ಅಲ್ಪಸಂಖ್ಯಾತರ ದೇವತೆ 'ಕಾಳಿ'ಗೆ ರಕ್ಷಣೆ ಇಲ್ಲ
ಢಾಕಾ, ಜ.9: ಬಾಂಗ್ಲಾದೇಶದ ಸಂಸತ್ ಗೆ ನಡೆದ ಚುನಾವಣೆಯ ಬಳಿಕ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿ ನಿರಂತರ ದಾಳಿಗಳು ಮುಂದುವರಿಸಲಾಗಿದೆ. ಬುಧವಾರ ದುಷ್ಕರ್ಮಿಗಳು ನೇತ್ರಕೋನ ಜಿಲ್ಲೆಯ ಕಾಳಿ ದೇವಾಲಯದ ಪಾರ್ಶ್ವವೊಂದಕ್ಕೆ ಬೆಂಕಿ ಹಚ್ಚಿದ ಪರಿಣಾಮ ದೇವಾಲಯ ಭಾಗಶಃ ಹಾನಿಗೀಡಾಗಿದೆ. ಗುರುವಾರ ಕೂಡಾ ಅಲ್ಲಲ್ಲಿ ಹಿಂಸಾಚಾರ ನಡೆದಿರುವ ವರದಿಗಳು ಬಂದಿದೆ.
ಬುಧವಾರ ಬೆಳಗಿನ ಜಾವ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು ಸ್ಥಳೀಯರ ಸುಮಾರು 45 ನಿಮಿಷಗಳ ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ಶಮನಗೊಳಿಸಲಾಯಿತು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ದೆಲಾವರ್ ಹುಸೇನ್ ಹೇಳಿಕೆಯನ್ನು ಉಲ್ಲೇಖಿಸಿ 'ದ ಡೈಲಿ ಸ್ಟಾರ್' ಪತ್ರಿಕೆ ವರದಿ ಮಾಡಿದೆ.
ಚುನಾವಣೆಯ ಬಳಿಕ ದೇಶದ ವಿವಿಧೆಡೆ ಅಲ್ಪಸಂಖ್ಯಾತ ಸಮುದಾಯವಾದ ಹಿಂದೂಗಳ ಮೇಲೆ ನಡೆದ ದಾಳಿಗಳ ಬಗೆಗೆ ತನಿಖೆ ನಡೆಸಿ ಈ ಪ್ರಕರಣಗಳಲ್ಲಿ ಶಾಮೀಲಾದ ಎಲ್ಲಾ ಆರೋಪಿಗಳನ್ನು ಬಂಧಿಸುವುದಾಗಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಭರವಸೆ ನೀಡಿದ ಬೆನ್ನಲ್ಲೇ ಹಿಂದೂ ದೇವಾಲಯದ ಮೇಲೆ ಈ ದಾಳಿ ನಡೆದಿದೆ.

ಬಾಂಗ್ಲಾ ಸಂಸತ್ ಗೆ ನಡೆದ ಚುನಾವಣೆಯ ಬಳಿಕ ದೇಶದ ಹಲವಾರು ಜಿಲ್ಲೆಗಳಲ್ಲಿ ಹಿಂದೂ ಸಮುದಾಯದವರನ್ನು ಗುರಿಯಾಗಿಸಿ ವ್ಯಾಪಕ ದಾಳಿಗಳು ನಡೆದಿದ್ದವು. ರಾಜ್ ಶಾಹಿ, ದಿನಾಜ್ ಪುರ್, ಠಾಕುರ್ ಗಾಂವ್, ಲಾಲ್ ಮೊನಿರ್ ಹಾಟ್ ಹಾಗೂ ಜೆಸ್ಸೂರ್ ಮುಂತಾದ ಕಡೆಗಳಲ್ಲಿ ಹಿಂದೂಗಳ ಮನೆ, ಅಂಗಡಿ ವಹಿವಾಟುಗಳಿಗೆ ತೊಂದರೆ ಉಂಟಾಗಿದೆ.
ದೇಶದ ಹಲವೆಡೆ ನಡೆದ ಹಿಂಸಾಚಾರದಲ್ಲಿ ಶಾಮೀಲಾಗಿರುವ ಆರೋಪದ ಮೇಲೆ ಬೋಗ್ರ ಜಿಲ್ಲೆಯ ಜಮಾತೆ ಇಸ್ಲಾಮೀ ನಾಯಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪದ ಮೇಲೆ ಜಮಾತೆ ಇಸ್ಲಾಮೀಯ 11 ಕಾರ್ಯಕರ್ತರನ್ನು ಬಂಧಿಸಿರುವುದಾಗಿಯೂ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.(ಪಿಟಿಐ)
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications