ಗಲ್ವಾನ್ ಕಣಿವೆ ಸಂಘರ್ಷ: ತನ್ನ ಸೈನಿಕರ ಸಾವನ್ನು ಕೊನೆಗೂ ಒಪ್ಪಿಕೊಂಡ ಚೀನಾ
ಬೀಜಿಂಗ್, ಫೆಬ್ರವರಿ 19: ಕಳೆದ ವರ್ಷದ ಜೂನ್ ತಿಂಗಳಲ್ಲಿ ಪೂರ್ವ ಲಡಾಖ್ ಗಡಿಯಲ್ಲಿನ ಗಲ್ವಾನ್ ಕಣಿವೆಯಲ್ಲಿ ನಡೆದ ಮಾರಾಮಾರಿಯಲ್ಲಿ ತನ್ನ ಕಡೆಯ ಸೈನಿಕರು ಮೃತಪಟ್ಟಿರುವುದನ್ನು ಚೀನಾ ಕೊನೆಗೂ ಅಧಿಕೃತವಾಗಿ ಒಪ್ಪಿಕೊಂಡಿದೆ. ಭಾರತದ ಸೈನಿಕರು ಹಾಗೂ ಪಿಎಲ್ಎ ಸೈನಿಕರ ಮಧ್ಯೆ ನಡೆದ ಬಡಿದಾಟದಲ್ಲಿ ಮೃತಪಟ್ಟ ತನ್ನ ನಾಲ್ವರು ಸೈನಿಕರ ವಿವರಗಳನ್ನು ಅದು ಬಹಿರಂಗಪಡಿಸಿದೆ.
ಘಟನೆ ನಡೆದು ಸುಮಾರು ಎಂಟು ತಿಂಗಳವರೆಗೂ ಗಲ್ವಾನ್ ಕಣಿವೆ ಹಿಂಸಾಚಾರದಲ್ಲಿ ಸತ್ತ ತನ್ನ ಸೈನಿಕರ ಬಗ್ಗೆ ವಿವರ ನೀಡಲು ಚೀನಾ ನಿರಾಕರಿಸಿತ್ತು.
ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಪತ್ರಿಕೆಯ ವರದಿಯು, ಭಾರತದೊಂದಿಗಿನ ಗಡಿ ಸಂಘರ್ಷದಲ್ಲಿ ಮಾಡಿದ ತ್ಯಾಗಕ್ಕಾಗಿ ಐವರು ಚೀನೀ ಮುಂಚೂಣಿ ಅಧಿಕಾರಿಗಳು ಹಾಗೂ ಸೈನಿಕರನ್ನು ಸೆಂಟ್ರಲ್ ಮಿಲಿಟರಿ ಕಮಿಷನ್ 'ಗುರುತಿಸಿದೆ' ಎಂದು ಹೇಳಿದೆ.

'2020ರ ಗಲ್ವಾನ್ ಕಣಿವೆಯಲ್ಲಿ ಭಾರತದೊಂದಿಗೆ ಸಂಭವಿಸಿದ ಗಡಿ ಮುಖಾಮುಖಿಯಲ್ಲಿ ನೀಡಿದ ಕೊಡುಗೆಗಾಗಿ ಕರಕೋರಮ್ ಮೌಂಟೇನ್ಸ್ನಲ್ಲಿ ನಿಯೋಜಿತರಾಗಿದ್ದ ಐವರು ಚೀನೀ ಮುಂಚೂಣಿ ಅಧಿಕಾರಿಗಳು ಮತ್ತು ಸೈನಿಕರನ್ನು ಸೆಂಟ್ರಲ್ ಮಿಲಿಟರಿ ಕಮಿಷನ್ ಗುರುತಿಸಿದೆ' ಎಂದು ಅದು ತಿಳಿಸಿದೆ.
ಚೆನ್ ಹಾಂಗ್ಜುನ್, ಚೆನ್ ಕ್ಸಿಯಾಂಗ್ರಾಂಗ್, ಕ್ಸಿಯಾವೊ ಸಿಯುಯಾನ್ ಮತ್ತು ವಾಂಗ್ ಝೌರಾನ್ ಅವರು 'ವಿದೇಶಿ ಪಡೆಗಳ' ವಿರುದ್ಧದ ಕೆಚ್ಚೆದೆದೆಯ ಹೋರಾಟದಲ್ಲಿ ಮೃತಪಟ್ಟಿದ್ದಾರೆ. ಚೆನ್ ಹಾಂಗ್ಜುನ್ರನ್ನು 'ಗಡಿಯನ್ನು ರಕ್ಷಿಸಿದ ನಾಯಕ' ಎಂದು ಗೌರವಿಸಿದ್ದರೆ, ಉಳಿದ ಮೂವರಿಗೆ ಮೊದಲ ದರ್ಜೆಯ ಅರ್ಹತಾ ಗೌರವ ನೀಡಲಾಗಿದೆ ಎಂದು ಹೇಳಿದೆ.
ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾದ ಸೈನಿಕರು ಬಡಿಗೆ, ರಾಡ್ ಮುಂತಾದವುಗಳಿಂದ ಹೊಡೆದಾಡಿಕೊಂಡಿದ್ದರು. ಘಟನೆಯಲ್ಲಿ ಭಾರತದ 20 ಸೈನಿಕರು ಮೃತಪಟ್ಟಿದ್ದರು. ಆದರೆ ಚೀನಾ ಇದುವರೆಗೂ ತನ್ನ ಕಡೆಯಲ್ಲಿ ಉಂಟಾದ ಸಾವು ನೋವಿನ ಮಾಹಿತಿ ನೀಡಿರಲಿಲ್ಲ. ತನ್ನ ಸೈನಿಕರು ಸತ್ತಿದ್ದಾರೆ ಎನ್ನುವುದು ಸುಳ್ಳು ಸುದ್ದಿ ಎಂದು ಹೇಳಿತ್ತು.
ಈ ಸಂಘರ್ಷದಲ್ಲಿ ಚೀನಾದ 45 ಸೈನಿಕರು ಮೃತಪಟ್ಟಿದ್ದಾರೆ ಎಂದು ರಷ್ಯಾದ ಸುದ್ದಿಸಂಸ್ಥೆ ಇತ್ತೀಚೆಗೆ ವರದಿ ಮಾಡಿತ್ತು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications