ಮಾಥ್ಯೂ ಚಂಡಮಾರುತ: 20 ಲಕ್ಷ ಮಂದಿ ಸ್ಥಳಾಂತರ!
ಫ್ಲೋರಿಡಾ, ಅಕ್ಟೋಬರ್ 6: ಮಾಥ್ಯೂಸ್ ಚಂಡಮಾರುತದ ಭೀತಿ ಹಿನ್ನೆಲೆಯಲ್ಲಿ ಅಮೆರಿಕಾದ ಆಗ್ನೇಯ ಕರಾವಳಿಯಿಂದ ಇಪ್ಪತ್ತು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ. ಫ್ಲೋರಿಡಾದ ರಾಜ್ಯಪಾಲರು ಈ ಬಗ್ಗೆ ಅಲ್ಲಿನ ನಿವಾಸಿಗಳಿಗೆ ಎಚ್ಚರಿಕೆ ನೀಡಿದ್ದು, ಚಂಡಮಾರುತದ ಪರಿಣಾಮವನ್ನು ಎದುರಿಸಲು ಸಿದ್ಧರಾಗಿ ಎಂದಿದ್ದಾರೆ.
ಜಾರ್ಜಿಯಾ, ದಕ್ಷಿಣ ಕರೋಲಿನಾ ಮತ್ತು ಫ್ಲೋರಿಡಾದ ನಿವಾಸಿಗಳು ಸಂಭವನೀಯ ಅಪಾಯ ಎದುರಿಸಲು ಅಗತ್ಯ ವಸ್ತುಗಳನ್ನು ಒಟ್ಟು ಮಾಡಿಕೊಂಡು ಸಿದ್ಧರಾಗಿದ್ದಾರೆ ಎಂದು ಬುಧವಾರ ಎಬಿಸಿ ನ್ಯೂಸ್ ವರದಿ ಮಾಡಿದೆ. ಗುರುವಾರ ಸಂಜೆ ವೇಳೆಗೆ ಫ್ಲೋರಿಡಾದ ಅಟ್ಲಾಂಟಿಕ್ ತೀರಕ್ಕೆ ಮಾಥ್ಯೂ ಹತ್ತಿರವಾಗಲಿದೆ.[ಚಿತ್ರಗಳು: ಆಂಧ್ರದಲ್ಲಿ ಭಾರೀ ಮಳೆ ತಂದ ಅವಾಂತರ]

ಅದ್ದರಿಂದ ಇನ್ನೂ ಹೆಚ್ಚು ಜನರನ್ನು ಸ್ಥಳಾಂತರ ಮಾಡುವಂತೆ ದಕ್ಷಿಣ ಕರೋಲಿನಾದ ರಾಜ್ಯಪಾಲ ನಿಕಿ ಹಾಲೆ ಕರೆ ನೀಡಿದ್ದಾರೆ. ಫ್ಲೋರಿಡಾದ 15 ಲಕ್ಷ ಮಂದಿಯನ್ನು ಕಡಲ ತೀರ ಬಿಟ್ಟು ಹೊರಡುವಂತೆ ತಿಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಜಾರ್ಜಿಯಾದಲ್ಲಿ ಜನಸಂಖ್ಯೆ ಐವತ್ತು ಸಾವಿರ ಸಮೀಪದಲ್ಲಿದೆ.
ಪ್ರಬಲ ಚಂಡಮಾರುತ ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ ಅಂದರೆ ಪ್ರಾಣ ಹಾನಿ, ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ರಾಷ್ಟ್ರೀಯ ಹವಾಮಾನ ಸೇವೆಯು ಎಚ್ಚರಿಕೆ ನೀಡಿದೆ. ದುರಂತದಿಂದ ದೊಡ್ಡ ಮಟ್ಟದ ನಷ್ಟ ಸಂಭವಿಸುವ ಸಾಧ್ಯತೆ ಇದೆ. ಆ ನಂತರ ಕೆಲವು ವಾರಗಳ ಕಾಲ ಈ ಪ್ರದೇಶದಲ್ಲಿ ವಾಸವೇ ಸಾಧ್ಯವಿಲ್ಲ ಎಂದು ಬುಧವಾರ ಘೋಷಿಸಲಾಗಿದೆ.[ಮಳೆಗೆ ತತ್ತರಿಸಿರುವ ಚೆನ್ನೈ ಜನತೆಗೆ ವಾಯುಸೇನೆ ಆಸರೆ]

ಬಹಮಸ್ ಗೆ ಚಂಡಮಾರುತ ಬಡಿದು ಹೈಟಿಯಲ್ಲಿ 22 ಮಂದಿ, ಡೊಮಿನಿಕನ್ ರಿಪಬ್ಲಿಕ್ ನಲ್ಲಿ ನಾಲ್ವರು ಮಂಗಳವಾರ ಸಾವನ್ನಪ್ಪಿದ್ದಾರೆ. ಆ ನಂತರ ಚಂಡಮಾರುತ ದುರ್ಬಲವಾಗಿದೆ. ಜೀವ ಕಂಟಕವಾದ ಮಾಥ್ಯೂ ಗಂಟೆಗೆ 190 ಕಿ.ಮೀ ವೇಗದಲ್ಲಿ ಬಹಮಸ್ ಹಾದುಹೋಗಿದೆ. ಹೈಟಿಯಲ್ಲಿ ಪರಿಹಾರ ಕಾರ್ಯಕ್ಕಾಗಿ ಅಮೆರಿಕ ಸೇನೆಯು ಒಂಬತ್ತು ಹೆಲಿಕಾಪ್ಟರ್ ಹಾಗೂ ನೂರು ಮಂದಿಯನ್ನು ಕಳಿಸಲಿದೆ.

'ಸರಕಾರಿ ವರದಿ ಪ್ರಕಾರ ಹೈಟಿಯಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಅಂದಾಜಿನ ಪ್ರಕಾರ ಕನಿಷ್ಠ ಮೂರೂವರೆ ಲಕ್ಷ ಮಂದಿಗೆ ತುರ್ತಾಗಿ ನೆರವಿನ ಅಗತ್ಯವಿದೆ' ಎಂದು ವಿಶ್ವಸಂಸ್ಥೆ ಕಾರ್ಯದರ್ಶಿ ವಕ್ತಾರ ಡುಜಾರಿಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏಳು ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿರುವ ಹೈಟಿಯಲ್ಲಿ ಶೇ 80ರಷ್ಟು ಮನೆಗಳಿಗೆ ಹಾನಿಯಾಗಿದೆ ಎಂದು ವಿಶ್ವಸಂಸ್ಥೆ ಅಧಿಕಾರಿಗಳ ಸಭೆಯಲ್ಲಿ ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ.['ರೋನು' ಅಬ್ಬರಕ್ಕೆ ರೋದಿಸುತ್ತಿರುವ ತಮಿಳುನಾಡು]
ಹನ್ನೊಂದು ಸಾವಿರ ಮಂದಿ ಈ ಪ್ರಾಂತ್ಯದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications