ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಪತ್ರಕರ್ತನ ಗುಂಡಿಕ್ಕಿ ಹತ್ಯೆ
ಕರಾಚಿ, ಮಾರ್ಚ್ 20: ಪಾಕಿಸ್ತಾನದ ಸಿಂಧ ಪ್ರಾಂತ್ಯದಲ್ಲಿ ಹಿಂದೂ ಪತ್ರಕರ್ತರೊಬ್ಬರನ್ನು ಕೆಲವು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹತ್ಯೆಯನ್ನು ಖಂಡಿಸಿದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ (ಎಂಎನ್ಎ) ಹಿಂದೂ ಸದಸ್ಯ ಲಾಲ್ ಚಂದ್ ಮಾಲ್ಹಿ ಇದು 'ಬಹಳ ಕಳವಳಕಾರಿ ವಿಷಯ' ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ.
ಸ್ಥಳೀಯ ಲೋಕಲ್ ಚಾನೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಅಜಯ್ ಲಾಲ್ವಾನಿ ಹತ್ಯೆಯಾದ ಪತ್ರಕರ್ತ ಸಲೂನ್ ಶಾಪ್ ನಲ್ಲಿ ಕ್ಷೌರ ಮಾಡಿಸಿಕೊಳ್ಳುವಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಹೊಟ್ಟೆ, ಕೈ, ಮತ್ತು ಮಂಡಿಗೆ ಗುಂಡುಗಳು ತಗುಲಿದ್ದವು, ಅವರು ಸುಕ್ಕೂರ್ ನಗರದ ಕ್ಷೌರಿಕನ ಅಂಗಡಿಯಲ್ಲಿ ಕುಳಿತಿದ್ದಾಗ ಎರಡು ಬೈಕ್ಗಳ ಮೇಲೆ ಬಂದ ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ, ಯಾರ ಜೊತೆಗೂ ದ್ವೇಷ ಶತೃತ್ವ ಇರಲಿಲ್ಲ ಎಂದು ಅಜಯ್ ತಂದೆ ದಿಲೀಪ್ ಕುಮಾರ್ ಹೇಳಿದ್ದಾರೆ.
ವರದಿಯ ಪ್ರಕಾರ, ವೈಯಕ್ತಿಕ ದ್ವೇಷಕ್ಕೆ ಕೊಲೆ ನಡೆದಿದ್ದೆ ಎನ್ನಲಾಗಿದೆ, ಈ ಪ್ರಕರಣ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.












Click it and Unblock the Notifications