ನಾನೀಗ ಅಧಿಕಾರದಲ್ಲಿಲ್ಲ, ಹೀಗಾಗಿ ನಾನು ಹೆಚ್ಚು ಅಪಾಯಕಾರಿ-ಇಮ್ರಾನ್ ಖಾನ್
ಪಾಕಿಸ್ತಾನ, ಏಪ್ರಿಲ್ 12 : ನಾನೀಗ ಅಧಿಕಾರದಲ್ಲಿಲ್ಲ, ಹೀಗಾಗಿ ಈಗ ನಾನು ಹೆಚ್ಚು ಅಪಾಯಕಾರಿ ಅಂತ ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಬುಧವಾರ ಪಾಕಿಸ್ತಾನದ ಪೇಶಾವರದಲ್ಲಿ ನಡೆದ ಬೃಹತ್ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಇಮ್ರಾನ್ ಖಾನ್ ನಾನು ಸರ್ಕಾರದ ಭಾಗವಾಗಿದ್ದಾಗ ಅಪಾಯಕಾರಿ ಆಗಿರಲಿಲ್ಲ. ಆದರೆ ಈಗ ಅಧಿಕಾರದಲ್ಲಿಲ್ಲ ಹೀಗಾಗಿ ಹೆಚ್ಚು ಅಪಾಯಕಾರಿ ಅಂತ ಹೇಳಿಕೆ ನೀಡಿದ್ದಾರೆ.
"ಆಮದು ಮಾಡಿಕೊಂಡ ಸರ್ಕಾರವನ್ನು ಒಪ್ಪಿಕೊಳ್ಳಲ್ಲ"
ಇದೇ ಸಂದರ್ಭದಲ್ಲಿ ಹೊಸದಾಗಿ ರಚನೆ ಆಗಿರುವ ಸರ್ಕಾರವನ್ನು ಇಮ್ರಾನ್ ಖಾನ್, ಆಮದು ಮಾಡಿಕೊಂಡ ಸರ್ಕಾರ ಎಂದು ಕರೆದಿದ್ದಾರೆ. ಅಲ್ಲದೆ ಈ ಸರ್ಕಾರವನ್ನ ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಪಾಕಿಸ್ತಾನದ ಜನರು ಸಹ ಈ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಲ್ಲೇ ತಿಳಿಯುತ್ತದೆ ಈ ಸರ್ಕಾರ ಆಮದು ಮಾಡಿಕೊಂಡ ಸರ್ಕಾರ ಅಂತ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ. ಅಲ್ಲದೆ ದೇಶದಲ್ಲಿ ಪ್ರತಿ ಬಾರಿ ನಾಯಕರನ್ನು ಪದಚ್ಯುತಿಗೊಳಿಸದಾಗ ಜನರು ಸಂಭ್ರಮಾಚರಣೆ ಮಾಡಿದ್ದಾರೆ. ಆದರೆ ಈ ಬಾರಿ ನಾನು ಪದಚ್ಯುತಗೊಂಡಾಗ ಜನರು ಸಂಭ್ರಮಿಸಿಲ್ಲ, ಬದಲಾಗಿ ನನ್ನನ್ನ ಬೆಂಬಲಿಸಿ ಪಾಕಿಸ್ತಾನದಾದ್ಯಂತ ಪ್ರತಿಭಟನೆ, ಮೆರವಣಿಗೆ, ಜಾಥಾಗಳನ್ನ ಮಾಡಿದ್ದಾರೆ ಅಂತ ಹೇಳಿದ್ದಾರೆ.

ಇನ್ನು ಪಾಕಿಸ್ತಾನದಲ್ಲಿ ನಮ್ಮ ಸರ್ಕಾರವನ್ನ ಕೆಳಗಿಳಿಸುವಲ್ಲಿ ವಿದೇಶಿ ರಾಷ್ಟ್ರಗಳು ಕೂಡ ಭಾಗಿಯಾಗಿವೆ ಅಂತ ಆರೋಪಿಸಿದ್ದಾರೆ. ಅಲ್ಲದೆ ಅಮೆರಿಕವು ಡಕಾಯಿತರ ಹೊಸ ಸರ್ಕಾರವನ್ನ ನಮ್ಮ ಮೇಲೆ ಹೇರುವ ಮೂಲಕ ಪಾಕಿಸ್ತಾನವನ್ನ ಅವಮಾನಿಸಿದೆ. ಹೀಗಾಗಿ ಇದು 1970 ರಲ್ಲಿದ್ದ ಪಾಕಿಸ್ತಾನವಲ್ಲ ಇದು ಹೊಸ ಪಾಕಿಸ್ತಾನ ಅಂತ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮಧ್ಯರಾತ್ರಿಯಲ್ಲೂ ಸುಪ್ರೀಂಕೋರ್ಟ್ ಯಾಕೆ ತೆರೆಯಬೇಕಿತ್ತು?
ಕಳೆದ ವಾರ ಪಾಕಿಸ್ತಾನದ ವಿಧಾನಸಭೆಯಲ್ಲಿ ನಮ್ಮ ಸರ್ಕಾರ ಅವಿಶ್ವಾಸ ನಿರ್ಣಯ ಮಂಡನೆ ಅಂಗೀಕರಿಸುವ ವೇಳೆ ಸುಪ್ರೀಂಕೋರ್ಟ್ ಮಧ್ಯರಾತ್ರಿವರೆಗೂ ಏಕೆ ತೆರೆದಿತ್ತು ಅಂತ ಇಮ್ರಾನ್ ಖಾನ್ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಸ್ಪೀಕರ್ ಆಸಾದ್ ಕೈಸರ್ ಮಧ್ಯರಾತ್ರಿಯವರೆಗೂ ಮತದಾನ ನಡೆಸಲಿಲ್ಲ, ಬದಲಾಗಿ ಸುಪ್ರೀಂಕೋರ್ಟ್ ನಿರ್ದೇಶನದ ಹೊರತಾಗಿಯೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ಅಂದೇ ವಿಧಾನಸಭೆಯಲ್ಲಿ ಮತದಾನ ಮಾಡಬೇಕಾಯಿತು. ಪರಿಣಾಮ ಅವಿಶ್ವಾಸ ನಿರ್ಣಯದ ಮೂಲಕ ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿಯಬೇಕಾಯಿತು ಅಂತ ಇಮ್ರಾನ್ ಖಾನ್ ಅಸಮಾಧಾನ ಹೊರಹಾಕಿದ್ದಾರೆ.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications