ಇನ್ಫಿ, ಟಿಸಿಎಸ್ ವಿರುದ್ಧ ತನಿಖೆಗೆ ಮುಂದಾದ ಅಮೆರಿಕ
ನ್ಯೂಯಾರ್ಕ್, ಜೂ. 12 : ಭಾರತದ ಎರಡು ಪ್ರಮುಖ ಸಾಫ್ಟ್ ವೇರ್ ಕಂಪನಿಗಳು ಅಮೆರಿಕ ಸರ್ಕಾರದ ತನಿಖೆ ಎದುರಿಸುವಂತೆ ಆಗಿದೆ. ಹೆಚ್ 1-ಬಿ ವೀಸಾ ಕಾಯ್ದೆಯನ್ನು ಇನ್ಫೋಸಿಸ್ ಮತ್ತು ಟಿಸಿಎಸ್ ಉಲ್ಲಂಘಿಸಿದೆ ಎಂದಿರುವ ಅಮೆರಿಕ ಸರ್ಕಾರ ತನಿಖೆ ಆರಂಭ ಮಾಡಿದೆ.
ದಕ್ಷಿಣ ಕ್ಯಾಲಿಫೋರ್ನಿಯಾದ ಎಡಿಸನ್ ವಿದ್ಯುತ್ ಕಂಪನಿಯೊಂದಿಗೆ ಇನ್ಫೋಸಿಸ್ ಮತ್ತು ಟಿಸಿಎಸ್ ಕಂಪೆನಿಗಳು ಗುತ್ತಿಗೆ ಒಪ್ಪಂದ ಮಾಡಿಕೊಂಡಿದ್ದು, ವಿದೇಶಿ ತಾಂತ್ರಿಕ ಕೆಲಸಗಾರರ ವೀಸಾ ನಿಯಮವನ್ನು ಉಲ್ಲಂಘಿಸಿರುವ ಸಾಧ್ಯತೆ ಕಂಡುಬಂದಿದೆ ಎಂದು ಅಲ್ಲಿನ ಕಾರ್ಮಿಕ ಇಲಾಖೆ ಹೇಳಿದೆ. ಈ ಬಗ್ಗೆ ತನಿಖೆ ಆರಂಭ ಮಾಡಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.[ಟೆಕ್ಕಿಗಳ ಅಕೌಂಟಿಗೆ ಕನ್ನ ಹಾಕಿದ ಐನಾತಿ ಹ್ಯಾಕರ್!]

ವಿದ್ಯುತ್ ಕಂಪನಿಯು ಇತ್ತೀಚೆಗೆ 500ಕ್ಕೂ ಅಧಿಕ ಕೆಲಸಗಾರರನ್ನು ಸೇವೆಯಿಂದ ವಜಾಗೊಳಿಸಿತ್ತು. ಆದರೆ ಅವರನ್ನು ತರಬೇತಿ ಉದ್ದೇಶಕ್ಕೆ ತಾತ್ಕಾಲಿಕ ವೀಸಾದಡಿ ಕರೆಸಿಕೊಂಡಿರುವ ಇನ್ಫಿ ಮತ್ತು ಟಿಸಿಎಸ್ ಭಾರತೀಯ ನೌಕರರಿಗೆ ತರಬೇತಿ ನೀಡುವಂತೆ ತಿಳಿಸಿತ್ತು.
ಪ್ರಖ್ಯಾತ ಮನರಂಜನಾ ಕಂಪನಿ ವಾಲ್ಟ್ ಡಿಸ್ನಿಯಿಂದ ಅಮೆರಿಕದ ಪ್ರಜೆಗಳನ್ನು ಕಿತ್ತುಹಾಕಿ ಭಾರತೀಯರಿಗೆ ಅವಕಾಶ ಮಾಡಿಕೊಟ್ಟ ಸಂಗತಿ ಬಿತ್ತರವಾದ ಕೆಲ ದಿನಗಳ ನಂತರ ಅಮೆರಿಕ ಸರ್ಕಾರ ತನಿಖೆಗೆ ಮುಂದಾಗಿದೆ.[ವಾಲ್ಟ್ ಡಿಸ್ನಿ: 250 ಅಮೆರಿಕನ್ನರ ಜಾಗಕ್ಕೆ ಭಾರತೀಯರು]
ಒಟ್ಟಿನಲ್ಲಿ ಭಾರತೀಯ ಮೂಲದ ಎರಡು ಕಂಪನಿಗಳು ತನಿಖೆ ಎದಿರಿಸುವಂಥಾಗಿದ್ದು, ಅತ್ತ ಭಾರತೀಯರನ್ನು ನೇಮಕ ಮಾಡಿಕೊಂಡ ವಾಲ್ಟ್ ಡಿಸ್ನಿ ಗೂ ಆತಂಕ ತಟ್ಟಿದರೆ ಆಶ್ಚರ್ಯವಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications