ಪಾಕಿಸ್ತಾನಕ್ಕೆ ಮುಗಿಯದ ತಲೆನೋವು, ಚುನಾವಣಾ ಆಯುಕ್ತರಿಗೆ ಕಂಟಕ?
ಪಾಕಿಸ್ತಾನ ಉದ್ಧಾರ ಆಗಲ್ಲ ಅನ್ನೋದಕ್ಕೆ ಹಲವು ಸಾಕ್ಷ್ಯಗಳು ಸಿಗುತ್ತಿವೆ. ಅದರಲ್ಲೂ ತನ್ನ ದೇಶದಲ್ಲಿ ಒಂದು ಚುನಾವಣೆ ನೀಯತ್ತಾಗಿ ನಡೆಸಲು ಆಗದ ಈ ದೇಶ ಜಗತ್ತಿನಾದ್ಯಂತ ಭಾರಿ ಆಕ್ರೋಶ ಎದುರಿಸುತ್ತಿದೆ. ಹೀಗಿದ್ದಾಗಲೇ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಕ್ಷ ಹೊಸ ಡಿಮ್ಯಾಂಡ್ ಮುಂದಿಟ್ಟಿದೆ.
ಹೌದು ಪಾಕಿಸ್ತಾನದಲ್ಲಿ ಕೆಲ ತಿಂಗಳ ಹಿಂದಷ್ಟೇ ಸಂಸತ್ ಚುನಾವಣೆ ನಡೆಸಲಾಗಿತ್ತು. ಆದರೆ ಈ ಚುನಾವಣೆ ವಿವಾದದ ಗೂಡಾಗಿದ್ದು, ಚುನಾವಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬುದು ಇಮ್ರಾನ್ ಖಾನ್ ಪಕ್ಷದ ಆರೋಪವಾಗಿದೆ. ಹೀಗಿದ್ದಾಗ ಚುನಾವಣಾ ಅಕ್ರಮ ಆರೋಪಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಸಿಕಂದರ್ ಸುಲ್ತಾನ್ ರಾಜಾ ತಕ್ಷಣ ರಾಜೀನಾಮೆ ನೀಡಬೇಕಾಗಿದೆ ಎಂಬ ಬೇಡಿಕೆ ಇಟ್ಟಿದೆ, ಇಮ್ರಾನ್ ಖಾನ್ ಅವರ ಪಕ್ಷ ಪಿಟಿಐ. ಈ ಮೂಲಕ ತಣ್ಣಗಾಗಿದ್ದ ಪಾಕಿಸ್ತಾನ ಚುನಾವಣಾ ಅಕ್ರಮ ವಿಚಾರ ಮತ್ತೊಮ್ಮೆ ಸಂಚಲನ ಸೃಷ್ಟಿಸಿದೆ.

ಪಾಕಿಸ್ತಾನದಲ್ಲಿ ಮತ್ತೆ ಹಿಂಸಾಚಾರ?
ಮುಕ್ತ & ನ್ಯಾಯಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಹೊಣೆ. ಹೀಗಾಗಿ ಸೂಕ್ತ ಕ್ರಮ ಕೈಗೊಂಡು ನ್ಯಾಯಯುತ ಚುನಾವಣೆ ನಡೆಸಬೇಕಿತ್ತು. ಆದರೆ ಪಾಕಿಸ್ತಾನದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಇಮ್ರಾನ್ ಪಕ್ಷದ ಸಂಸದರು ಆರೋಪ ಮಾಡಿದ್ದಾರೆ. ಇದೇ ವಿಚಾರ ಮತ್ತೊಮ್ಮೆ ಪಾಕಿಸ್ತಾನದಲ್ಲಿ ಹಿಂಸಾಚಾರ ಭುಲೇಳುವಂತೆ ಮಾಡುತ್ತಾ? ಎಂಬ ಆತಂಕ ಹುಟ್ಟುಹಾಕಿದೆ.
ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷದ ಮುಖಂಡರು ಹಾಗೂ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಸದಸ್ಯರು ಈ ಬಗ್ಗೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. 2024ರ ಫೆಬ್ರವರಿ ತಿಂಗಳಲ್ಲಿ ಬೃಹತ್ ಹೋರಾಟ ನಡೆಸಿದ್ದರು. 265 ಸದಸ್ಯ ಬಲದ, ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪಿಟಿಐ ಪಕ್ಷವು 93 ಸ್ಥಾನದಲ್ಲಿ ಜಯ ಸಾಧಿಸಿದೆ. ಭಾರತದ ಮಾದರಿ, ಪಾಕ್ ಕೂಡ ಚುನಾವಣೆ ಎದುರಿಸುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications