ಪೂರ್ವ ಲಿಬಿಯಾದಲ್ಲಿ ಅಪ್ಪಳಿಸಿದ ಡೇನಿಯಲ್ ಚಂಡಮಾರುತ: 2000ಕ್ಕೂ ಹೆಚ್ಚು ಜನ ಸಾವು!
ಕೈರೋ ಸೆಪ್ಟೆಂಬರ್ 12: ಉತ್ತರ ಆಫ್ರಿಕಾದ ದೇಶದ ಪೂರ್ವ ಭಾಗಗಳಲ್ಲಿ ಪ್ರವಾಹಕ್ಕೆ ಸಿಲುಕಿ ಸುಮಾರು 2,000 ಜನರು ಸಾವನ್ನಪ್ಪಿದ್ದು ನೂರಾರು ಜನರು ಕಾಣೆಯಾಗಿದ್ದಾರೆ. ಪೂರ್ವ ಲಿಬಿಯಾದಲ್ಲಿ ಅಪ್ಪಳಿಸಿದ ಡೇನಿಯಲ್ ಚಂಡಮಾರುತಕ್ಕೆ ಸಾವಿರಾರು ಜನ ಸಾವನ್ನಪ್ಪಿದ್ದು ನೂರಾರು ಜನ ಕಾಣೆಯಾಗಿದ್ದಾರೆ.
ಈ ಬಗ್ಗೆ ಪೂರ್ವ ಲಿಬಿಯಾ ಸರ್ಕಾರದ ಒಸಾಮಾ ಹಮದ್ ಸೋಮವಾರ ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 'ಅಲ್ ಮಸರ್ ಟೆಲಿವಿಷನ್'ಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ, ಪ್ರಧಾನ ಮಂತ್ರಿ ಒಸಾಮಾ ಹಮದ್ ಅವರು ಪೂರ್ವ ನಗರವಾದ ಡರ್ನಾದಲ್ಲಿ 2,000 ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ಕಾಣೆಯಾಗಿದ್ದಾರೆ ಎಂದು ಹೇಳಿದರು. ಜೊತೆಗೆ ಅವರು ಸೋಮವಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿರುವುದಾಗಿ ಹೇಳಿದರು. ದೇಶಾದ್ಯಂತ ಧ್ವಜಗಳನ್ನು ಅರ್ಧಮಟ್ಟಕ್ಕೆ ಇಳಿಸಲು ಆದೇಶಿಸಲಾಗಿದೆ.

ಡೇನಿಯಲ್ ಚಂಡಮಾರುತದ ಪ್ರವಾಹಕ್ಕೆ ಸಿಲುಕಿ ಡರ್ನಾ ಭಾರಿ ನಾಶಕ್ಕೆ ಒಳಗಾಗಿದೆ. ಹೀಗಾಗಿ ನಗರವನ್ನು ವಿಪತ್ತು ಪ್ರದೇಶವೆಂದು ಘೋಷಿಸಲಾಗಿದೆ. ಪೂರ್ವ ಲಿಬಿಯಾ ಸರ್ಕಾರದ ಆರೋಗ್ಯ ಸಚಿವ ಓತ್ಮಾನ್ ಅಬ್ದುಲ್ಜಲೀಲ್ ಅವರು ಸೋಮವಾರ ಮಧ್ಯಾಹ್ನ ಸೌದಿ ಒಡೆತನದ ಸುದ್ದಿ ಚಾನೆಲ್ ಅಲ್-ಅರೇಬಿಯಾಗೆ ದೂರವಾಣಿ ಸಂದರ್ಶನದಲ್ಲಿ ಸಾವಿನ ಸಂಖ್ಯೆಯನ್ನು ಘೋಷಿಸಿದರು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಡರ್ನಾವನ್ನು ದುರಂತ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅನೇಕ ನಗರಗಳಲ್ಲಿ ಜನ ಸಾವು
ಆಂಬ್ಯುಲೆನ್ಸ್ ಮತ್ತು ತುರ್ತು ಪ್ರಾಧಿಕಾರದ ಪ್ರಕಾರ, ಈಶಾನ್ಯ ಲಿಬಿಯಾದ ಕರಾವಳಿ ನಗರವಾದ ಸುಸಾದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶಾಹತ್ ಮತ್ತು ಒಮರ್ ಅಲ್-ಮುಖ್ತಾರ್ ಪಟ್ಟಣಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ.
ತುರ್ತು ಪರಿಸ್ಥಿತಿ ಘೋಷಣೆ
ಸ್ಥಳೀಯ ಮಾಧ್ಯಮಗಳ ಪ್ರಕಾರ, ಸಾವಿರಾರು ಜನರು ಪ್ರವಾಹದಲ್ಲಿ ಕಾಣೆಯಾಗಿದ್ದಾರೆ ಮತ್ತು ಅವರು ಪ್ರವಾಹದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಪೂರ್ವ ಲಿಬಿಯಾದ ಹಲವಾರು ನಗರಗಳಲ್ಲಿ ಪ್ರವಾಹಕ್ಕೆ ಮನೆಗಳು ಮತ್ತು ಇತರ ಆಸ್ತಿಗಳನ್ನು ನಾಶವಾಗಿವೆ. ಹೀಗಾಗಿ ಸರ್ಕಾರ ಶನಿವಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ರಾತ್ರಿಯಿಡೀ ಅಪ್ಪಳಿಸಿದ ಚಂಡಮಾರುತದ ಮುನ್ನೆಚ್ಚರಿಕೆಯಾಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ. ಚಂಡಮಾರುತದ ಮನ್ನೆಚ್ಚರಿಕೆಯಾಗಿ ಶನಿವಾರವೇ ಶಾಲಾ, ಕಾಲೇಜು ತರಗತಿಗಳಿಗೆ ರಜೆ ನೀಡಲಾಗಿತ್ತು. ಪರಿಸ್ಥಿತಿ ನಿಭಾಯಿಸಲು ಪ್ರಧಾನಿಯು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದರು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications