ಇಂಗ್ಲೆಂಡ್; ಕೆಲವು ಭಾಗದಲ್ಲಿ ಅತೀ ತಾಪಮಾನ, ಬರಗಾಲದ ಎಚ್ಚರಿಕೆ
ಲಂಡನ್ ಆಗಸ್ಟ್ 12: ನಿರಂತರವಾಗಿ ಬಿಸಿ ಮತ್ತು ಒಣ ಹವಾಮಾನದ ಬಳಿಕ ಇದೀಗ ದಕ್ಷಿಣ, ಮಧ್ಯ ಹಾಗೂ ಪೂರ್ವ ಇಂಗ್ಲೆಂಡ್ನ ಪ್ರದೇಶಗಳು ಅಧಿಕೃತವಾಗಿ ಬರಗಾಲ ಸ್ಥಿತಿಗೆ ತಲುಪಿವೆ ಎಂದು ಇಂಗ್ಲೆಂಡ್ ಸರ್ಕಾರ ಮಾಹಿತಿ ನೀಡಿದೆ.
ಇಂಗ್ಲೆಂಡ್ ದೇಶವು 1935ರಿಂದಲೂ ಗರಿಷ್ಠ ತಾಪಮಾನ ದಾಖಲಾತಿ ಕಂಡಿದೆ. ಪ್ರತಿ ತಿಂಗಳು ಸರಾಸರಿ ಕೇವಲ ಶೇ.35ರಷ್ಟು ಮಾತ್ರ ಮಳೆ ಆಗಿದ್ದು, ಉಳಿದಂತೆ ನಿತ್ಯವು ಬಿಸಲಿನ ಪ್ರಮಾಣವೇ ಹೆಚ್ಚಿರುತ್ತದೆ. ಇದೀಗ ಇಂಗ್ಲೆಂಡ್ ಮತ್ತು ವೇಲ್ಸ್ನ ಕೆಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಅತ್ಯಧಿಕ ಉಷ್ಣಾಂಶ ದಾಖಲಾಗಬಹುದು ಎಂದು ಅಲ್ಲಿನ ಸರ್ಕಾರ ಎಚ್ಚರಿಸಿದೆ. ಈ ಮೂಲಕ ಇಂಗ್ಲೆಂಡ್ ಬಹುಪಾಲು ಪ್ರದೇಶ ಬರಗಾಲ ಆವರಿಸಿದಂತಾಗಿದೆ ಎಂದು ತಿಳಿದು ಬಂದಿದೆ.
ಸರ್ಕಾರದ ಎಚ್ಚರಿಕೆ ಮೇರೆಗೆ ಮುಂದಿನ ನಾಲ್ಕೈದು ದಿನ ಎದುರಾಗಲಿರುವ ಶುಷ್ಕ (ಒಣಹವೆ) ಹವಾಮಾನವನ್ನು ಎದುರಿಸಲು ಸಜ್ಜಾಗಿದ್ದೇವೆ. ಎಲ್ಲೆಡೆ ಅಗತ್ಯ ನೀರಿನ ಸರಬರಾಜು ಮಾಡಲು, ನೀರಿನ ಸಂರಕ್ಷಣೆಗೆ ಆದ್ಯತೆ ನೀಡಿದ್ದೇವೆ ಎಂದು ಜಲ ಸಚಿವ ಸ್ಟೀವ್ ಡಬಲ್ ತಿಳಿಸಿದ್ದಾರೆ.

ಉತ್ತಮ ಸಿದ್ಧತೆ ಮಾಡಿಕೊಂಡ ಇಂಗ್ಲೆಂಡ್; ಕಳೆದು ಹೋದ ಶುಷ್ಕ ಹವಾಮಾನಗಳ ವರ್ಷಗಳಿಗಿಂತಲೂ ಭವಿಷ್ಯದ ದಿನಗಳಿಗೆ ಉತ್ತಮ ಸಿದ್ಧತೆ ಮಾಡಿಕೊಂಡಿದ್ದೇವೆ. ಆದರೆ ರೈತರು ಮತ್ತು ಪರಿಸರದ ಮೇಲಾಗುವ ಅತ್ಯಧಿಕ ಬಿಸಿಲಿನ ದುಷ್ಪಪರಿಣಾಮಗಳನ್ನು ಸೇರಿದಂತೆ ಒಟ್ಟಾರೆ ಬರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡಬೇಕಿದೆ. ಅಗತ್ಯವಿರುವ ಕಡೆಗಳಲ್ಲಿ ಈಗಾಗಲೇ ಪರಿಹಾರ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸ್ಟೀವ್ ಡಬಲ್ ವಿವರಿಸಿದ್ದಾರೆ.

ದೇಶದಾದ್ಯಂತ ಕುಡಿಯಲು ನೀರು ಒದಗಿಸುವ ಕಂಪನಿಗಳು ಸೂಕ್ತ ಪೂರೈಕೆ, ನೀರಿನ ಸಂರಕ್ಷಣೆಗೆ ಪೂರಕವಾಗಿ ಸರ್ಕಾರಗಳೊಂದಿಗೆ ಬರ ಯೋಜನೆಗಳನ್ನು ಜಾರಿಗೆ ತರುವ ಚಿಂತನೆ ಯಲ್ಲಿವೆ. ಅಲ್ಲದೇ ಬರ ಪೀಡಿತ ಪ್ರದೇಶಗಳಲ್ಲಿ ಸಾರ್ವಜನಿಕರು, ಸಂಸ್ಥೆಗಳು, ಸಿಬ್ಬಂದಿ, ವ್ಯವಹಾರಗಳ ಸದಸ್ಯರು ಸೇರಿದಂತೆ ಸಾರ್ವಜನಿರಕು ಹಿತಮಿತವಾಗಿ ನೀರನ್ನು ಬಳಸುವಂತೆ ಕಂಪನಿಗಳು ಜಾಗೃತಿ ಮೂಡಿಸುತ್ತಿವೆ ಎಂದು ಸರ್ಕಾರ ತಿಳಿಸಿದೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications