Nobel Prize: ಬಂಗಾಳಿ ಲೇಖಕ ಅಮಿತಾವ್ ಘೋಷ್ ಅವರಿಗೆ ಕೈತಪ್ಪಿದ ನೋಬೆಲ್ ಪ್ರಶಸ್ತಿ
Nobel Prize: 2025ನೇ ಸಾಲಿನ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿಯನ್ನು ಇಂದು (ಅಕ್ಟೋಬರ್ 9) ಗುರುವಾರ ಘೋಷಣೆ ಮಾಡಲಾಗಿದೆ. ಹಂಗೇರಿಯನ್ ಲೇಖಕ ಲಾಸ್ಲೊ ಕ್ರಾಸ್ನಹೊರ್ಕೈ ಅವರು ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಬಂಗಾಳಿ ಲೇಖಕ ಅಮಿತಾವ್ ಘೋಷ್ ಅವರಿಗೆ ಪ್ರಶಸ್ತಿ ಕೈತಪ್ಪಿದೆ.
ಸ್ವೀಡಿಷ್ ಅಕಾಡೆಮಿ ಗುರುವಾರ ಸಾಹಿತ್ಯದಲ್ಲಿ ಹೊಸ ನೊಬೆಲ್ ಪ್ರಶಸ್ತಿ ವಿಜೇತರ ವಿಜೇತರ ಹೆಸರನ್ನು ಬಹಿರಂಗಪಡಿಸಿದೆ. ಈ ಬಾರಿ ಬಂಗಾಳಿ ಲೇಖಕ ಅಮಿತಾವ್ ಘೋಷ್ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಇದೀಗ ಈ ಭರವಸೆ ಹುಸಿಯಾಗಿದ್ದು, ಹಂಗೇರಿಯನ್ ಲೇಖಕ ಲಾಸ್ಲೊ ಕ್ರಾಸ್ನಹೊರ್ಕೈ ಅವರು ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಲಾಸ್ಲೊ ಕ್ರಾಸ್ನಹೊರ್ಕೈ ಅವರ "Herscht 07769" ಕಾದಂಬರಿಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು 'ಸ್ವೀಡಿಷ್ ಅಕಾಡೆಮಿ' ತಿಳಿಸಿದೆ. ವಿನಾಶಕಾರಿ ಭೀತಿಯ ಮಧ್ಯೆ, ಕಲೆಯ ಶಕ್ತಿಯನ್ನು ಪುನರುಚ್ಚರಿಸುವ ಅವರ ಅಪಾರ ಮತ್ತು ದೂರದೃಷ್ಟಿಯ ಕೃತಿಗಳಿಗಾಗಿ ಕ್ರಾಸ್ನಹೊರ್ಕೈ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸ್ವೀಡಿಷ್ ಅಕಾಡೆಮಿ ಘೋಷಣೆ ಮಾಡಿದೆ.
ಕಳೆದ ಬಾರಿ ಅಂದರೆ 2024ರ ಸಾಹಿತ್ಯ ಕ್ಷೇತ್ರದಲ್ಲಿ ದಕ್ಷಿಣ ಕೊರಿಯಾದ ಕಾದಂಬರಿಗಾರ್ತಿ ಹಾನ್ ಕಾಂಗ್ ಪ್ರಶಸ್ತಿ ದೊರೆತಿತ್ತು. ನೊಬೆಲ್ ಪ್ರಶಸ್ತಿಯ ಆರಂಭದಿಂದಲೂ, ಸ್ವೀಡಿಷ್ ಅಕಾಡೆಮಿಯ ನೊಬೆಲ್ ಸಮಿತಿಯು 117 ಬಾರಿ ಸಾಹಿತ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು, ಒಟ್ಟು 121 ಪುರಸ್ಕೃತರಿಗೆ ಈ ಗೌರವ ಸಂದಿದೆ ಎಂದು ತಿಳಿದುಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications