ಕೊರೊನಾ ವಾರಿಯರ್ಸ್ಗಳಿಗೆ ಗೂಗಲ್ ಡೂಡಲ್ನಿಂದ ವಿಶೇಷ ಧನ್ಯವಾದ
ನವದೆಹಲಿ, ಏಪ್ರಿಲ್ 26: ಗೂಗಲ್ ಕೊರೊನಾ ವಾರಿಯರ್ಸ್ಗಾಗಿ ವಿಶೇಷ ಡೂಡಲ್ ರಚಿಸಿ ಧನ್ಯವಾದ ಅರ್ಪಿಸಿದೆ.
ವಿಶ್ವದೆಲ್ಲೆಡೆ ಕೊರೊನಾ ಸೋಂಕು ಎತೇಚ್ಚವಾಗಿದ್ದು, ಈ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಸೇವೆ ಮಾಡುತ್ತಿರುವ ಆರೋಗ್ಯ ಕಾರ್ಯಕರ್ತರು, ಸಂಶೋಧಕರಿಗೆ ಗೂಗಲ್ ಡೂಡಲ್ ವಿಶೇಷ ಧನ್ಯವಾದ ಸಲ್ಲಿಸಿದೆ.
ಏಪ್ರಿಲ್ 4 ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14 ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಹಾಗೂ ಏಪ್ರಿಲ್ 17 ರಿಂದ ದಿನ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3.5 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕೊರೊನಾ ವಾರಿಯರ್ಸ್ಗಳಾದ ವೈದ್ಯರು, ನರ್ಸ್ಗಳು, ತುರ್ತು ಸೇವಾ ಸಿಬ್ಬಂದಿ ಸೇರಿದಂತೆ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಲಾಗಿದೆ. ಗೂಗಲ್ ಅನ್ನು ತೆರೆದಾಗ ವಿಶೇಷವಾಗು ಗೂಗಲ್ ಎಂದು ಬರೆದಿರುವುದು ಕಾಣಸಿಗುತ್ತದೆ. ಹಾರ್ಟ್ ಚಿತ್ರವನ್ನೂ ಇದರಲ್ಲಿ ಸೇರಿಸಲಾಗಿದೆ.
ಕೋವಿಡ್-19 ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತಿರುವ ಎಲ್ಲಾ ಕಾರ್ಮಿಕರ ಗೌರವಾರ್ಥವಾಗಿ ಎಲ್ಲರೂ ಸಹ ಮನೆಯಲ್ಲಿಯೇ ಇರಬೇಕೆಂದು ಮನವಿ ಮಾಡಿದೆ.
ಕೊರೊನಾ ನಡುವೆ ಕೊರೊನಾ ವಾರಿಯರ್ಸ್ ಹಗಲಿರುಳು ಶ್ರಮಿಸುವುದೂ ಮುಂದುವರೆದಿದೆ. ಹೀಗಿರುವಾಗ ಕೊರೊನಾ ವೈರಸ್ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್ಗಳಿಗೆ ಕೃತಜ್ಞತೆ ಸಲ್ಲಿಸಲಾಗಿದೆ.
ಗೂಗಲ್ ಈವರೆಗೆ ತನ್ನ ಡೂಡಲ್ ಮೂಲಕ ಹಲವಾರು ಪ್ರಖ್ಯಾತ ವ್ಯಕ್ತಿಗಳ ಹುಟ್ಟುಹಬ್ಬ, ಹಬ್ಬಗಳು ಹಾಗೂ ದೇಶದ ಇತಿಹಾಸದಲ್ಲಿನ ಮಹತ್ವದ ದಿನಗಳನ್ನು ಸ್ಮರಿಸಿದೆ. ಮಹತ್ವದ ಸಂದರ್ಭಗಳನ್ನು ಗುರುತಿಸಲು ಗೂಗಲ್ ತನ್ನ ಲೋಗೋದಲ್ಲಿ ಬದಲಾವಣೆಗಳನ್ನು ಮಾಡುತ್ತದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications