ಪಾಕಿಸ್ತಾನದಲ್ಲಿ ಹಿಂದೂ ಉದ್ಯಮಿ ಗುಂಡಿಕ್ಕಿ ಹತ್ಯೆ, ಪ್ರತಿಭಟನೆ
ಇಸ್ಲಾಮಾಬಾದ್, ಫೆಬ್ರವರಿ 2: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.
ಹಿಂದೂ ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಪಾಕಿಸ್ತಾನದ ಸಿಂಧ್ ನ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಹತ್ಯೆಗೆ ಒಳಗಾದ ವ್ಯಕ್ತಿಯನ್ನು ಸೈತಾನ್ ಲಾಲ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದೌರ್ಜನ್ಯ ಎಸಗಿದ ಇತ್ತೀಚಿನ ಘಟನೆ ಇದಾಗಿದೆ. ಜನವರಿ 4 ರಂದು, ಸಿಂಧ್ ಪ್ರಾಂತ್ಯದ ಅನಾಜ್ ಮಂಡಿಯಲ್ಲಿ ಇನ್ನೊಬ್ಬ ಹಿಂದೂ ಉದ್ಯಮಿ ಸುನೀಲ್ ಕುಮಾರ್ ಅವರನ್ನು ಅಪರಿಚಿತ ಜನರು ಗುಂಡಿಕ್ಕಿ ಕೊಂದರು. ಉದ್ಯಮಿಯ ಹತ್ಯೆಯಿಂದ ನಗರದಲ್ಲಿ ಬಂದ್ ಮಾಡಲಾಗಿತ್ತು.

ಜನವರಿ 30 ರಂದು, ಪಾಕಿಸ್ತಾನದ ವಾಯುವ್ಯ ಪೇಶಾವರ್ ನಗರದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಒಬ್ಬ ಕ್ರಿಶ್ಚಿಯನ್ ಪಾದ್ರಿಯನ್ನು ಗುಂಡಿಕ್ಕಿ ಕೊಂದಿದ್ದರು. ಇದೇ ವೇಳೆ ಜೊತೆಯಲ್ಲಿದ್ದ ಇನ್ನೊಬ್ಬರು ಗಾಯಗೊಂಡಿದ್ದರು.
ಉದ್ಯಮಿ ದಾಹರ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ, ದಾಹರ್ಕಿಯಿಂದ ಎರಡು ಕಿ.ಮೀ ದೂರದಲ್ಲಿ ಅವರು ವಾಸಿಸುತ್ತಿದ್ದರು.
ಸೈತಾನ್ಲಾಲ್ ಜಮೀನಿನಲ್ಲಿ ಹತ್ತಿ ಕಾರ್ಖಾನೆ ಹಾಗೂ ಹಿಟ್ಟಿನ ಗಿರಣಿ ಉದ್ಘಾಟನಾ ಕಾರ್ಯಾಕ್ರಮ ನಡೆಯಿತು. ಕಾರ್ಯಕ್ರಮ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
''ನಾನು ಪಾಕಿಸ್ತಾನ ತೊರೆಯದಿದ್ದರೆ, ನನ್ನ ಕೈಕಾಲುಗಳನ್ನು ಕತ್ತರಿಸಿ ಕೊಲೆ ಮಾಡುವುದಾಗಿ ಕೆಲವರು ಬೆದರಿಕೆ ಹಾಕುತ್ತಿದ್ದಾರೆ'' ಎಂದು ಕೆಲ ದಿನಗಳ ಹಿಂದಷ್ಟೇ ಸೈತಾನ್ ಲಾಲ್ ಹೇಳಿಕೊಂಡಿದ್ದರು. ಮಂಗಳವಾರ ಹಲವು ಮಂದಿ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
Recommended Video
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications