ಚಂಡಮಾರುತ ಹೊಡೆತಕ್ಕೆ ಹೈಟಿ ದೇಶದಲ್ಲಿ 300ಕ್ಕೂ ಹೆಚ್ಚು ಸಾವು
ಹೈಟಿ , ಅಕ್ಟೋಬರ್ 7: ಮೊದಲ ವರದಿಗಳು ಬರುತ್ತಿವೆ. ಪ್ರವಾಹ, ದುರಂತ, ನದಿಗಳು ಉಕ್ಕಿ ಹರಿಯುತ್ತಿವೆ. ಮನೆಯೊಳಗೆ, ಓಡಾಡುವ ಬೀದಿಗಳಲ್ಲಿ ನೀರೋ ನೀರು. ಮನೆಯ ಛಾವಣಿಗಳು ಹಾರಿಹೋಗಿವೆ. ಇಷ್ಟೆಲ್ಲ ಅನಾಹುತ ಅದ ಮೇಲೆ ಜಾನುವಾರುಗಳು ಬದುಕಿರುವ ಸಾಧ್ಯತೆಗಳು ಎಷ್ಟಿರುತ್ತವೆ ಹೇಳಿ? ಬಡ ದೇಶಗಳ ಪೈಕಿ ಒಂದಾದ ಹೈಟಿಯಲ್ಲಿ ಜನರು ತಮ್ಮ ಹಣೆಬರಹವನ್ನೇ ಹಳಿಯುತ್ತಿದ್ದಾರೆ.
ಮಾಥ್ಯೂಸ್ ಚಂಡಮಾರುತ ತಂದಿರುವ ಅನಾಹುತ ಒಂದೆರಡಲ್ಲ. ಮೂರು ದಿನಗಳ ನಂತರ ಚಂಡಮಾರುತ ಹೈಟಿ ದೇಶವನ್ನು ಅಪ್ಪಳಿಸಿದ್ದು, ಕಳೆದ ಐವತ್ತು ವರ್ಷಗಳಲ್ಲೇ ಭೀಕರವಾಗಿದೆ ಈ ಬಾರಿಯ ಸನ್ನಿವೇಶ. ಸಾವಿನ ಸಂಖ್ಯೆ ಏರುತ್ತಲೇ ಇದೆ.[ಮಾಥ್ಯೂ ಚಂಡಮಾರುತ: 20 ಲಕ್ಷ ಮಂದಿ ಸ್ಥಳಾಂತರ!]

ಮೊದಮೊದಲಿಗೆ ಸರಕಾರವು ಐವರು ಮೃತಪಟ್ಟಿದ್ದಾರೆ ಎಂದು ತಿಳಿಸಿತ್ತು. ಈಗ 300ಕ್ಕೂ ಹೆಚ್ಚು ಮಂದಿ ಮಾಥ್ಯೂ ಚಂಡಮಾರುತದ ಹೊಡೆತಕ್ಕೆ ಮೃತಪಟ್ಟಿದ್ದಾರೆ ಎನ್ನುತ್ತಿದೆ. 2010ರ ಭೂಕಂಪದ ನಂತರ ಈ ದೇಶ ಎದುರಿಸುತ್ತಿರುವ ಭೀಕರ ಪ್ರಾಕೃತಿಕ ವಿಕೋಪ ಇದು.
ಹಳ್ಳಿ, ಪಟ್ಟಣಗಳಲ್ಲಿ ಹಲವು ಅಡಿಗಳ ನೀರು ತುಂಬಿದೆ. ಮನೆಗಳು ರಾಶಿ ಹಾಕಿದ ಮರದಂತಾಗಿವೆ. ಬೆಳೆ ನಷ್ಟದ ಬಗ್ಗೆ ಹೇಳುವುದೇ ಬೇಡ. ಜೆರೆಮಿ ನಗರದಲ್ಲಿ ಶೇ 80ರಷ್ಟು ಮನೆಗಳು ನಾಶವಾಗಿವೆ. ರಕ್ಷಣಾ ಕಾರ್ಯದಲ್ಲಿ ತೊಡಗಿರುವವರು ಹೆಚ್ಚು ಒಳಭಾಗಕ್ಕೆ ಹೋದಂತೆಲ್ಲ ಮೃತ ದೇಹಗಳು ಸಿಗುತ್ತಿವೆ. ಪ್ರವಾಹಕ್ಕೆ ಸಿಲುಕಿದ ಮನೆಗಳು, ಬಡಾವಣೆಗಳಲ್ಲಿ ಸಾವಿನ ರುದ್ರನರ್ತನ.[ಚಿತ್ರಗಳು: ಆಂಧ್ರದಲ್ಲಿ ಭಾರೀ ಮಳೆ ತಂದ ಅವಾಂತರ]

ಗುರುವಾರದವರೆಗೆ ದೇಶದ ದಕ್ಷಿಣ ಭಾಗಕ್ಕೆ ಸಂಪರ್ಕವೇ ಇರಲಿಲ್ಲ. ಫೋನ್ ಲೈನ್ ಗಳು ತುಂಡಾಗಿವೆ. ಸೇತುವೆಗಳು ಕುಸಿದಿವೆ. ಈ ವರೆಗೆ ನಮ್ಗೆ ಸಿಕ್ಕಿರುವುದು ತೀರಾ ಭಾಗಶಃ ನಷ್ಟ ಹಾಗೂ ಸಾವಿನ ಲೆಕ್ಕಾಚಾರ ಎಂದು ಪತ್ರಿಕಾಗೋಷ್ಠಿಯಲ್ಲಿ ಸಚಿವ ಆನಿಕ್ ಜೋಸೆಫ್ ಹೇಳಿದ್ದಾರೆ. ದೇಶದ ಪರ್ವತಗಳಲ್ಲೂ ಸಾವು-ನೋವುಗಳಾಗಿವೆ. ಅಲ್ಲೆಲ್ಲ ತಮ್ಮಷ್ಟಕ್ಕೆ ಬದುಕುತ್ತಿದ್ದ ಸಮುದಾಯದವರ ಪ್ರಾಣಹಾನಿಯಾಗಿದೆ ಎಂದಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications