ಪಾಕ್ ಚುನಾವಣೆ : ಇಸ್ಲಾಮಿಕ್ ಪಕ್ಷಗಳನ್ನು ತಿರಸ್ಕರಿಸಿದ ಜನರು!
ಇಸ್ಲಾಮಾಬಾದ್, ಜುಲೈ 26 : ಪಾಕಿಸ್ತಾನದ ಸಂಸತ್ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷ ಮುನ್ನಡೆ ಕಾಯ್ದೆಕೊಂಡಿದೆ. ದೇಶದ ಜನರು ಚುನಾವಣೆಯಲ್ಲಿ ಇಸ್ಲಾಮಿಕ್ ಪಕ್ಷಗಳನ್ನು ತಿರಸ್ಕರಿಸಿದ್ದಾರೆ.
ಚುನಾವಣೆಯಲ್ಲಿ ಉಗ್ರ ಹಫೀಜ್ ಸಯೀದ್ ಬೆಂಬಲವಿರುವ ಅಲ್ಲಾಹ್-ಒ-ತಕಬೀರ್ ಪಕ್ಷದ ಅಭ್ಯರ್ಥಿಗಳನ್ನು ಜನರು ತಿರಸ್ಕಾರ ಮಾಡಿದ್ದಾರೆ. ಪಕ್ಷದ ಅಭ್ಯರ್ಥಿಗಳು ಯಾವುದೇ ಕ್ಷೇತ್ರದಲ್ಲಿ ಮುನ್ನಡೆ ಪಡೆದಿಲ್ಲ. ಕನಿಷ್ಠ 2ನೇ ಸ್ಥಾನದಲ್ಲಿಯೂ ಇಲ್ಲ.
50 ಕ್ಷೇತ್ರಗಳಲ್ಲಿ ಅಲ್ಲಾಹ್-ಒ-ತಕಬೀರ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ, ಪಕ್ಷ ಹೀನಾಯವಾಗಿ ಸೋಲು ಕಂಡಿದೆ. ಹಫೀಜ್ ಸಯೀದ್ ಮುಂಬೈನ 26/11 ದಾಳಿಯ ಪ್ರಮುಖ ರೂವಾರಿಯಾಗಿದ್ದಾನೆ. ಇಸ್ಲಾಮಿಕ್ ತತ್ವಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋದ ಹಫೀಜ್ಗೆ ಹಿನ್ನಡೆಯಾಗಿದೆ.

ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್-ತೇಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷಕ್ಕೆ ಜನರು ಬೆಂಬಲ ನೀಡಿದ್ದಾರೆ. ಚುನಾವಣೆಯಲ್ಲಿ ಪಿಟಿಐ 119 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಹುಮತ ಪಡೆಯಲು 137 ಸೀಟುಗಳನ್ನು ಗೆಲ್ಲಬೇಕಿದೆ.
ಜನರು ಈ ಬಾರಿಯ ಚುನಾವಣೆಯಲ್ಲಿ ಮುತ್ತಾಹಿದ್ ಮಜ್ಲೀಸ್-ಎ-ಅಮಾಲ್ (ಎಂಎಂಎ) ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡಿದ್ದಾರೆ. ಫಜಲುರ್ ರೆಹಮಾನ್ ನೇತೃತ್ವದ ಪಕ್ಷವಿದಾಗಿದ್ದು, ಬಹುಮತ ಪಡೆಯಲು ಪಿಟಿಐಗೆ ಬೆಂಬಲ ನೀಡಲಿದೆ. ಈಗಾಗಲೇ ರೆಹಮಾನ್ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications