ನನ್ನ ಫೋನ್ನಲ್ಲೂ ಪೇಗಾಸಸ್ ಇತ್ತು, ಜಾಗರೂಕರಾಗಿರಲು ಅಧಿಕಾರಿಗಳು ಹೇಳಿದ್ದರು: ರಾಹುಲ್ ಗಾಂಧಿ
ಕಳೆದ ವರ್ಷ ಪೆಗಾಸಸ್ ಬೇಹುಗಾರಿಕೆ ಕುತಂತ್ರಾಂಶವನ್ನು ಭಾರತೀಯ ರಾಜಕಾರಣಿಗಳು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
ಲಂಡನ್, ಮಾರ್ಚ್ 03: ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಭಾಷಣದಲ್ಲಿ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ನಡೆಯುತ್ತಿದೆ ಎಂದು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಫೋನ್ ಸೇರಿದಂತೆ ಹಲವು ರಾಜಕೀಯ ನಾಯಕರ ಪೋನ್ಗಳಲ್ಲಿ ಪೆಗಾಸಸ್ ವೈರಸ್ ಇತ್ತು ಎಂದು ಹೇಳಿದ್ದಾರೆ.
"ಈ ಬಗ್ಗೆ ಗುಪ್ತಚರ ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ಫೋನ್ನಲ್ಲಿ ಏನು ಹೇಳುತ್ತೀರೋ ಅದರ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಕರೆಗಳನ್ನು ನಾವು ರೆಕಾರ್ಡ್ ಮಾಡುತ್ತಿದ್ದೇವೆ ಎಂದು ಹೇಳಿದ್ದರು" ಎಂದು ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ. ಕಳೆದ ವರ್ಷ ಪೆಗಾಸಸ್ ಬೇಹುಗಾರಿಕೆ ಕುತಂತ್ರಾಂಶವನ್ನು ಭಾರತೀಯ ರಾಜಕಾರಣಿಗಳು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮುಂದುವರಿದು, "ಇದ್ದರಿಂದ ನಮ್ಮ ಮೇಲೆ ನಿರಂತರ ಒತ್ತಡವಿದೆ. ಪ್ರತಿಪಕ್ಷಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಮೊಕದ್ದಮೆಗಳ ಅಡಿಯಲ್ಲಿ ಇರಬಾರದ ವಿಷಯಗಳಿಗಾಗಿ ನನ್ನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ" ಎಂದು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಡಿಸಿದ್ದಾರೆ.
" ಈ ರೀತಿ ಮಾಧ್ಯಮದ ಮೇಲೆ ಮತ್ತು ಪ್ರಜಾಪ್ರಭುತ್ವದ ಮೇಲೆ ನೀವು ಈ ರೀತಿಯ ಆಕ್ರಮಣ ನಡೆಸಿದರೇ, ಪ್ರತಿಪಕ್ಷವಾಗಿ, ಒಂದು ಮಾಧ್ಯಮವಾಗಿ ಜನರೊಂದಿಗೆ ಸಂವಹನ ನಡೆಸುವುದು ತುಂಬಾ ಕಷ್ಟ" ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಟೀಕೆ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ವಿದೇಶದಲ್ಲಿ ಮತ್ತೆ ದೇಶದ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ರಾಹುಲ್ ಹೇಳಿಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, "ನನ್ನ ಮನಸ್ಸಿನಲ್ಲಿ ಪೆಗಾಸಸ್ ಇದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಮತ್ತೆ ವಿದೇಶಿ ನೆಲದಲ್ಲಿ ಈ ಹುನ್ನಾರದ ಕೆಲಸವನ್ನು ಮಾಡುತ್ತಿದ್ದಾರೆ" ಎಂದಿದ್ದಾರೆ. "ಒಬ್ಬ ವ್ಯಕ್ತಿಯ ಮೇಲಿನ ದ್ವೇಷವು ದೇಶದ ಮೇಲಿನ ದ್ವೇಷವಾಗಿ ಪದೇ ಪದೇ ಹೊರಬರುತ್ತಿದೆ" ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಜೈ ಹಿಂದ್ ಟ್ವೀಟ್ ಮಾಡಿದ್ದಾರೆ.
ರಾಜಕಾರಣಿಗಳು, ಸಂಅಆಝಿಕ ಹೋರಾಟಗಾರರು ಮತ್ತು ಪತ್ರಕರ್ತರ ಮೇಲೆ ಬೇಹುಗಾರಿಕೆ ನಡೆಸಲು ಸರ್ಕಾರ ಪೆಗಾಸಸ್ ಬಳಸುತ್ತಿದೆ ಎಂಬ ಆರೋಪದ ಮೇಲೆ ಕಳೆದ ವರ್ಷ, ಸುಪ್ರೀಂ ಕೋರ್ಟ್ ಸಮಿತಿ ರಚನೆ ಮಾಡಿತ್ತು. ಆದರೆ, ಸಮಿತಿ ಪರೀಕ್ಷಿಸಿದ 29 ಮೊಬೈಲ್ ಫೋನ್ಗಳಲ್ಲಿ ಸ್ಪೈವೇರ್ ಕಂಡುಬಂದಿಲ್ಲ, ಬದಲಿಗೆ ಐದು ಮೊಬೈಲ್ ಫೋನ್ಗಳಲ್ಲಿ ಪೆಗಾಸಸ್ ವೈರಸ್ ಕಂಡುಬಂದಿದೆ ಎಂದು ವರದಿ ನೀಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications