2020ರ ಹಜ್ ಪ್ರಾರ್ಥನೆಯಲ್ಲಿ 1,000 ಯಾತ್ರಾರ್ಥಿಗಳಿಗೆ ಅವಕಾಶ
ರಿಯಾದ್, ಜುಲೈ.21: ಕೊರೊನಾವೈರಸ್ ಸೋಂಕಿನ ಹರಡುವಿಕೆ ವಿರುದ್ಧ ದೇಶವು ತನ್ನ ಯುದ್ಧವನ್ನು ಮುಂದುವರಿಸುತ್ತಿದೆ. ಇದರಿಂದ ಈ ವರ್ಷ ಈಗಾಗಲೇ ಸೌದಿ ಅರೇಬಿಯಾಗೆ ತೆರಳಿರುವ ವಿವಿಧ ರಾಷ್ಟ್ರಗಳ ಸುಮಾರು 1,000 ಯಾತ್ರಾರ್ಥಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಸೌದಿ ಅರೇಬಿಯಾ ಪ್ರಕಟಿಸಿದೆ.
ಆಧುನಿಕ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೌದಿ ಅರೇಬಿಯಾದ ಹೊರಗಿನ ಯಾತ್ರಾರ್ಥಿಗಳನ್ನು ಹೊರಗಿಡುವ ನಿರ್ಧಾರಕ್ಕೆ ವಿಶ್ವದಾದ್ಯಂತ ಮುಸ್ಲಿಮರನ್ನು ನಿರಾಶೆಗೊಳಿಸಿದೆ. ಆದರೆ ಆರೋಗ್ಯದ ದೃಷ್ಟಿ ಮತ್ತು ಮುಂದಾಗುವ ಅಪಾಯಗಳಿಂದಾಗಿ ಇದು ಅಗತ್ಯವೆಂದು ಹಲವರು ಒಪ್ಪಿಕೊಂಡಿದ್ದಾರೆ ಎಂದು ಬ್ಯಾಂಕಾಕ್ ಪೋಸ್ಟ್ ವರದಿ ಮಾಡಿದೆ.
ಕಳೆದ ವರ್ಷ ನಡೆದ ಹಜ್ ನ ಐದು ದಿನಗಳ ವಿಶೇಷ ಪ್ರಾರ್ಥನೆಯ ಸಂದರ್ಭದಲ್ಲಿ ಅತಿಹೆಚ್ಚು ಯಾತ್ರಾರ್ಥಿಗಳು ಭಾಗಿಯಾಗಿದ್ದರು. 2019ರ ಸಾಲಿನಲ್ಲಿ 2.5 ಮಿಲಿಯನ್ ಯಾತ್ರಾರ್ಥಿಗಳು ಹಜ್ ಯಾತ್ರೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.

ಇದಲ್ಲದೆ, ಜುಲೈ 31 ರಿಂದ ಪ್ರಾರಂಭವಾಗಲಿರುವ ಈ ವರ್ಷದ ಹಜ್ ಗೆ ಆಯ್ಕೆ ಪ್ರಕ್ರಿಯೆ ಏನೆಂಬುದರ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಆದರೆ ಈ ಬಾರಿ 1,000 ಯಾತ್ರಾರ್ಥಿಗಳಿಗೆ ಅವಕಾಶ ನೀಡುವುದಕ್ಕೆ ತೀರ್ಮಾನಿಸಲಾಗಿದ್ದು, ಇದರಲ್ಲಿ ಸ್ವಲ್ಪ ಹೆಚ್ಚಾಗಬಹುದು ಇಲ್ಲವೇ ಕಡಿಮೆಯಾಗಬಹುದು ಎಂದು ಹಜ್ ಸಚಿವ ಮೊಹಮ್ಮದ್ ಬೆಂಟೇನ್ ತಿಳಿಸಿದ್ದಾರೆ.
ಮೆಕ್ಕಾಗೆ ಆಗಮಿಸುವುದಕ್ಕೂ ಮೊದಲು ಯಾರ್ತಾರ್ಥಿಗಳು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಟ್ಟಿರಬೇಕು. 65 ವರ್ಷದೊಳಗಿನ ಯಾವುದೇ ರೀತಿ ಆರೋಗ್ಯ ಸಮಸ್ಯೆ ಇಲ್ಲದ ಯಾತ್ರಾರ್ಥಿಗಳಿಗೆ ಮಾತ್ರ ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಮೆಕ್ಕಾದಲ್ಲಿ ನಡೆದ ಪ್ರಾರ್ಥನೆ ಬಳಿಕೆ ಅದರಲ್ಲಿ ಭಾಗವಹಿಸಿದ ಪ್ರತಿಯೊಬ್ಬರು ಹೋಮ್ ಕ್ವಾರೆಂಟೈನ್ ನಲ್ಲಿ ಇರತಕ್ಕದ್ದು ಎಂದು ಆರೋಗ್ಯ ಸಚಿವ ತೌಫಿಕ್-ಅಲ್-ರಬಿಯಹಾ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications