ಭಾರತದ ಹೆಗಲಿಗೆ ಜಿ-20 ಅಧ್ಯಕ್ಷ ಸ್ಥಾನ: ಪ್ರತಿ ಭಾರತೀಯನ ಹೆಮ್ಮೆ ಎಂದ ಪ್ರಧಾನಿ ಮೋದಿ
ಇಂಡೋನೇಷ್ಯಾ, ನವೆಂಬರ್ 16: ಇಂಡೋನೇಷ್ಯಾದಲ್ಲಿ ನಡೆದ ಬಾಲಿ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಅವರು ಜಿ-20 ಅಧ್ಯಕ್ಷತೆ ಸ್ಥಾನವನ್ನು ಭಾರತಕ್ಕೆ ಹಸ್ತಾಂತರಿಸಿದರು. ಡಿಸೆಂಬರ್ 1ರಿಂದ ಜಿ20 ಅಧ್ಯಕ್ಷ ಸ್ಥಾನವನ್ನು ಭಾರತ ಅಧಿಕೃತವಾಗಿ ವಹಿಸಿಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶೃಂಗಸಭೆಯಲ್ಲಿ ಹೇಳಿದ್ದಾರೆ.
ಇನ್ನು ಮುಂದಿನ ವರ್ಷದ G-20 ಶೃಂಗಸಭೆಯು ರಾಜಧಾನಿ ನವದೆಹಲಿಯಲ್ಲಿ ಎರಡು ದಿನಗಳ ಕಾಲ (ಸೆಪ್ಟೆಂಬರ್ 9 ಮತ್ತು 10) ನಡೆಯಲಿದೆ.
ಇಂಡೋನೇಷ್ಯಾ ಜಿ 20 ಅಧ್ಯಕ್ಷ ಸ್ಥಾನವನ್ನು ಭಾರತಕ್ಕೆ ಹಸ್ತಾಂತರಿಸಲಾಗಿದ್ದು, ಇದರೊಂದಿಗೆ ಜಿ 20ರ ಬಾಲಿ ಶೃಂಗಸಭೆಯು ಇಂದು ಎರಡನೇ ದಿನಕ್ಕೆ ಕೊನೆಗೊಂಡಿತು. ಈಗ ಮುಂದಿನ ವರ್ಷ ನಡೆಯಲಿರುವ ಸಮ್ಮೇಳನದ ಅಧ್ಯಕ್ಷತೆಯನ್ನು ಭಾರತ ವಹಿಸಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, "ಜಿ-20 ನೇತೃತ್ವ ವಹಿಸುವುದು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ವಿಷಯವಾಗಿದೆ. ನಾವು ನಮ್ಮ ವಿವಿಧ ನಗರಗಳು ಮತ್ತು ರಾಜ್ಯಗಳಲ್ಲಿ ಸಭೆಗಳನ್ನು ನಡೆಸುತ್ತೇವೆ. ನಮ್ಮ ಅತಿಥಿಗಳಿಗೆ ಭಾರತೀಯ ವೈವಿಧ್ಯತೆ, ಅಂತರ್ಗತ ಸಂಪ್ರದಾಯಗಳನ್ನು ಪರಿಚಯಿಸಲಾಗುವುದು. ನೀವು ಸಾಂಸ್ಕೃತಿಕ ಶ್ರೀಮಂತಿಕೆಯ ಸಂಪೂರ್ಣ ಅನುಭವವನ್ನು ಪಡೆಯುತ್ತೀರಿ ಎಂದು ಪ್ರಧಾನಿ ಮೋದಿ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಭರವಸೆ ಮೂಡಿಸಿದರು.

ಜಿ-20 ಕಾರ್ಯಸೂಚಿಯಲ್ಲಿ ಮಹಿಳಾ ನಾಯಕತ್ವ
ಇದರೊಂದಿಗೆ ಮಹಿಳೆಯರ ಸಹಭಾಗಿತ್ವವಿಲ್ಲದೆ ವಿಶ್ವದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ನಮ್ಮ ಜಿ-20 ಕಾರ್ಯಸೂಚಿಯಲ್ಲಿಯೂ ಮಹಿಳಾ ನಾಯಕತ್ವಕ್ಕೆ ಆದ್ಯತೆ ನೀಡಬೇಕು. ಇದರೊಂದಿಗೆ, "ಭಾರತದ ಜಿ -20 ಅಧ್ಯಕ್ಷ ಸ್ಥಾನವು ಮಹತ್ವಾಕಾಂಕ್ಷೆ, ನಿರ್ಣಾಯಕ ಮತ್ತು ಕಾರ್ಯ-ಆಧಾರಿತವಾಗಲಿದೆ ಎಂದು ನಾನು ಭರವಸೆ ನೀಡುತ್ತೇನೆ' ಎಂದು ಮೋದಿ ಹೇಳಿದರು.

ಭೌಗೋಳಿಕ-ರಾಜಕೀಯ ಉದ್ವಿಗ್ನತೆ, ಆರ್ಥಿಕ ಮಂದಗತಿ, ಹೆಚ್ಚಿದ ಇಂಧನ ಬೆಲೆಗಳು, ಸಾಂಕ್ರಾಮಿಕ ರೋಗದ ಅಡ್ಡಪರಿಣಾಮಗಳು ಮತ್ತು ಇತರ ಸಮಸ್ಯೆಗಳಿಂದ ಜಗತ್ತು ಹೆಣಗಾಡುತ್ತಿರುವ ಸಮಯದಲ್ಲಿ ಭಾರತವು ಜಿ-20 ಜವಾಬ್ದಾರಿ ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂತಹ ಹೊತ್ತಿನಲ್ಲಿ ವಿಶ್ವವೇ ಜಿ-20ಯತ್ತ ಭರವಸೆಯ ಕಣ್ಣಿನಿಂದ ನೋಡುತ್ತಿದೆ ಎಂದರು.
It is India's time now!
— Piyush Goyal (@PiyushGoyal) November 16, 2022
The new President of the G20 🇮🇳 pic.twitter.com/ZQrDU72xWh
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications