Iran: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆ ಹತ್ಯೆ: ಮನೆಯ ಮೇಲೆ ಕ್ಷಿಪಣಿ ದಾಳಿ
ಹಮಾಸ್ನ ರಾಜಕೀಯ ಮುಖ್ಯಸ್ಥ ಇಸ್ಮಾಯಿಲ್ ಹನಿಯೆ ಅವರನ್ನು ಗುರಿಯಾಗಿಸಿಕೊಂಡು ಬುಧವಾರ ಬೆಳಗಿನ ಜಾವ ಗುಂಡಿನ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಇಸ್ಮಾಯಿಲ್ ಹನಿಯೆ ಹಾಗೂ ಅವರ ಅಂಗರಕ್ಷಕ ಒಬ್ಬರು ಸಾವನ್ನಪ್ಪಿದ ಬಗ್ಗೆ ಧೃಡ ಪಟ್ಟಿದೆ.
ಬುಧವಾರ ಬೆಳಗಿನ ಜಾವ ನಡೆದ ದಾಳಿ ಬೆಳಗ್ಗೆ ಸುಮಾರು 4 ಗಂಟೆಗೆ ನಡೆದಿದೆ ಎಂದು ಅಲ್ಲಿನ ಅಧಿಕಾರಿಗಳು ಧೃಡ ಪಡಿಸಿದ್ದಾರೆ. ಟೆಹ್ರಾನ್ನಲ್ಲಿರುವ ಹನಿಯೆ ಅವರ ಮನೆಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಖಚಿತ ಪಡಿಸಿದೆ. ಇನ್ನು ಈ ದಾಳಿಯನ್ನು ಇರಾನ್ ಒಪ್ಪಿಕೊಂಡಿದ್ದು, ಇಸ್ರೇಲ್ನ್ನು ದೂಷಿಸಿದೆ.

ಇರಾನ್ ಅಧ್ಯಕ್ಷ ಮಸೌದ್ ಪಝಕಿಯಾನ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹನಿಯೆ ಮಂಗಳವಾರ ಟೆಹ್ರಾನ್ನಲ್ಲಿದ್ದರು. ಹಮಾಸ್ ಕೂಡ ಹನಿಯೆ ಸಾವನ್ನು ದೃಢಪಡಿಸಿದೆ. ಆದರೆ, ಇದುವರೆಗೂ ಇಸ್ರೇಲ್ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.
ಇಸ್ಮಾಯಿಲ್ ಹನಿಯಾ ಅವರು ಗಾಜಾ ಪಟ್ಟಿಯಲ್ಲಿರುವ ಹಮಾಸ್ ಸರ್ಕಾರದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ಹಮಾಸ್ಗೆ ಬೆಂಬಲವನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಎರಡನೇ ಇಂತಿಫಾದ ದಲ್ಲಿ ಇಸ್ಮಾಯಿಲ್ ಪ್ರಮುಖ ಪಾತ್ರ ವಹಿಸಿದ್ದರು ಮತ್ತು ಈ ಕಾರಣದಿಂದಾಗಿ ಹನಿಯಾ ಅವರನ್ನು ಇಸ್ರೇಲಿ ಭದ್ರತಾ ಪಡೆಗಳು ಬಂಧಿಸಿದ್ದವು. ಹನಿಯಾ ಆರು ತಿಂಗಳ ಕಾಲ ಇಸ್ರೇಲಿ ಜೈಲಿನಲ್ಲಿದ್ದರು.
2006 ರಲ್ಲಿ, ಹನಿಯಾ ಗಾಜಾದಲ್ಲಿ ಚುನಾಯಿತ ಹಮಾಸ್ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾದರು ಮತ್ತು ಅಂದಿನಿಂದ ಇಸ್ರೇಲ್ ಮತ್ತು ಹಮಾಸ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಲೇ ಇತ್ತು.
ಇತ್ತೀಚೆಗಷ್ಟೇ ಇಸ್ರೇಲ್ ಸೇನೆಯು ಹನಿಯಾ ಅವರ ಮೂವರು ಮಕ್ಕಳಾದ ಅಮೀರ್, ಹಜೆಮ್ ಮತ್ತು ಮೊಹಮ್ಮದ್ ಗಾಜಾ ಅವರನ್ನು ವೈಮಾನಿಕ ದಾಳಿಯಲ್ಲಿ ಕೊಂದಿತ್ತು. ಕಳೆದ ವರ್ಷ ಅಕ್ಟೋಬರ್ 7 ರಂದು ಹಮಾಸ್ ಇಸ್ರೇಲ್ ಮೇಲೆ 75 ವರ್ಷಗಳಲ್ಲಿ ಅತಿದೊಡ್ಡ ದಾಳಿಯನ್ನು ನಡೆಸಿತ್ತು. ಇದರಲ್ಲಿ 1200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications