ಬ್ರುಸೆಲ್ಸ್ ನಂತರ ಇನ್ನಷ್ಟು ದಾಳಿ ಮಾಡ್ತೇವೆ: ಐಎಸ್ಐಎಸ್
ಬ್ರುಸೆಲ್ಸ್, ಮಾರ್ಚ್ 23: ಬೆಲ್ಜಿಯಂ ರಾಜಧಾನಿಯಲ್ಲಿ ನಡೆದ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಉಗ್ರ ಸಂಘಟನೆ ಐಎಸ್ಐಎಸ್ ಹೊತ್ತುಕೊಂಡಿದೆ. ಇನ್ನಷ್ಟು ಇದೇ ರೀತಿ ಪ್ರಬಲ ಸ್ಫೋಟ ನಡೆಸುವುದಾಗಿ ಘೋಷಿಸಿದೆ. ಈ ನಡುವೆ ದಾಳಿ ನಡೆಸಿದ ಮೂವರು ಶಂಕಿತರ ಚಿತ್ರಗಳನ್ನು ಪ್ರಕಟಿಸಲಾಗಿದೆ.
ಬಿಲ್ಜಿಯಂನ ಬ್ರುಸೆಲ್ಸ್ನ ಜಾವೆಂಟೆಮ್ ವಿಮಾನ ನಿಲ್ದಾಣದಲ್ಲಿ ನಡೆದ ಸ್ಪೋಟದಲ್ಲಿ 35 ಜನ ಮೃತಪಟ್ಟು, 136 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ಯಾರಿಸ್ನಲ್ಲಿ ನಡೆದ ಬಾಂಬ್ ದಾಳಿ ಸಂಬಂಧಿಸಿದಂತೆ ಕಳೆದ ನಾಲ್ಕು ದಿನಗಳ ಹಿಂದೆ ಶಂಕಿತ ಉಗ್ರರನ್ನು ಬೆಲ್ಜಿಯಂ ಪೊಲೀಸರು ಬಂಧಿಸಿದ್ದರು. ಇದಕ್ಕೆ ಪ್ರತಿಕಾರವಾಗಿ ಈ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಐಸಿಸ್ ಬಾಂಬ್ ದಾಳಿಗಳಿಗೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಗಾಗಿ ಬೆಲ್ಜಿಯಂ ಪೊಲೀಸರು 'ವಾಂಟೆಡ್ ನೋಟಿಸ್' ಜಾರಿ ಮಾಡಿದ್ದಾರೆ. ಮೂವರು ಶಂಕಿತರ ಫೊಟೋವನ್ನು ಬಿಡುಗಡೆ ಮಾಡಿರುವ ಪೊಲೀಸರು ಫೊಟೋದಲ್ಲಿ ಬಿಳಿಯ ಶರ್ಟ್ ಮತ್ತು ಜಾಕೆಟ್ ಹಾಗೂ ದಟ್ಟ ಬಣ್ಣದ ಹ್ಯಾಟ್ ಧರಿಸಿ ಲಗ್ಗೇಜ್ ಟ್ರಾಲಿಯನ್ನು ತಳ್ಳುತ್ತಾ ಬ್ರುಸೆಲ್ಸ್ ವಿಮಾನ ನಿಲ್ದಾಣದಲ್ಲಿ ಸಾಗುವ ವ್ಯಕ್ತಿ ಬಗ್ಗೆ ಮಾಹಿತಿ ಕೋರಿದ್ದಾರೆ.
ಸುಮಾರು 130ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾಗಿದ್ದ ಪ್ಯಾರಿಸ್ ದಾಳಿಗಳಿಗೆ ಸಂಬಂಧಿಸಿದಂತೆ ಶಂಕಿತ ಭಯೋತ್ಪಾದಕ ಸಲಾಹ ಅಬ್ಡೆಸ್ಲಾಮ್ ಬಂಧನವಾಗಿತ್ತು. ಜೊತೆಗೆ ಹಂಗೇರಿಗೆ ಪ್ರಯಾಣಿಸಿದ್ದ 25ರ ಹರೆಯದ ನಜೀಂ ಲಾಚ್ರಾವೊಯಿಗಾಗಿ ಪ್ಯಾರಿಸ್ ದಾಳಿಗಳ ವಿಚಾರಣೆಗಾಗಿ ನೋಟಿಸ್ ಜಾರಿಯಾಗಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications