ಜಮ್ಮು- ಕಾಶ್ಮೀರ ಬಗ್ಗೆ ಭಾರತ- ಪಾಕ್ ಮಧ್ಯೆ ಮಾಲ್ಡೀವ್ಸ್ ನಲ್ಲೂ ಮಾತಿನ ಚಕಮಕಿ
ಮಾಲ್ಡೀವ್ಸ್, ಸೆಪ್ಟೆಂಬರ್ 1: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನ-ಮಾನ ತೆಗೆಯುವ ಭಾರತದ ನಿರ್ಧಾರದ ಬಗ್ಗೆ ಚರ್ಚೆ ನಡೆಸಲು ಪಾಕಿಸ್ತಾನವು ಮಾಡಿದ ಪ್ರಯತ್ನಕ್ಕೆ ಭಾರತ ತೀವ್ರ ಪ್ರತಿರೋಧ ವ್ಯಕ್ತಪಡಿಸಿದೆ. ಈ ಘಟನೆ ನಡೆದಿರುವುದು ಮಾಲ್ಡೀವ್ಸ್ ನಲ್ಲಿ ಭಾನುವಾರ ನಡೆದ ದಕ್ಷಿಣ ಏಷ್ಯಾದ ಸ್ಪೀಕರ್ ಗಳ ಸಮಾವೇಶದಲ್ಲಿ. ಈ ವೇಳೆ ಭಾರತ ಹಾಗೂ ಪಾಕಿಸ್ತಾನದ ಪ್ರತಿನಿಧಿಗಳ ಮಧ್ಯೆ ಕಾವೇರಿದ ಚರ್ಚೆ ನಡೆದಿದೆ.
ಪಾಕಿಸ್ತಾನದ ಪ್ರತಿನಿಧಿ ಜಮ್ಮು- ಕಾಶ್ಮೀರದ ವಿಷಯವನ್ನು ತೆಗೆದರು. ಇದಕ್ಕೆ ಭಾರತದ ಪ್ರತಿನಿಧಿ- ರಾಜ್ಯಸಭಾದ ಉಪ ಸಭಾಪತಿ ಹರಿವಂಶ್ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
"ಭಾರತದ ಆಂತರಿಕ ವಿಷಯವನ್ನು ಇಲ್ಲಿ ಚರ್ಚೆ ಮಾಡುವುದಕ್ಕೆ ನಾವು ಪ್ರಬಲವಾಗಿ ಆಕ್ಷೇಪಿಸುತ್ತೇವೆ. ಸಮಾವೇಶದ ಉದ್ದೇಶದ ಹೊರಗೆ ಇರುವ ವಿಷಯವನ್ನು ಎತ್ತುವ ಮೂಲಕ ಈ ವೇದಿಕೆಯಲ್ಲಿ ರಾಜಕೀಯ ತರುವುದನ್ನೂ ನಾವು ವಿರೋಧಿಸುತ್ತೇವೆ" ಎಂದು ಹರಿವಂಶ್ ಹೇಳಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ನೇತೃತ್ವದಲ್ಲಿ ಭಾರತೀಯ ನಿಯೋಗವು ಈ ಸಮಾವೇಶಕ್ಕೆ ತೆರಳಿದೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನ-ಮಾನ ರದ್ದು ಮಾಡಿ, ಎರಡು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿದ ಭಾರತದ ಕ್ರಮಕ್ಕೆ ಪಾಕಿಸ್ತಾನವು ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ಜಾಗತಿಕ ಮಟ್ಟದಲ್ಲಿ ವಿವಿಧ ವೇದಿಕೆಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಜಮ್ಮು- ಕಾಶ್ಮೀರವು ಆಂತರಿಕ ವಿಚಾರ ಎನ್ನುತ್ತಾ ಬರುತ್ತಿದೆ ಭಾರತ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications