ವಿಶ್ವಾಸಮತ ಕಳೆದುಕೊಂಡ ಮೊದಲ ಪ್ರಧಾನಿ, ದಾಖಲೆ ಬರೆದ ಇಮ್ರಾನ್ ಖಾನ್
ಇಸ್ಲಾಮಾಬಾದ್, ಏಪ್ರಿಲ್ 10: ''ಕ್ರಿಕೆಟ್ ಆಟದಂತೆ ಕೊನೆ ಓವರ್ ಕೊನೆ ಎಸೆತದ ತನಕ ಆಟ ಮುಂದುವರೆಯಲಿದೆ'' ಎಂಬರ್ಥದಲ್ಲಿ ಹೇಳಿಕೆ ನೀಡಿದ್ದ ವಿಶ್ವಕಪ್ ವಿಜೇತ ನಾಯಕ, ಮಾಜಿ ಕ್ರಿಕೆಟರ್ ಈಗ ಮಾಜಿ ಪ್ರಧಾನಿಯಾಗಿ ಕೂಡಾ ಹೊಸ ದಾಖಲೆ ಬರೆದಿದ್ದಾರೆ. ಅವಿಶ್ವಾಸ ನಿರ್ಣಯದ ಮೂಲಕ ಪ್ರಧಾನಿ ಪಟ್ತ ಕಳೆದುಕೊಂಡ ಮೊಟ್ಟ ಮೊದಲ ಪ್ರಧಾನಿ ಎಂದೆನಿಸಿಕೊಂಡಿದ್ದಾರೆ. ಪ್ರಧಾನಿ ಕಚೇರಿಯಿಂದ ಇಮ್ರಾನ್ ರನ್ನು ಹೊರ ಹಾಕಲು ವಿಪಕ್ಷಗಳೆಲ್ಲವೂ ಒಂದಾಗಿದ್ದು ಕೂಡಾ ವಿಶೇಷ ಎನ್ನಬಹುದು.
ಇಮ್ರಾನ್ ವಿರುದ್ದ ನಿಂತು, ಸರ್ಕಾರದ ಪತನಕ್ಕೆ ಸಮಾಜವಾದಿ, ಉದಾರವಾದಿ ಮತ್ತು ಧಾರ್ಮಿಕ ಪಕ್ಷಗಳ ಒಕ್ಕೂಟದ ನೇತೃತ್ವ ವಹಿಸಿಕೊಂಡಿರುವ ಪಾಕಿಸ್ತಾನ್ ಮುಸ್ಲಿಂ ಲೀಗ್ (ಪಿಎಂಎಲ್- ಎನ್) ಕಾರಣವಾಗಿದೆ. ಅವಿಶ್ವಾಸ ನಿರ್ಣಯ ಪ್ರಕ್ರಿಯೆ ಆರಂಭಕ್ಕೂ ಮುನ್ನ ಸಂಸತ್ ಸಭಾಪತಿ ಅಸದ್ ಕೈಸರ್ ಹಾಗೂ ಉಪ ಸಭಾಪತಿ ಖಾಸಿಂ ಇಬ್ಬರೂ ಇಮ್ರಾನ್ ಖಾನ್ ಪರ ತಮ್ಮ ನಿಷ್ಠೆ ಪ್ರದರ್ಶಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿಪಕ್ಷ ನಾಯಕ ಅಯಾಜ್ ಸಾದಿಕ್ ಅವರು ಸಂಸತ್ ಕಲಾಪ ಮುನ್ನಡೆಸಿದರು.
342 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ 174 ಸದಸ್ಯರು ಸರ್ಕಾರದ ವಿರುದ್ಧ ಮತ ಹಾಕಿದ್ದು, ಪ್ರಧಾನ ಮಂತ್ರಿಯನ್ನು ಪದಚ್ಯುತಗೊಳಿಸಲು ಅಗತ್ಯವಿದ್ದ 172 ಮತಗಳನ್ನು ಪಿಟಿಐ ಪಡೆಯುವುದಿಲ್ಲ ಎಂಬುದನ್ನು ಖಾತ್ರಿ ಪಡಿಸಿದವು. ಶನಿವಾರ ತಡರಾತ್ರಿ ಹೈಡ್ರಾಮಾ ನಂತರ ಇಮ್ರಾನ್ ಖಾನ್ ಪ್ರಧಾನಿ ಪಟ್ಟ ಕಳೆದುಕೊಂಡರು. ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಪ್ರಕ್ರಿಯೆ ನಡೆಯುವುದಕ್ಕೂ ಮುಂಚಿತವಾಗಿಯೇ ಪ್ರಧಾನಿ ಕಚೇರಿಯನ್ನು ಇಮ್ರಾನ್ ತೊರೆದು ಹೊರ ನಡೆದಿದ್ದರು.

ಭಾನುವಾರ(ಏಪ್ರಿಲ್ 10) ಮಧ್ಯಾಹ್ನ 2 ಗಂಟೆ ನಂತರ ಪಿಎಂಎಲ್- ಎನ್ ಒಕ್ಕೂಟ ಸಭೆ ಸೇರಲಿದ್ದು, ನೂತನ ಪ್ರಧಾನಿ ಆಯ್ಕೆ ಮಾಡಲಿದೆ. ಬಹುತೇಕ ಶಹಬಾಜ್ ಷರೀಫ್ ಅವರು ಮುಂದಿನ ಪ್ರಧಾನಿಯಾಗುವ ಸಾಧ್ಯತೆ ಕಂಡು ಬಂದಿದೆ.
ಮಾರ್ಚ್ 8ರಂದು ಪಾಕಿಸ್ತಾನದ ವಿಪಕ್ಷಗಳ ಪರವಾಗಿ ಶೆಹಬಾಜ್ ಶರೀಫ್ ಅವರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಏಪ್ರಿಲ್ 3ರಂದು ಅವಿಶ್ವಾಸ ನಿರ್ಣಯ ಮತದಾನ ಎಂದು ನಿಗದಿಯಾಗಿತ್ತು. ಆದರೆ, ಡೆಪ್ಯುಟಿ ಸ್ಪೀಕರ್ ಖಾಸಿಂ ಸುರಿ ಅವರು ಈ ಅವಿಶ್ವಾಸಮತವನ್ನು ಅಸಾಂವಿಧಾನಿಕ ಎಂದು ತೀರ್ಮಾನಿಸಿ ತಿರಸ್ಕರಿಸಿದರು. ಅದಾದ ಬಳಿಕ ಇಮ್ರಾನ್ ಖಾನ್ ಅವರು ಅಲ್ಲಿನ ಲೋಕಸಭೆಯನ್ನೇ ವಿಸರ್ಜಿಸಿ ಚುನಾವಣೆಗೆ ಹೋಗುವ ಪ್ರಯತ್ನ ಮಾಡಿದರು.
ಐದು ಸದಸ್ಯರ ನ್ಯಾಯಪೀಠವು ಮಹತ್ವದ ತೀರ್ಪು ನೀಡಿ, ಅವಿಶ್ವಾಸಮತ ತಿರಸ್ಕರಿಸಿದ್ದು ಮತ್ತು ಲೋಕಸಭೆ ವಿಸರ್ಜನೆ ಮಾಡಿದ್ದು ಅಸಿಂಧು ಎಂದು ತೀರ್ಮಾನಿಸಿತು. ಈಗ ನ್ಯಾಯಾಲಯದ ನಿರ್ದೇಶನದ ಮೇರೆಗೆ ಇಮ್ರಾನ್ ಖಾನ್ ಅವರು ಅವಿಶ್ವಾಸ ಮತ ಎದುರಿಸಬೇಕಾಗಿತ್ತು.

ಪಾಕಿಸ್ತಾನ ಸಂವಿಧಾನದ 63A ವಿಧಿಯ ಮೇಲೆ ತನ್ನ ನಿರ್ಧಾರದಿಂದ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಪ್ರಧಾನಿ ಇಮ್ರಾನ್ ಖಾನ್ ಸಂವಿಧಾನಕ್ಕೆ ಬದ್ಧರಾಗಿದ್ದಾರೆ, ಆದ್ದರಿಂದ ಅವರು ಪ್ರಾಂತೀಯ ಸಂಸತ್ತುಗಳನ್ನು ವಿಸರ್ಜಿಸುವಂತೆ ಅಧ್ಯಕ್ಷ ಆರಿಫ್ ಅಲ್ವಿ ಅವರಿಗೆ ಸಲಹೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
"ನಯಾ ಪಾಕಿಸ್ತಾನ" ಭರವಸೆಯೊಂದಿಗೆ ಅಧಿಕಾರಕ್ಕೆ
2018ರಲ್ಲಿ ಇಮ್ರಾನ್ ಖಾನ್ "ನಯಾ ಪಾಕಿಸ್ತಾನ" ಭರವಸೆಯೊಂದಿಗೆ ಅಧಿಕಾರಕ್ಕೆ ಬಂದರು. ಆದರೆ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಆಡಳಿತ ನಿರ್ವಹಣೆಯಲ್ಲಿ ಅವರು ವಿಫಲವಾದರು. ಪ್ರತಿಪಕ್ಷಗಳು ಅವರ ಸರ್ಕಾರದ ವಿರುದ್ಧ ಸಿಡಿದೆದ್ದವು.
69 ವರ್ಷದ ಇಮ್ರಾನ್ ಖಾನ್ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿದ್ದಾರೆ. 155 ಸದಸ್ಯರನ್ನು ಹೊಂದಿರುವ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧಿಕಾರದಲ್ಲಿ ಉಳಿಯಲು ಕನಿಷ್ಠ 172 ಶಾಸಕರ ಅಗತ್ಯವಿತ್ತು. ಆದರೆ, ವಿರೋಧ ಪಕ್ಷಕ್ಕೆ 175 ಶಾಸಕರ ಬೆಂಬಲವಿದ್ದು, ಪ್ರಧಾನಿ ರಾಜೀನಾಮೆ ನೀಡಬೇಕು ಎಂದು ಜಮಿಯತ್ ಉಲೇಮಾ-ಇ-ಇಸ್ಲಾಮಾ ಫಝಲ್ (ಜೆಯುಐ-ಎಫ್) ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹಮಾನ್ ಹೇಳಿದ್ದರು. ಆದರೆ, ಇಮ್ರಾನ್ ಖಾನ್ ರಾಜೀನಾಮೆ ನೀಡಲಿಲ್ಲ, ವಿಶ್ವಾಸ ಮತ ಕಳೆದುಕೊಂಡು, ಪ್ರಧಾನಿ ಪಟ್ಟದಿಂದ ಕೆಳಗಿಳಿದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications