಂಟಿಗಾ ದ್ವೀಪ ರಾಷ್ಟ್ರದಲ್ಲಿ ನೆಲೆ ಕಂಡುಕೊಂಡಿದ್ದ ಉದ್ಯಮಿ ಈಗ ಅಲ್ಲಿಂದಲೂ ಕಾಲ್ಕಿತ್ತಿದ್ದಾನೆ ಎಂಬ ವರದಿ ಬಂದಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮುಂಬೈ ಶಾಖೆಯೊಂದರಲ್ಲಿ 13,500 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಜತೆಗೆ ಮೆಹುಲ್ ಚೊಕ್ಸಿ ಕೂಡಾ ಆರೋಪಿಯಾಗಿದ್ದು, ಕೆರಿಬಿಯನ್ ದ್ವೀಪ ರಾಷ್ಟ್ರ ಆಂಟಿಗಾ ಹಾಗೂ ಬರ್ಬುಡಾದಲ್ಲಿ 2017ರಿಂದಲೇ ಪೌರತ್ವ ಪಡೆದುಕೊಂಡಿದ್ದಾರೆ.
Antiguanewsroom ಎಂಬ ಸ್ಥಳೀಯ ಮಾಧ್ಯಮ ಸಂಸ್ಥೆ ವರದಿ ಪ್ರಕಾರ, ಭಾನುವಾರದಿಂದ ಚೋಕ್ಸಿಗಾಗಿ ತೀವ್ರ ಹುಡುಕಾಟ ಜಾರಿಯಲ್ಲಿದೆ. ಈ ಸುದ್ದಿಯನ್ನು ಪೊಲೀಸ್ ಆಯುಕ್ತ ಅಟ್ಲಿ ರೊಡ್ನಿ ಖಚಿತಪಡಿಸಿದ್ದಾರೆ.

ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ 5,492 ಕೋಟಿ ರು ಸಾಲವನ್ನು ರಿಟನ್ ಆಫ್ ಮಾಡಲಾಗಿದೆ. ಚೋಕ್ಸಿ ಅವರು ಒಟ್ಟಾರೆ 70, 000 ಕೋಟಿ ರುಗೂ ಅಧಿಕ ಸಾಲ ಹೊಂದಿದ್ದು, ಅತಿದೊಡ್ಡ ಸಾಲಗಾರ ಉದ್ದೇಶಪೂರ್ವಕ ಸುಸ್ತಿದಾರ ಎನಿಸಿಕೊಂಡಿದ್ದಾರೆ ಎಂದು ಆರ್ಬಿಐ ಹೇಳಿದೆ.
ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೋಟಿಸ್ ಪಡೆದಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿ ಅವರು ಭಾರತದ ಪೌರತ್ವವನ್ನು ತೊರೆದಿದ್ದಾರೆ. ರಾಯಭಾರ ಕಚೇರಿಗೆ ಭಾರತದ ಪಾಸ್ ಪೋರ್ಟ್ ನೀಡಿದ್ದಾರೆ. ಜೊತೆಗೆ ಜಾಲಿ ಹಾರ್ಬರ್ ಮಾರ್ಕ್ಸ್ ನಲ್ಲಿ ವಾಸವಾಗಿದ್ದೇನೆ ಎಂದು ಹೊಸ ವಿಳಾಸವನ್ನು ನೀಡಿದ್ದಾರೆ.
ಮೆಹುಲ್ ಚೋಕ್ಸಿ ಅವರ ಪಾಸ್ ಪೋರ್ಟ್ (Z-3396732) ಈಗ ಅಂಟಿಗುವಾದಲ್ಲಿರುವ ಭಾರತದ ರಾಯಭಾರ ಕಚೇರಿಯಲ್ಲಿದೆ. ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ(ಇಡಿ) ಹಾಗೂ ಸಿಬಿಐ ತಂಡಗಳು, ಚೋಕ್ಸಿ ವಿರುದ್ಧ ದೋಷರೋಪಣ ಪಟ್ಟಿ ಸಲ್ಲಿಸಿದ್ದು, ಭಾರತಕ್ಕೆ ಕರೆತಂದು ವಿಚಾರಣೆ ನಡೆಸಲು ಯತ್ನಿಸುತ್ತಿವೆ. ಆದರೆ, ಆರ್ಥಿಕ ಅಪರಾಧಿಗಳ ಹಸ್ತಾಂತರಕ್ಕಾಗಿ ಯಾವುದೇ ಒಪ್ಪಂದವನ್ನು ಆಂಟಿಗುವಾ ಹಾಗೂ ಭಾರತ ಹೊಂದಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications