ವಿಶ್ವ ಭೂ ದಿನಕ್ಕೆ ಗೂಗಲ್ ರಚಿಸಿದ ವಿಶೇಷ ಡೂಡಲ್ ಹೇಗಿದೆ ನೋಡಿ!
ಇಂದು ವಿಶ್ವ ಭೂದಿನ, ಗೂಗಲ್ ವಿಶೇಷವಾಗಿ ಈ ದಿನದ ಪ್ರಯುಕ್ತ ಡೂಡಲ್ ರಚಿಸಿದೆ.
ಕೊರೊನಾ ಸೋಂಕು ಮನುಕುಲಕ್ಕೆ ತಂದೊಡ್ಡಿರುವ ಆತಂಕದಿಂದ ವಿಶ್ವದ ಚಟುವಟಿಕೆಗಳೇ ಸ್ತಬ್ಧವಾಗಿವೆ. ಆದರೆ ಇದರ ಜತೆಗೆ ಹವಾಮಾನ ಬದಲಾವಣೆಯೂ ದೊಡ್ಡ ಮಟ್ಟದ ಅಪಾಯವನ್ನು ತಂದೊಡ್ಡುತ್ತಿದೆ.
1990ರವರೆಗೂ ಭೂ ದಿನದ ಚಿಂತನೆಗಳು ಅಷ್ಟೇನೂ ಪ್ರಚಾರಕ್ಕೆ ಬಂದಿರಲಿಲ್ಲ, 1990ರಲ್ಲಿ 141 ದೇಶಗಳ ಪ್ರತಿನಿಧಿಗಳನ್ನು ಒಳಗೊಂಡ ಜಾಗತಿಕ ವೇದಿಕೆಯಲ್ಲಿ ಈ ಚಿಂತನೆಗಳ ಮಹತ್ವವನ್ನು ಮನದಟ್ಟು ಮಾಡಿಕೊಡಲಾಯಿತು. 2010ರ ವೇಳೆ ಇದು, ವಿಶ್ವ ನಾಯಕರಿಗೆ ಪರಿಸರದ ಕುರಿತು ಸಂದೇಶವನ್ನು ಕಳುಹಿಸುವ ದಿನವಾಗಿ ಮಾರ್ಪಾಡಾಗಿತ್ತು.

1970ರಲ್ಲಿ ಕಂಡುಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಹೋರಾಟಗಳು ಈಗ ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿವೆ. ಒಂದು ಭೂಮಿ, ಒಂದು ಪರಿಸರ ಒಂದು ಮಾನವಕೋಟಿ ಎಂಬ ಧ್ವನಿ ವಿಶ್ವಾದ್ಯಂತ ಮೊಳಗಬೇಕಾದ ಅಗತ್ಯ ಹೆಚ್ಚಾಗಿದೆ.
ಗ್ರಾಫಿಕ್ಸ್ ಹಾಗೂ ಅನಿಮೇಷನ್ ಬಳಸಿ ಡೂಡಲ್ ಗೂಗಲ್ ವಿಶ್ವ ಭೂ ದಿನವನ್ನು ವಿಶೇಷವಾಗಿ ಆಚರಣೆ ಮಾಡಿದೆ. ಡೂಡಲ್ನಲ್ಲಿ ಗಿಡವನ್ನು ನೆಟ್ಟು ಈ ಭೂಮಿ ತಾಯಿಯನ್ನು ರಕ್ಷಿಸೋಣ ಎಂಬ ಸಂದೇಶವನ್ನು ನೀಡಲಾಗಿದೆ.
ಗೂಗಲ್ ಸೃಷ್ಟಿಸಿರುವ ಡೂಡಲ್ ಮೇಲೆ ಕ್ಲಿಕ್ ದಾಗ ವಿಡಿಯೋ ಪ್ಲೇ ಆಗುವ ರೀತಿ ಮಾಡಲಾಗಿದೆ. ಕಳೆದ 23 ವರ್ಷಗಳಿಂದ ವಿಶ್ವ ಭೂಮಿ ದಿನದಂದು ವಿಶೇಷ ಡೂಡಲ್ ಅರ್ಪಿಸುತ್ತಿರುವ ಗೂಗಲ್ ಸಾಕಷ್ಟು ಕುತೂಹಲಕಾರಿ ವಿಷಯಗಳನ್ನು ಜನತೆಗೆ ತಿಳಿಸುವ ಪ್ರಯತ್ನ ಮಾಡುತ್ತಿದೆ.
ವಿಶ್ವ ಭೂ ದಿನಾಚರಣೆ ಎನ್ನುವುದು ಯಾವುದೋ ಒಂದು ಸಂಸ್ಥೆಗೆ ಮೀಸಲಾದ ದಿನಾಚರಣೆಯಲ್ಲ. ಈ ಭೂಮಿಯನ್ನು ನಾಶಮಾಡಲು ಪ್ರತ್ಯಕ್ಷ ಅಥವಾ ಪರೋಕ್ಷ ಕಾರಣವಾಗಿರುವ ಪ್ರತಿ ಮನುಷ್ಯನೂ ಇದರ ಮಹತ್ವವನ್ನು ಅರಿತು ತನ್ನನ್ನು ತಾನು ತಿದ್ದಿಕೊಂಡು ಮುನ್ನಡೆಯಲು ಈ ದಿನಾಚರಣೆ ಒಂದು ಮಾರ್ಗವಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications