ಭಾರತದ ಕ್ರಿಕೆಟರ್ಗಳು, ಅಮೀರ್ ಖಾನ್ಗೆ ಇಮ್ರಾನ್ ಖಾನ್ ಆಹ್ವಾನ
Recommended Video

ಇಸ್ಲಾಮಾಬಾದ್, ಆಗಸ್ಟ್ 1: ಪ್ರಧಾನಿಯಾಗಿ ಅಧಿಕಾರ ಹಿಡಿಯಲಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಭಾರತದ ಮಾಜಿ ಕ್ರಿಕೆಟರ್ಗಳಾದ ಸುನಿಲ್ ಗವಾಸ್ಕರ್ ಮತ್ತು ನವಜೋತ್ ಸಿಂಗ್ ಸಿಧು ಹಾಗೂ ನಟ ಅಮೀರ್ ಖಾನ್ ಅವರಿಗೆ ಆಹ್ವಾನ ನೀಡಿದ್ದಾರೆ.
ಆಗಸ್ಟ್ 11ರಂದು ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಗವಾಸ್ಕರ್, ಸಿಧು ಹಾಗೂ ಅಮೀರ್ ಖಾನ್ ಅದರಲ್ಲಿ ಪಾಲ್ಗೊಳ್ಳಲಿದ್ದಾರೆಯೇ ಎನ್ನುವುದು ಇನ್ನೂ ಖಚಿತವಾಗಿಲ್ಲ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಂತೆ ವಿವಿಧ ದೇಶಗಳ ನಾಯಕರನ್ನು ಕೂಡ ಸಮಾರಂಭಕ್ಕೆ ಆಹ್ವಾನಿಸುವುದರ ಕುರಿತು ವಿದೇಶಾಂಗ ಕಚೇರಿಗೆ ಮಾಹಿತಿ ನೀಡಲಾಗಿದೆ.

ವಿದೇಶಾಂಗ ಕಚೇರಿಯ ಅಭಿಪ್ರಾಯಕ್ಕೆ ಕಾದಿರುವುದಾಗಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷದ ವಕ್ತಾರ ಫವಾದ್ ಚೌಧರಿ ತಿಳಿಸಿದ್ದಾರೆ.
ಜುಲೈ 25ರಂದು ನಡೆದಿದ್ದ ಚುನಾವಣೆಯಲ್ಲಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷವು 115 ಸೀಟುಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಪಾಕಿಸ್ತಾನದ ಚುನಾವಣಾ ಆಯೋಗ ತಿಳಿಸಿದೆ.
272 ಸೀಟುಗಳ ರಾಷ್ಟ್ರೀಯ ಅಸೆಂಬ್ಲಿಯಲ್ಲಿ 270 ಸೀಟುಗಳ ಫಲಿತಾಂಶ ಹೊರಬಂದಿದೆ. ಉಳಿದ ಪಕ್ಷಗಳ ಬೆಂಬಲದಿಂದ ಸರ್ಕಾರ ರಚಿಸಲು ಇಮ್ರಾನ್ ಖಾನ್ ಮುಂದಾಗಿದ್ದಾರೆ.
ಇಲ್ಲಿ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ 172. ಈಗಾಗಲೇ 117 ಸ್ಥಾನಗಳಲ್ಲಿ ಜಯಗಳಿಸಿರುವ ಪಿಟಿಐ ಸರ್ಕಾರ ರಚಿಸುವುದು ಬಹುತೇಕ ಖಚಿತ.
ಈ ನಿಟ್ಟಿನಲ್ಲಿ ಎಲ್ಲಾ ಸಾಧ್ಯತೆಗಳ ಬಗ್ಗೆ ಇಮ್ರಾನ್ ಖಾನ್ ಪರಾಮರ್ಶಿಸುತ್ತಿದ್ದಾರೆ. ಪಿಪಿಪಿ 43 ಹಾಗೂ ಪಿಎಂಎಲ್ ಎನ್ 63 ಸ್ಥಾನಗಳು ಹಾಗೂ ಇತರೆ 47 ಸ್ಥಾನಗಳನ್ನು ಗೆದ್ದಿವೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು












Click it and Unblock the Notifications