Nepal Protest: ನೇಪಾಳ ಅಲ್ಲೋಲ & ಕಲ್ಲೋಲ, ಮಾಜಿ ನ್ಯಾಯಮೂರ್ತಿಗೆ ಪ್ರಧಾನಿ ಪಟ್ಟ?
ನೇಪಾಳ ಪ್ರತಿಭಟನೆ ಜೋರಾಗಿದ್ದು, ಯುವ ಸಮುದಾಯ ಅಂದ್ರೆ ಜೆನ್-ಜೀ ಹೋರಾಟ ಇದೀಗ ಮತ್ತಷ್ಟು ತೀವ್ರವಾಗಿದೆ. ನೇಪಾಳ ಸೇನೆ ಕೊಟ್ಟಿರುವ ಎಚ್ಚರಿಕೆ ಹೊರತಾಗಿಯೂ ಈಗ ಅಲ್ಲಿ ಭಾರಿ ದೊಡ್ಡ ಹಿಂಸಾಚಾರ ಭುಗಿಲೆದ್ದಿದ್ದು, ಮುಂದಿನ ಪರಿಸ್ಥಿತಿ ಏನಾಗುತ್ತೋ? ಅಂತಾ ಅಲ್ಲಿನ ಜನರು ಚಿಂತೆ ಮಾಡುವಂತೆ ಆಗಿದೆ. ಇಂತಹ ಸಮಯದಲ್ಲೇ, ನೇಪಾಳ ಅಲ್ಲೋಲ & ಕಲ್ಲೋಲ, ಮಾಜಿ ನ್ಯಾಯಮೂರ್ತಿಗೆ ಪ್ರಧಾನಿ ಪಟ್ಟ?
ನೇಪಾಳ ಪ್ರತಿಭಟನೆ ಹೇಗಿದೆ ಅಂದ್ರೆ, ನೇಪಾಳದ ಸಂಸತ್ ಕಟ್ಟಡಕ್ಕೂ ಬೆಂಕಿಯನ್ನ ಹಚ್ಚಲಾಗಿದೆ. ಹೌದು, ನೇಪಾಳದಲ್ಲಿ ಶುರುವಾಗಿರುವ ಹೋರಾಟದ ಬೆಂಕಿ ಈಗ ಇಡೀ ದೇಶವನ್ನೇ ಸುಟ್ಟುಹಾಕಿದೆ. ದಿಢೀರ್ ಅಂತಾ ನೇಪಾಳ ಸರ್ಕಾರ ಯುಟ್ಯೂಬ್, ಎಕ್ಸ್, ಇನ್ಸ್ಟಾಗ್ರಾಮ್ & ಫೇಸ್ಬುಕ್ ಸೇರಿದಂತೆ ಒಟ್ಟು 26 ದೊಡ್ಡ ಸೋಷಿಯಲ್ ಮೀಡಿಯಾ ಆಪ್ ಬ್ಯಾನ್ ಮಾಡಿತ್ತು. ಈ ಸುದ್ದಿಯನ್ನು ತಿಳಿದ ಲಕ್ಷಾಂತರ ನೇಪಾಳ ಯುವತಿಯರು & ಯುವಕರು ಬೀದಿ ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿ ಇರುವಾಗಲೇ, ಹೋರಾಟಗಾರರು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ.

ಮಾಜಿ ನ್ಯಾಯಮೂರ್ತಿಗೆ ಪ್ರಧಾನಿ ಪಟ್ಟ?
ಹಿಂಸೆ... ಹಿಂಸೆ... ಹಿಂಸೆ... ಹೀಗೆಲ್ಲಾ, ನೇಪಾಳ ನೆಲದಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಹೌದು, ಇದೀಗ ನೇಪಾಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲ್ ಕರ್ಕಿ ಅವರ ಬೆನ್ನಿಗೆ ನಿಂತಿದ್ದಾರೆ. ಈ ಮೂಲಕ ಅವರನ್ನೇ ನೇಪಾಳದ ಮುಂದಿನ ಪ್ರಧಾನಿ ಮಾಡಿ ಅಂತಾ ಒತ್ತಾಯ ಮಾಡುತ್ತಿದ್ದಾರೆ. ಈ ಮೂಲಕ ಇದೀಗ ನೇಪಾಳ ನೆಲದಲ್ಲಿ ಮತ್ತೊಂದು ಕ್ರಾಂತಿಯ ಕಹಳೆ ಮೊಳಗಿದೆಯಾ? ಎಂಬ ಚರ್ಚೆ ಕೂಡ ಶುರು ಆಗಿದೆ.
ನೇಪಾಳ ನೆಲದಲ್ಲಿ ಕಂಡಲ್ಲಿ ಗುಂಡು ಆದೇಶ?
ನೇಪಾಳ ಪ್ರಧಾನಿ & ರಾಷ್ಟ್ರಪತಿ ತಮ್ಮ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತೆ ಹಿಂಸೆ ಭುಗಿಲೆದ್ದಿದೆ. ಪ್ರತಿಭಟನೆ ನಡೆಸುತ್ತಿರುವವರು ಬೆಂಕಿ ಹಚ್ಚುತ್ತಿದ್ದು, ಅಲ್ಲದೆ ಈ ರೀತಿಯಾಗಿ ಶುರುವಾಗಿದ್ದ ನೇಪಾಳ ಸೋಷಿಯಲ್ ಮೀಡಿಯಾ ಗಲಾಟೆಯಲ್ಲಿ 25 ಜನರ ಜೀವವೇ ಹೋಗಿದೆ. 500 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಇಂತಹ ಸ್ಥಿತಿಯಲ್ಲೇ ಮತ್ತೊಂದು ಸುದ್ದಿ ನೇಪಾಳ ನೆಲದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಹಾಗಾದ್ರೆ ಮುಖ್ಯ ನ್ಯಾಯಮೂರ್ತಿ ಸುಶೀಲ್ ಕರ್ಕಿ ಅವರ ಆಯ್ಕೆ ಗ್ಯಾರಂಟಿ ಆಯ್ತಾ? ಅನ್ನೋ ಪ್ರಶ್ನೆ ಕೂಡ ಮೂಡಿದೆ. ಇದಕ್ಕೆಲ್ಲಾ ಇನ್ನೇನು ಕೆಲ ದಿನಗಳಲ್ಲಿ ಉತ್ತರ ಸಿಗುವ ನಿರೀಕ್ಷೆ ಇದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications